AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಜನಜೀವನ ಬದಲಿಸಿದ ಜಲಜೀವನ್ ಮಿಷನ್; ಮನೆಮನೆಗೆ ಹರಿಯುತ್ತಿದ್ದಾಳೆ ಗಂಗೆ

Jal Jeevan mission in Kolar: ಅದು ಕೇಂದ್ರ ಮತ್ತು ರಾಜ್ಯ ಸರ್ಕಾರದ‌ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆ. ಪ್ರತಿಯೊಂದು ಮನೆ ಮನೆಗೂ ಕುಡಿಯುವ ನೀರು ಕೊಡುವ ಮನೆ ಮನೆ‌ ಗಂಗೆ ಯೋಜನೆ. ಕೋಲಾರ ಜಿಲ್ಲೆಯಲ್ಲಿ ಯೋಜನೆ ಪೂರ್ಣಗೊಂಡಿರುವ ಗ್ರಾಮಗಳಲ್ಲಿ ನೀರಿಗಾಗಿ ಪರದಾಡುತ್ತಿದ್ದ ಗ್ರಾಮಗಳಲ್ಲಿ ಮನೆ ಮನೆಗಳಲ್ಲಿ ಈಗ ಗಂಗೆ ಮನೆಯಂಗಳದಲ್ಲಿ ಹರಿಯುತ್ತಿದ್ದಾಳೆ.

ಕೋಲಾರದಲ್ಲಿ ಜನಜೀವನ ಬದಲಿಸಿದ ಜಲಜೀವನ್ ಮಿಷನ್; ಮನೆಮನೆಗೆ ಹರಿಯುತ್ತಿದ್ದಾಳೆ ಗಂಗೆ
ಜಲಜೀವನ್ ಮಿಷನ್ ಯೋಜನೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 27, 2024 | 11:01 PM

Share

ಕೋಲಾರ, ನವೆಂಬರ್ 27: ಕೋಲಾರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ್​ ಮಿಷನ್​ ಯೋಜನೆಯ ಕೆಲಸ ಕೋಲಾರ ಜಿಲ್ಲೆಯಲ್ಲಿ ಸಮರ್ಪಕವಾಗಿ ನಡೆಯುತ್ತಿದೆ. ನದಿ ನಾಲೆಗಳಲ್ಲಿಲ್ಲದ ಬಯಲು ಸೀಮೆ ಕೋಲಾರ ಜಿಲ್ಲೆಯಲ್ಲಿ ನೀರಿಗಾಗಿ ಪರದಾಡುತ್ತಿದ್ದ ಜನರಿಗೆ ಜಲಜೀವನ್​ ಮಿಷನ್​ ಯೋಜನೆ ವರವಾಗಿ ಪರಿಣಮಿಸುತ್ತಿದೆ. ಮೊದಲು ಒಂದು ಬಿಂದಿಗೆ ನೀರಿಗಾಗಿ ಗ್ರಾಮದ ಮುಂದಿರುವ ಒಂದು ಕೊಳಾಯಿ ಎದುರು ಗಂಟೆಗಟ್ಟಲು ಕಾದು ಕುಳಿತರಬೇಕಿತ್ತು. ಕರೆಂಟ್​ ಬಂದಾಗ ನೀರು ಬಿಡುತ್ತಿದ್ದ ವಾಟರ್​ ಮ್ಯಾನ್​ ದೇವದೂತನಂತೆ ಅವನು ನೀರು ಬಿಟ್ಟಾಗಿ ಎಲ್ಲರೂ ಕ್ಯೂನಲ್ಲಿ ನಿಂತು ಎರಡೆರಡು ಬಿಂದಿಗೆ ನೀರು ಹಿಡಿದುಕೊಂಡು ಅಷ್ಟೇ ನೀರಿನಲ್ಲಿ ಜೀವನ ಕಳೆಯಬೇಕಿತ್ತು. ಇಂಥ ಪರಿಸ್ಥಿತಿಯಲ್ಲಿದ್ದ ಗ್ರಾಮೀಣ ಭಾಗಗಳಿಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಗ್ರಾಮಗಳ ಮನೆ ಮನೆಗೆ ನೀರು ಒದಗಿಸುವ ಜಲ ಜೀವನ್​ ಮಿಷನ್​ ಯೋಜನೆ ದೊಡ್ಡ ಬದಲಾವಣೆಯನ್ನೇ ತಂದಿದೆ.

