AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಮಳೆ ಆರ್ಭಟ: ನೀರಲ್ಲಿ ತೇಲುತ್ತಿದೆ ಸರ್ಕಾರಿ ಶಾಲೆ, ಆತಂಕದಲ್ಲೇ ಪಾಠ ಕೇಳುವ ಸ್ಥಿತಿ

ಕಳೆದ‌ ಎರಡು ದಿನಗಳಿಂದ‌ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಇಂಥಾದೊಂದು ದುಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನೀರು ತುಂಬಿ ಶಾಲೆಯೊಳಗೆ ಹರಿಯುತ್ತಿದೆ.

ಕೋಲಾರದಲ್ಲಿ ಮಳೆ ಆರ್ಭಟ: ನೀರಲ್ಲಿ ತೇಲುತ್ತಿದೆ ಸರ್ಕಾರಿ ಶಾಲೆ, ಆತಂಕದಲ್ಲೇ ಪಾಠ ಕೇಳುವ ಸ್ಥಿತಿ
ಸರ್ಕಾರಿ ಶಾಲೆಯ ಕೊಠಡಿಯೊಳಗೆ ನುಗ್ಗಿದ ನೀರು
TV9 Web
| Edited By: ಆಯೇಷಾ ಬಾನು|

Updated on:Aug 02, 2022 | 4:43 PM

Share

ಕೋಲಾರ : ಕೋಲಾರ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯ(Kolar Rain) ಪರಿಣಾಮ ಶಾಲೆಯೊಳಗೆ ನೀರು ತುಂಬಿದೆ. ಮಕ್ಕಳು ನೀರಿನಲ್ಲೇ ಕುಳಿತು ಪಾಠ ಕೇಳುವ ಸ್ಥಿತಿ ಎದುರಾಗಿದೆ. ಇಂಥಾದೊಂದು ದುಸ್ಥಿತಿ ಎದುರಾಗಿರೋದು ಕೋಲಾರ ನಗರದ ಕುರುಬರಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಕಳೆದ‌ ಎರಡು ದಿನಗಳಿಂದ‌ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಇಂಥಾದೊಂದು ದುಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನೀರು ತುಂಬಿ ಶಾಲೆಯೊಳಗೆ ಹರಿಯುತ್ತಿದೆ. ಈ ಪರಿಣಾಮ ಶಾಲೆಯಲ್ಲಿದ್ದ ಪಠ್ಯಪುಸ್ತಕಗಳು ಎಲ್ಲವೂ ನೀರಿನಲ್ಲಿ ನೆನೆದು ಹೋಗಿದೆ. ಅಲ್ಲದೆ ಶಾಲೆಯ ಕಟ್ಟಡ ಹಳೆಯದಾಗಿರುವುದರಿಂದ ಶಾಲೆಯ ಮೇಲ್ಚಾವಣಿ ಕೂಡಾ ಕುಸಿಯುತ್ತಿದೆ. ಹಾಗಾಗಿ ಮಕ್ಕಳು ಆತಂಕದಲ್ಲಿ ಪಾಠ ಕೇಳುವ ಸ್ಥಿತಿ ಇದೆ. kolar rain

ಇನ್ನು ಶಾಲೆಯಲ್ಲಿ ಒಟ್ಟು 67 ಜನ ಮಕ್ಕಳಿದ್ದು ಆರು ಕೊಠಡಿಗಳಲ್ಲಿ ಸದ್ಯ ಕೇವಲ ಎರಡು ಕೊಠಡಿಗಳು ಮಾತ್ರ ಚೆನ್ನಾಗಿವೆ. ಉಳಿದ ಕೊಠಡಿಗಳೆಲ್ಲಾ ಮಳೆಯ ಹೊಡೆತಕ್ಕೆ ಕುಸಿಯುವ ಸ್ಥಿತಿಗೆ ತಲುಪಿದೆ. ಸದ್ಯ ಶಾಲೆಯ ಮಕ್ಕಳು ಆತಂಕದಲ್ಲಿ ಪಾಠ ಕೇಳುವ ಸ್ಥಿತಿ ತಲುಪಿದ್ದು ಕೂಡಲೇ ಸಂಬಂಧಪಟ್ಟವರು ಶಾಲೆಯ ಕಾಯಕಲ್ಪ ಒದಗಿಸಬೇಕು ಎಂದು ಸ್ಥಳೀಯರು, ಪೋಷಕರು ಆಗ್ರಹಿಸಿದ್ದಾರೆ. ಸರ್ಕಾರಿ ಶಾಲೆಯನ್ನು ಉಳಿಸಬೇಕು ಎಂದು ಅಭಿಯಾನಗಳನ್ನು ಮಾಡುವ ಸರ್ಕಾರ ಒಮ್ಮೆ ಇತ್ತ ನೋಡಬೇಕು. ಸರ್ಕಾರಿ ಶಾಲೆಯ ಸ್ಥಿತಿ ಮುಳುಗಿದ ದೋಣಿಯಂತಾದರೂ ಯಾವ ಕ್ರಮಕ್ಕೂ ಮುಂದೆ ಬಂದಿಲ್ಲ. ಕಳೆದ ಕೆಲ ದಿನಗಳಿಂದ ಮಕ್ಕಳು ನೀರಿನಲ್ಲೇ ಕುಳಿತು ಪಾಠ ಕೇಳುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ವರದಿ: ರಾಜೇಂದ್ರ ಸಿಂಹ, ಟಿವಿ9 ಕೋಲಾರ

Published On - 4:43 pm, Tue, 2 August 22

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್