AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟ; ಎದುರಿನ ಅಂಗಡಿಯ ಇಬ್ಬರಿಗೆ ಗಾಯ

ಗಾಯಾಳುಗಳನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಐದಾರು ಅಕ್ಕ ಪಕ್ಕದ ಅಂಗಡಿಗಳಿಗೆ ಹಾನಿ ಉಂಟಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಕೋಲಾರ: ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟ; ಎದುರಿನ ಅಂಗಡಿಯ ಇಬ್ಬರಿಗೆ ಗಾಯ
ಕೋಲಾರ: ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟ
TV9 Web
| Edited By: |

Updated on:Jan 23, 2022 | 8:24 AM

Share

ಕೋಲಾರ: ಹೋಟೆಲ್​​ನಲ್ಲಿ ಸಿಲಿಂಡರ್​​​​ ಸ್ಫೋಟಗೊಂಡು ಇಬ್ಬರಿಗೆ ಗಾಯವಾದ ದುರ್ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಬಜಾರ್ ರಸ್ತೆಯಲ್ಲಿ ನಡೆದಿದೆ. ಪ್ರಸಾದ್ ದೋಸೆ ಕ್ಯಾಂಪ್‌ ಹೋಟೆಲ್​ನಲ್ಲಿ ಸಿಲಿಂಡರ್​ ಬ್ಲಾಸ್ಟ್ ಆಗಿ ಅವಘಡ ಸಂಭವಿಸಿದೆ. ಸಿಲಿಂಡರ್ ಸೋರಿಕೆಯಿಂದ ಬೆಂಕಿ ತಗುಲಿ ಅಗ್ನಿ ಅಪಘಾತ ಉಂಟಾಗಿದೆ ಎಂದು ಮಾಹಿತಿ ಲಭಿಸಿದೆ. ಸ್ಫೋಟದ ರಭಸಕ್ಕೆ ಶೆಟರ್ಸ್​​​​ ಕಿತ್ತುಕೊಂಡು ಇಬ್ಬರಿಗೆ ಗಾಯ ಆಗಿದೆ.

ಹೊಟೇಲ್​ನ ಎದುರಿನ ಅಂಗಡಿಯ ಶಿವ ಹಾಗೂ ಪಾರ್ಥಸಾರಥಿಗೆ ಗಾಯ ಆಗಿದೆ. ಗಾಯಾಳುಗಳನ್ನು ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಐದಾರು ಅಕ್ಕ ಪಕ್ಕದ ಅಂಗಡಿಗಳಿಗೆ ಹಾನಿ ಉಂಟಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಅಪರಾಧ, ಅಪಘಾತ ಸುದ್ದಿಗಳು

ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರಿನಲ್ಲಿ ಬಸ್​​ನಲ್ಲಿ ಮದ್ಯದ ಅಮಲಿನಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಯುವಕನಿಗೆ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಮದ್ಯದ ಅಮಲಿನಲ್ಲಿ ಇದ್ದ ವ್ಯಕ್ತಿಗೆ ಮಹಿಳೆ ಥಳಿಸಿದ ಘಟನೆ ನಡೆದಿದೆ. ವಿಜಯಪುರದಿಂದ ಹುಬ್ಬಳ್ಳಿಗೆ ಹೊರಟಿದ್ದ ಬಸ್​ನಲ್ಲಿ ವ್ಯಕ್ತಿ ಅನುಚಿತ ವರ್ತನೆ ತೋರಿದ್ದ. ಆತನಿಗೆ ಮಹಿಳೆ ಚಪ್ಪಲಿ ಏಟು ಕೊಟ್ಟು ಕಳಿಸಿದ್ದಾರೆ.

ಬೀದರ್: ಇಲ್ಲಿನ ಕಮಲನಗರ ತಾಲೂಕು ಕೇಂದ್ರದ ಬಳಿ ರೈಲಿಗೆ ತಲೆಕೊಟ್ಟು ಅಪರಿಚಿತ ವೃದ್ಧ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ಜೀವನದಲ್ಲಿ ಜುಗುಪ್ಸೆಗೊಂಡು ವೃದ್ಧ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಕೊಪ್ಪಳ: ತಾಲೂಕಿನ ಶಹಪೂರ ಗ್ರಾಮದ ಬಳಿ ಬೈಕ್​​ಗೆ ಲಾರಿ ಡಿಕ್ಕಿಯಾಗಿ ಶಹಪುರ ಗ್ರಾಮದ ಭೋಜಪ್ಪ (28) ಎಂಬವರು ಮೃತಪಟ್ಟಿದ್ದಾರೆ. ಭೋಜಪ್ಪ ಅಪಘಾತ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಸರ್ವಿಸ್ ರಸ್ತೆ ಇಲ್ಲದಿರುವುದು ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಗ್ರಾಮಸ್ಥರ ಪ್ರತಿಭಟನೆ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಸಿನಿಮೀಯ ಶೈಲಿಯಲ್ಲಿ ಭೀಕರ ರಸ್ತೆ ಅಪಘಾತ; ಖ್ಯಾತ​ ನಟ ಬಚಾವ್​, ವೈರಲ್​ ಆಯ್ತು ಫೋಟೋ

ಇದನ್ನೂ ಓದಿ: ಮುಂಬೈ: ಟಾರ್ಡಿಯೋದ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ; ಏಳು ಜನರ ದುರ್ಮರಣ

Published On - 8:30 pm, Sat, 22 January 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!