AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವರ್ ಮಿನಿಸ್ಟರ್​ಗೆ ತಟ್ಟಿದ ಕರೆಂಟ್ ಸಮಸ್ಯೆ, ಸಭೆ ನಡೆಸುತ್ತಿರುವಾಗಲೇ ವಿದ್ಯುತ್ ಕಣ್ಣಾಮುಚ್ಚಾಲೆ

ಅವರು ಇಂಧನ ಸಚಿವರು, ಇಡೀ ರಾಜ್ಯದ ಪವರ್ ಸಪ್ಲೈ ಅವರ ಕೈಲಿರುತ್ತದೆ. ಆದರೆ, ಅಂಥಹ ಪವರ್ ಮಿನಿಸ್ಟರ್​ಗೆ ವಿದ್ಯುತ್ ಕೈಕೊಟ್ಟರೆ ಹೇಗಿರಬೇಡ, ಹೌದು, ಅದು ಒಂದಲ್ಲ, ಎರಡಲ್ಲ ಮೂರ್ನಾಲ್ಕು ಬಾರಿ ವಿದ್ಯುತ್​ ಕಟ್​ ಆಗಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಪವರ್ ಮಿನಿಸ್ಟರ್​ಗೆ ತಟ್ಟಿದ ಕರೆಂಟ್ ಸಮಸ್ಯೆ, ಸಭೆ ನಡೆಸುತ್ತಿರುವಾಗಲೇ ವಿದ್ಯುತ್ ಕಣ್ಣಾಮುಚ್ಚಾಲೆ
ಇಂಧನ ಸಚಿವರ ಸಭೆಯಲ್ಲಿಯೇ ಪವರ್​ ಕ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Aug 30, 2024 | 7:06 PM

Share

ಕೋಲಾರ, ಆ.30: ಕೋಲಾರದಲ್ಲಿಂದು ಇಂಧನ‌ ಸಚಿವ ಕೆ.ಜೆ.ಜಾರ್ಜ್ ಪ್ರವಾಸ ಹಮ್ಮಿಕೊಂಡಿದ್ದರು. ಬೆಳಗ್ಗೆ 10.30 ಗಂಟೆಗೆ ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಚಿವ ಕೆ.ಜೆ.ಜಾರ್ಜ್(K.J George)ಆಗಮಿಸಿದ್ದರು. ಸಚಿವರು ಬರುತ್ತಿದ್ದಂತೆ ಕಾಂಗ್ರೆಸ್ ಕಚೇರಿಯಲ್ಲಿ ವಿದ್ಯುತ್ ಕಟ್ ಆಯಿತು. ಅಕಸ್ಮಿಕವಾಗಿ ವಿದ್ಯುತ್ ಹೋಗಿರಬಹುದು ಎಂದು ಅರಿತ ಸಚಿವರು, ಸಭೆಯನ್ನು ಮುಂದುವರಿಸಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ ಸಭೆ ಮುಗಿಸಿದರೂ ವಿದ್ಯುತ್ ಬರಲೇ ಇಲ್ಲ. ಬಳಿಕ ಜಿಲ್ಲಾ ಪಂಚಾಯತ್ ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಕೂಡ ವಿದ್ಯುತ್​ ಹೋಗಿ ಬಂತು. ವಿದ್ಯುತ್ ಕಣ್ಣಾಮುಚ್ಚಾಲೆ ಆಟಕ್ಕೆ ಬೇಸತ್ತ ಸಚಿವ ಕೆ.ಜೆ.ಜಾರ್ಜ್, ‘ಬೆಸ್ಕಾಂ ಅಧಿಕಾರಿಗಳಿಗೆ ಸಭೆಯಲ್ಲಿಯೇ ಕ್ಲಾಸ್ ತೆಗೆದುಕೊಂಡರು.‌

