AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಘದೂತ್ ಆ್ಯಪ್: ಸ್ಥಳೀಯ ಹವಾಮಾನ ಮೂನ್ಸೂಚನೆಯನ್ನು ಪ್ರಾದೇಶಿಕ ಭಾಷೆಯಲ್ಲಿ ರೈತರಿಗೆ ತಲುಪಿಸುವ ಪ್ರಯತ್ನ

ರೈತರು ಮಾಡುವ ಕೃಷಿ ಚಟುವಟಿಕೆಗಳು ಶೇ.40 ರಷ್ಟು ಮಾತ್ರ ಬೆಳೆಯ ಮೇಲೆ ಪರಿಣಾಮ ಬೀರುತ್ತವೆ. ಉಳಿದ ಶೇ. 60 ರಷ್ಟು ಹವಾಮಾನ ಅಂಶಗಳಿಂದ ಕೂಡಿರುತ್ತವೆ ಹಾಗಾಗಿ ಇಂತಹ ಆ್ಯಪ್ ಬಳಕೆಯಿಂದ ರೈತರಿಗೆ ಇದು ಸಹಕಾರಿಯಾಗಲಿದೆ ಎಂದು ಕೆವಿಕೆ ವಿಜ್ಞಾನಿಗಳಾದ ಸ್ವಾತಿ ತಿಳಿಸಿದ್ದಾರೆ.

ಮೇಘದೂತ್ ಆ್ಯಪ್: ಸ್ಥಳೀಯ ಹವಾಮಾನ ಮೂನ್ಸೂಚನೆಯನ್ನು ಪ್ರಾದೇಶಿಕ ಭಾಷೆಯಲ್ಲಿ ರೈತರಿಗೆ ತಲುಪಿಸುವ ಪ್ರಯತ್ನ
ಕೃಷಿ ವಿಜ್ಞಾನ ಕೇಂದ್ರ
TV9 Web
| Edited By: |

Updated on: Sep 15, 2021 | 8:22 AM

Share

ಕೋಲಾರ : ಕೃಷಿಗೆ ಸಂಬಂಧಪಟ್ಟಂತೆ ರೈತರು ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ. ಮಳೆ ಬಿತ್ತನೆ ಬೀಜ, ರಸಗೊಬ್ಬರ ಹೀಗೆ ನಾನಾ ಆತಂಕಗಳು ರೈತರ ಮುಂದೆ ಇದೆ. ಹೀಗಾಗಿಯೇ ರೈತರಿಗೆ ನೆರವು ನೀಡಲು ವಿಶೇಷ ಆ್ಯಪ್ ಒಂದನ್ನು ತಯಾರಿಸಲಾಗಿದೆ. ಮೋಡ, ಮಳೆ ಹಾಗೂ ಬಿತ್ತನೆ ಕುರಿತಂತೆ ರೈತರಿಗೆ ಅವಶ್ಯಕವಾಗಿರುವ ಭವಿಷ್ಯದ ಮಾಹಿತಿಯನ್ನು ರೈತರ ಅಂಗೈನಲ್ಲೇ ಕೊಡುವ ಆ್ಯಪ್ (App) ಇದಾಗಿದೆ. ಇದರಿಂದ ರೈತರು ಆಕಾಶ ನೋಡಿ, ಮೋಡ, ಮಳೆ ನೋಡಿ ಕೆಲಸ ಮಾಡುವಂತಿಲ್ಲ ತಮ್ಮ ಮೊಬೈಲ್ ನೋಡಿಯೇ ಎಲ್ಲಾ ಮಾಹಿತಿ ತಿಳಿದುಕೊಳ್ಳಬಹುದು.

ಕೃಷಿ ಆಧಾರಿತ ಮತ್ತು ಸ್ಥಳೀಯ ಹವಾಮಾನ ಮೂನ್ಸೂಚನೆಯನ್ನು ಪ್ರಾದೇಶಿಕ ಭಾಷೆಯಲ್ಲಿ ರೈತರಿಗೆ ತಲುಪಿಸುವ ಪ್ರಯತ್ನ ಇದಾಗಿದೆ. ಇದಕ್ಕೆ ಭಾರತೀಯ ಹವಾಮಾನ ಇಲಾಖೆ ಹಾಗೂ ಭಾರತೀಯ ಸಂಶೋಧನಾ ಮಂಡಳಿ ಜಂಟಿಯಾಗಿ ಮೇಘದೂತ್ ಆ್ಯಪ್ ತಯಾರಿಸಿದೆ. ರೈತರು ಬೆಳೆಯುವ ಬೆಳೆಗಳಲ್ಲಿ ಅಧಿಕ ಇಳುವರಿ ಪಡೆಯಲು ಹವಾಮಾನ ಹಾಗೂ ಕೃಷಿ ಚಟುವಟಿಕೆಗಳು ಸಮತೋಲನದಿಂದ ಕೂಡಿರಬೇಕು ಹಾಗಾಗಿ ಇದರಿಂದ ಪ್ರೇರಿತರಾದ ಇಲಾಖೆಗಳು ಇಂತಹ ಆ್ಯಪ್​ ಒಂದನ್ನು ರೈತರಿಗಾಗಿ ಮಾಡಿದ್ದಾರೆ.