ಈ ಯೋಜನೆ ಅಡಿಯಲ್ಲಿ ಮನೆ ಮನೆಗೆ ಗಂಗೆ ಹರಿಯುವಂತೆ ಮಾಡಿದ ಮೇಲೆ ಗ್ರಾಮದ ಮಹಿಳೆಯರು ಕೂಲಿ ಕಾರ್ಮಿಕರು ನೀರಿಗಾಗಿ ಪರದಾಡುವ ಸ್ಥಿತಿ ಬದಲಾಗಿದೆ. ಈಗ ದಿನದ 24 ಗಂಟೆಯೂ ಮನೆಯಂಗಳದ ನಲ್ಲಿಯಲ್ಲಿ ನೀರು ಹರಿಯುತ್ತಿದೆ. ಮೊದಲಿನಂತೆ ಡ್ರಂಗಳಲ್ಲಿ ಹಾಗೂ ನೀರಿನ ತೊಟ್ಟಿಯಲ್ಲಿ ನೀರನ್ನು ಸಂಗ್ರಹಿಸುವ ಅವಶ್ಯಕತೆ ಇಲ್ಲ, ಗ್ರಾಮದಲ್ಲಿರುವ ಓವರ್​ ಹೆಡ್​ ಟ್ಯಾಂಕ್​ನಲ್ಲಿ ನೀರು ಇರುತ್ತದೆ. ಯಾವಾಗ ಬೇಕಾದ್ರು ಮನೆಯ ಅಂಗಳದಲ್ಲಿರುವ ನಲ್ಲಿಯಲ್ಲಿ ನೀರು ಬರುತ್ತಿರುತ್ತದೆ ಎಂದು ಕೋಲಾರ ತಾಲೂಕಿನ ಈಕಂಬಳ್ಳಿ ಗ್ರಾಮದ ಮಹಿಳೆಯರು ಟಿವಿ9 ಕನ್ನಡಕ್ಕೆ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ 1,814 ಗ್ರಾಮಗಳನ್ನು ಜಲಜೀವನ‌ ಮಿಷನ್​ ಯೋಜನೆಯಲ್ಲಿ ಆಯ್ಕೆ ಮಾಡಲಾಗಿದೆ, ಈ ಪೈಕಿ ಈಗಾಗಲೇ 1,508 ಗ್ರಾಮಗಳಲ್ಲಿ ಯೋಜನೆಗೆ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. 1,002 ಗ್ರಾಮಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಈಗಾಗಲೇ ಜಿಲ್ಲೆಯ 100 ಗ್ರಾಮಗಳಲ್ಲಿ ಯೋಜನೆ ಪೂರ್ಣಗೊಂಡಿದೆ. ನಾಲ್ಕನೇ ಹಂತದ ಕಾಮಗಾರಿಯಲ್ಲಿ ಮಾತ್ರ ಕೆಲವೊಂದು ಸಣ್ಣ ಪುಟ್ಟ ತಾಂತ್ರಿಕ ತೊಂದರೆಗಳು ಇದೆ. ಈ ಹಿನ್ನೆಲೆಯಲ್ಲಿ ನಾಲ್ಕನೇ ಹಂತತ ಯೋಜನೆಗೂ ಆಡಳಿತಾತ್ಮಕ ಕೆಲಸಗಳು ಪೂರ್ಣಗೊಳ್ಳುತ್ತಿವೆ. ಈ ಮಾಹಿತಿಯನ್ನು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ನೀಡಿದ್ದಾರೆ.

ಇದನ್ನೂ ಓದಿ: ಕುಮಟಾ- ಶಿರಸಿ ರಸ್ತೆ ಸಂಚಾರ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಬಂದ್

ಒಟ್ಟಾರೆ ಗ್ರಾಮ ಗ್ರಾಮದ ಜನರಿಗೆ ಶುದ್ದ ಕುಡಿಯುವ ನೀರು ಸಿಗಬೇಕು ಕುಡಿಯುವ ನೀರಿಗಾಗಿ ಯಾವೊಬ್ಬ ಭಾರತೀಯನು ಪರದಾಡ ಬಾರದು ಅನ್ನೋ ಉದ್ದೇಶದಿಂದ ಮಾಡಲಾದ ಜಲಜೀವನ್ ಮಿಷನ್ ಯೋಜನೆ ಕೋಲಾರದಲ್ಲಿ ಸಾಕಾರಗೊಂಡಿದೆ. ಈ ಯೋಜನೆ ಪೂರ್ಣಗೊಂಡಿರುವ ಗ್ರಾಮಗಳಲ್ಲಿ ಜನರು ‘ಮನೆ ಮನೆ ಗಂಗೆ’ ಯೋಜನೆಗೆ ಮನಸೋತಿರುವುದು ಹೌದು.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್