AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಮಳೆ ಆರ್ಭಟ: ನೀರಲ್ಲಿ ತೇಲುತ್ತಿದೆ ಸರ್ಕಾರಿ ಶಾಲೆ, ಆತಂಕದಲ್ಲೇ ಪಾಠ ಕೇಳುವ ಸ್ಥಿತಿ

ಕಳೆದ‌ ಎರಡು ದಿನಗಳಿಂದ‌ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಇಂಥಾದೊಂದು ದುಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನೀರು ತುಂಬಿ ಶಾಲೆಯೊಳಗೆ ಹರಿಯುತ್ತಿದೆ.

ಕೋಲಾರದಲ್ಲಿ ಮಳೆ ಆರ್ಭಟ: ನೀರಲ್ಲಿ ತೇಲುತ್ತಿದೆ ಸರ್ಕಾರಿ ಶಾಲೆ, ಆತಂಕದಲ್ಲೇ ಪಾಠ ಕೇಳುವ ಸ್ಥಿತಿ
ಸರ್ಕಾರಿ ಶಾಲೆಯ ಕೊಠಡಿಯೊಳಗೆ ನುಗ್ಗಿದ ನೀರು
TV9 Web
| Edited By: |

Updated on:Aug 02, 2022 | 4:43 PM

Share

ಕೋಲಾರ : ಕೋಲಾರ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯ(Kolar Rain) ಪರಿಣಾಮ ಶಾಲೆಯೊಳಗೆ ನೀರು ತುಂಬಿದೆ. ಮಕ್ಕಳು ನೀರಿನಲ್ಲೇ ಕುಳಿತು ಪಾಠ ಕೇಳುವ ಸ್ಥಿತಿ ಎದುರಾಗಿದೆ. ಇಂಥಾದೊಂದು ದುಸ್ಥಿತಿ ಎದುರಾಗಿರೋದು ಕೋಲಾರ ನಗರದ ಕುರುಬರಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಕಳೆದ‌ ಎರಡು ದಿನಗಳಿಂದ‌ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಇಂಥಾದೊಂದು ದುಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನೀರು ತುಂಬಿ ಶಾಲೆಯೊಳಗೆ ಹರಿಯುತ್ತಿದೆ. ಈ ಪರಿಣಾಮ ಶಾಲೆಯಲ್ಲಿದ್ದ ಪಠ್ಯಪುಸ್ತಕಗಳು ಎಲ್ಲವೂ ನೀರಿನಲ್ಲಿ ನೆನೆದು ಹೋಗಿದೆ. ಅಲ್ಲದೆ ಶಾಲೆಯ ಕಟ್ಟಡ ಹಳೆಯದಾಗಿರುವುದರಿಂದ ಶಾಲೆಯ ಮೇಲ್ಚಾವಣಿ ಕೂಡಾ ಕುಸಿಯುತ್ತಿದೆ. ಹಾಗಾಗಿ ಮಕ್ಕಳು ಆತಂಕದಲ್ಲಿ ಪಾಠ ಕೇಳುವ ಸ್ಥಿತಿ ಇದೆ. kolar rain

ಇನ್ನು ಶಾಲೆಯಲ್ಲಿ ಒಟ್ಟು 67 ಜನ ಮಕ್ಕಳಿದ್ದು ಆರು ಕೊಠಡಿಗಳಲ್ಲಿ ಸದ್ಯ ಕೇವಲ ಎರಡು ಕೊಠಡಿಗಳು ಮಾತ್ರ ಚೆನ್ನಾಗಿವೆ. ಉಳಿದ ಕೊಠಡಿಗಳೆಲ್ಲಾ ಮಳೆಯ ಹೊಡೆತಕ್ಕೆ ಕುಸಿಯುವ ಸ್ಥಿತಿಗೆ ತಲುಪಿದೆ. ಸದ್ಯ ಶಾಲೆಯ ಮಕ್ಕಳು ಆತಂಕದಲ್ಲಿ ಪಾಠ ಕೇಳುವ ಸ್ಥಿತಿ ತಲುಪಿದ್ದು ಕೂಡಲೇ ಸಂಬಂಧಪಟ್ಟವರು ಶಾಲೆಯ ಕಾಯಕಲ್ಪ ಒದಗಿಸಬೇಕು ಎಂದು ಸ್ಥಳೀಯರು, ಪೋಷಕರು ಆಗ್ರಹಿಸಿದ್ದಾರೆ. ಸರ್ಕಾರಿ ಶಾಲೆಯನ್ನು ಉಳಿಸಬೇಕು ಎಂದು ಅಭಿಯಾನಗಳನ್ನು ಮಾಡುವ ಸರ್ಕಾರ ಒಮ್ಮೆ ಇತ್ತ ನೋಡಬೇಕು. ಸರ್ಕಾರಿ ಶಾಲೆಯ ಸ್ಥಿತಿ ಮುಳುಗಿದ ದೋಣಿಯಂತಾದರೂ ಯಾವ ಕ್ರಮಕ್ಕೂ ಮುಂದೆ ಬಂದಿಲ್ಲ. ಕಳೆದ ಕೆಲ ದಿನಗಳಿಂದ ಮಕ್ಕಳು ನೀರಿನಲ್ಲೇ ಕುಳಿತು ಪಾಠ ಕೇಳುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ವರದಿ: ರಾಜೇಂದ್ರ ಸಿಂಹ, ಟಿವಿ9 ಕೋಲಾರ

Published On - 4:43 pm, Tue, 2 August 22

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