ನಂತರ ಬೆಂಗಳೂರಿಗೆ ಹೋಗುವಾಗ ಇಇ ಶೋಭಾ ಅವರನ್ನು ತೀವ್ರ ತರಾಟೆ ತೆಗೆದುಕೊಂಡರು.‌ ಈ ಸಂದರ್ಭದಲ್ಲಿ ಅಧಿಕಾರಿಗಳು ಸಮಾಧಾನ ಪಡಿಸಿದರು‌. ಇನ್ನು ವಿದ್ಯುತ್ ಕಿರಿಕಿರಿ‌ ಬಗ್ಗೆ ನಾನು ಅಡ್ಜೆಸ್ಟ್ ಮಾಡಿಕೊಳ್ಳುವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದಾಗ ವಿದ್ಯುತ್ ಸಮಸ್ಯೆ ಆಗಬಾರದು. ಕೂಡಲೇ ಈ‌ ಬಗ್ಗೆ ಎಚ್ಚೇತ್ತುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಬೆಂಗಳೂರು: ಇಂಧನ ಸಚಿವ ಕೆಜೆ ಜಾರ್ಜ್ ಭಾಗಿಯಾಗಿರುವ ಕಾರ್ಯಕ್ರಮದಲ್ಲೇ ಪವರ್​ಕಟ್; ಇಲ್ಲಿದೆ ವಿಡಿಯೋ

ಇನ್ನು ಸಭೆಯಲ್ಲಿ ವಿದ್ಯುತ್ ಹೋಗಿ ಬರುತ್ತಿದ್ದರಿಂದ ಅಧಿಕಾರಿಗಳು ಮತ್ತು ಜನರ ಮುಂದೆ ಮುಜಗರಕ್ಕೀಡಾದ ಸಚಿವ ಕೆ.ಜೆ.ಜಾರ್ಜ್, ರಾಜ್ಯದಲ್ಲಿ ಎಲ್ಲೂ ವಿದ್ಯುತ್ ಸಮಸ್ಯೆ‌ ಇಲ್ಲ,‌. ಸಮರ್ಪಕವಾಗಿ ವಿದ್ಯುತ್​ನ್ನು ಎಲ್ಲೆಡೆ ಸರಬರಾಜು ಮಾಡಲಾಗುತ್ತಿದೆ. ಇಲ್ಲಿ ಸಹ ವಿದ್ಯುತ್ ಸಮಸ್ಯೆ ಇಲ್ಲ, ಓವರ್ ಲೋಡ್​​ನಿಂದ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಯುಪಿಎಸ್​ಗೆ ಸಂಪರ್ಕ ನೀಡಿದ್ದರಿಂದ ವಿದ್ಯುತ್ ಟ್ರಿಪ್ ಆಗಿದೆ ಎಂದು ಸಮರ್ಥನೆ ನೀಡಿದರು. ಜೊತೆಗೆ ಅಧಿಕಾರಿಯನ್ನು ಕರೆದು ಮಾಧ್ಯಮಗಳಿಗೆ ವಿವರಣೆ ನೀಡುವಂತೆ ಬೆಸ್ಕಾಂ ಅಧಿಕಾರಿಗೆ ತಿಳಿಸಿದರು.

ನಮ್ಮ ಬೆಸ್ಕಾಂನಿಂದ ಸಮಸ್ಯೆ ಆಗಿಲ್ಲ, ಜನರೇಟರ್ ಮೂಲಕ ವಿದ್ಯುತ್ ಸಂಪರ್ಕ ಕೊಟ್ಡಿದ್ದರಿಂದ ಸಮಸ್ಯೆ ಆಗಿದೆ ಎಂದು ಸಚಿವರ ಮುಂದೆ‌ ಅಧಿಕಾರಿ ಸಮಜಾಯಿಸಿ ‌ನೀಡಿದರು. ಒಟ್ಟಾರೆ ಇಂದನ‌ ಸಚಿವ‌ ಜಾರ್ಜ್​ಗೆ ಬೆಸ್ಕಾಂ ಅಧಿಕಾರಿಗಳ ಎಡವಟ್ಟುನಿಂದ ಕರೆಂಟ್ ಶಾಕ್ ಕೊಡುವ ಮೂಲಕ ಮುಜಗರಕ್ಕೀಡು ಮಾಡಿದ್ದಂತೂ ಸುಳ್ಳಲ್ಲ. ಘಟನೆ ಸಂಬಂಧ ಸರ್ಕಾರಕ್ಕೂ ಮುಜಗರವಾಗಿದ್ದು, ಅಧಿಕಾರಿಗಳ ವಿರುದ್ದ ಕ್ರಮ ಆಗುತ್ತಾ ಎನ್ನುವುದನ್ನ ಕಾದು ನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Fri, 30 August 24

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್