ರೈತರು ಮಾಡುವ ಕೃಷಿ ಚಟುವಟಿಕೆಗಳು ಶೇ.40 ರಷ್ಟು ಮಾತ್ರ ಬೆಳೆಯ ಮೇಲೆ ಪರಿಣಾಮ ಬೀರುತ್ತವೆ. ಉಳಿದ ಶೇ. 60 ರಷ್ಟು ಹವಾಮಾನ ಅಂಶಗಳಿಂದ ಕೂಡಿರುತ್ತವೆ ಹಾಗಾಗಿ ಇಂತಹ ಆ್ಯಪ್ ಬಳಕೆಯಿಂದ ರೈತರಿಗೆ ಇದು ಸಹಕಾರಿಯಾಗಲಿದೆ ಎಂದು ಕೆವಿಕೆ ವಿಜ್ಞಾನಿಗಳಾದ ಸ್ವಾತಿ ತಿಳಿಸಿದ್ದಾರೆ.

ಕೇಂದ್ರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾ ಕೃಷಿ ಹವಾಮಾನ ಘಟಕ ಸ್ಥಾಪನೆ ಮಾಡಿದ್ದು, ಸ್ವಯಂ ಚಾಲಿತವಾಗಿ ಈ ಹವಾಮಾನ ಉಪಕರಣ ರೈತರಿಗೆ ಮಾಹಿತಿ ನೀಡಲಿದೆ. ಇದು 5 ಕೀಮೀ ವ್ಯಾಪ್ತಿಯಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನ, ತೇವಾಂಶ, ಗಾಳಿಯ ವೇಗ ಮತ್ತು ದಿಕ್ಕು, ಮಣ್ಣಿನ ತೇವಾಂಶ ಮತ್ತು ಉಷ್ಣಾಂಶ, ಮಳೆ ಪ್ರಮಾಣದ ಕುರಿತು ಪ್ರತಿನಿತ್ಯ 15 ನಿಮಿಷಕ್ಕೊಮ್ಮೆ ಮಾಹಿತಿ ನೀಡುತ್ತದೆ.

ಇದು ಮುಂದಿನ 5 ದಿನಗಳ ಹವಾಮಾನದ ಸ್ಥಿತಿಗತಿ, ಆ ಹವಾಮಾನ ಅಂಶಗಳಿಗೆ ಸರಿಯಾಗಿ ರೈತರು ಬೆಳೆಗಳಲ್ಲಿ ಕೈಗೊಳ್ಳಬೇಕಾದ ನಿರ್ವಹಣಾ ಕ್ರಮಗಳನ್ನು ಫೇಸ್​ಬುಕ್​ ಹಾಗೂ ವಾಟ್ಸಾಪ್ ಮೂಲಕ ಮಾಹಿತಿ ನೀಡುತ್ತದೆ. ಇದು ಸ್ಥಳೀಯವಾಗಿ ಹವಾಮಾನ ಮುನ್ಸೂಚನೆ ನೀಡುತ್ತದೆ. ಈಗಾಗಲೆ ಹವಾಮಾನ ವೈಪರೀತ್ಯದಿಂದ ರೈತರು ತಾವು ಬೆಳೆದ ಬೆಳೆಗಳನ್ನು ಕಳೆದುಕೊಂಡು ಪರದಾಡುವ ಸ್ಥಿತಿ ಬಂದಿದೆ, ಇದರಿಂದ ರೈತರನ್ನು ತಪ್ಪಿಸಿ, ಕೃಷಿಯನ್ನು ಲಾಭದಾಯಕವಾಗಿಸಲು ಇದು ಅನುಕೂಲಕರವಾಗಿದೆ ಎಂದು ರೈತ ನಾರಾಯಣಗೌಡ ತಿಳಿಸಿದ್ದಾರೆ.

ಒಟ್ಟಾರೆ ಶ್ರಮ ವಹಿಸಿ ಬೆಳೆ ಬೆಳೆಯುವ ರೈತರಿಗೆ ತಮ್ಮ ಬೆಳೆಯನ್ನು ಹವಾಮಾನ ವೈಪರೀತ್ಯದಿಂದ ಉಳಿಸಿಕೊಳ್ಳುವುದೇ ಒಂದು ಸವಾಲು. ಇಂಥಹ ಸಂದರ್ಭದಲ್ಲಿ ಈ ಆ್ಯಪ್ ನಿಜಕ್ಕೂ ರೈತರಿಗೆ ಒಂದು ಅಂಗೈನಲ್ಲಿರುವ ಹವಾಮಾನ ಇಲಾಖೆ ಅಂದರೆ ತಪ್ಪಾಗುವುದಿಲ್ಲ.

ವರದಿ : ರಾಜೇಂದ್ರ ಸಿಂಹ

ಇದನ್ನೂ ಓದಿ: ಬಿಜಿನೆಸ್​ ಬಿಟ್ಟು ಕೃಷಿಯತ್ತ ವಾಲಿದ ಪದವೀಧರ; ಕೈ ಹಿಡಿದು ಕಾಪಾಡುತ್ತಿದೆ ’ಹಳದಿ ಕಲ್ಲಂಗಡಿ‘

ಕೊವಿಡ್​ ಲಸಿಕೆ ಪಡೆಯಲು ಸುಲಭ ಮಾರ್ಗ ಸೃಷ್ಟಿಸಿದ ಕುಂದಾಪುರದ ಯುವಕ; ಹೊಸ ಆ್ಯಪ್​ ಕಂಡುಹಿಡಿಯುವಲ್ಲಿ ಯಶಸ್ವಿ

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