AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಜನಜೀವನ ಬದಲಿಸಿದ ಜಲಜೀವನ್ ಮಿಷನ್; ಮನೆಮನೆಗೆ ಹರಿಯುತ್ತಿದ್ದಾಳೆ ಗಂಗೆ

Jal Jeevan mission in Kolar: ಅದು ಕೇಂದ್ರ ಮತ್ತು ರಾಜ್ಯ ಸರ್ಕಾರದ‌ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆ. ಪ್ರತಿಯೊಂದು ಮನೆ ಮನೆಗೂ ಕುಡಿಯುವ ನೀರು ಕೊಡುವ ಮನೆ ಮನೆ‌ ಗಂಗೆ ಯೋಜನೆ. ಕೋಲಾರ ಜಿಲ್ಲೆಯಲ್ಲಿ ಯೋಜನೆ ಪೂರ್ಣಗೊಂಡಿರುವ ಗ್ರಾಮಗಳಲ್ಲಿ ನೀರಿಗಾಗಿ ಪರದಾಡುತ್ತಿದ್ದ ಗ್ರಾಮಗಳಲ್ಲಿ ಮನೆ ಮನೆಗಳಲ್ಲಿ ಈಗ ಗಂಗೆ ಮನೆಯಂಗಳದಲ್ಲಿ ಹರಿಯುತ್ತಿದ್ದಾಳೆ.

ಕೋಲಾರದಲ್ಲಿ ಜನಜೀವನ ಬದಲಿಸಿದ ಜಲಜೀವನ್ ಮಿಷನ್; ಮನೆಮನೆಗೆ ಹರಿಯುತ್ತಿದ್ದಾಳೆ ಗಂಗೆ
ಜಲಜೀವನ್ ಮಿಷನ್ ಯೋಜನೆ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Nov 27, 2024 | 11:01 PM

ಕೋಲಾರ, ನವೆಂಬರ್ 27: ಕೋಲಾರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಜಲ ಜೀವನ್​ ಮಿಷನ್​ ಯೋಜನೆಯ ಕೆಲಸ ಕೋಲಾರ ಜಿಲ್ಲೆಯಲ್ಲಿ ಸಮರ್ಪಕವಾಗಿ ನಡೆಯುತ್ತಿದೆ. ನದಿ ನಾಲೆಗಳಲ್ಲಿಲ್ಲದ ಬಯಲು ಸೀಮೆ ಕೋಲಾರ ಜಿಲ್ಲೆಯಲ್ಲಿ ನೀರಿಗಾಗಿ ಪರದಾಡುತ್ತಿದ್ದ ಜನರಿಗೆ ಜಲಜೀವನ್​ ಮಿಷನ್​ ಯೋಜನೆ ವರವಾಗಿ ಪರಿಣಮಿಸುತ್ತಿದೆ. ಮೊದಲು ಒಂದು ಬಿಂದಿಗೆ ನೀರಿಗಾಗಿ ಗ್ರಾಮದ ಮುಂದಿರುವ ಒಂದು ಕೊಳಾಯಿ ಎದುರು ಗಂಟೆಗಟ್ಟಲು ಕಾದು ಕುಳಿತರಬೇಕಿತ್ತು. ಕರೆಂಟ್​ ಬಂದಾಗ ನೀರು ಬಿಡುತ್ತಿದ್ದ ವಾಟರ್​ ಮ್ಯಾನ್​ ದೇವದೂತನಂತೆ ಅವನು ನೀರು ಬಿಟ್ಟಾಗಿ ಎಲ್ಲರೂ ಕ್ಯೂನಲ್ಲಿ ನಿಂತು ಎರಡೆರಡು ಬಿಂದಿಗೆ ನೀರು ಹಿಡಿದುಕೊಂಡು ಅಷ್ಟೇ ನೀರಿನಲ್ಲಿ ಜೀವನ ಕಳೆಯಬೇಕಿತ್ತು. ಇಂಥ ಪರಿಸ್ಥಿತಿಯಲ್ಲಿದ್ದ ಗ್ರಾಮೀಣ ಭಾಗಗಳಿಗೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಗ್ರಾಮಗಳ ಮನೆ ಮನೆಗೆ ನೀರು ಒದಗಿಸುವ ಜಲ ಜೀವನ್​ ಮಿಷನ್​ ಯೋಜನೆ ದೊಡ್ಡ ಬದಲಾವಣೆಯನ್ನೇ ತಂದಿದೆ.

ಈ ಯೋಜನೆ ಅಡಿಯಲ್ಲಿ ಮನೆ ಮನೆಗೆ ಗಂಗೆ ಹರಿಯುವಂತೆ ಮಾಡಿದ ಮೇಲೆ ಗ್ರಾಮದ ಮಹಿಳೆಯರು ಕೂಲಿ ಕಾರ್ಮಿಕರು ನೀರಿಗಾಗಿ ಪರದಾಡುವ ಸ್ಥಿತಿ ಬದಲಾಗಿದೆ. ಈಗ ದಿನದ 24 ಗಂಟೆಯೂ ಮನೆಯಂಗಳದ ನಲ್ಲಿಯಲ್ಲಿ ನೀರು ಹರಿಯುತ್ತಿದೆ. ಮೊದಲಿನಂತೆ ಡ್ರಂಗಳಲ್ಲಿ ಹಾಗೂ ನೀರಿನ ತೊಟ್ಟಿಯಲ್ಲಿ ನೀರನ್ನು ಸಂಗ್ರಹಿಸುವ ಅವಶ್ಯಕತೆ ಇಲ್ಲ, ಗ್ರಾಮದಲ್ಲಿರುವ ಓವರ್​ ಹೆಡ್​ ಟ್ಯಾಂಕ್​ನಲ್ಲಿ ನೀರು ಇರುತ್ತದೆ. ಯಾವಾಗ ಬೇಕಾದ್ರು ಮನೆಯ ಅಂಗಳದಲ್ಲಿರುವ ನಲ್ಲಿಯಲ್ಲಿ ನೀರು ಬರುತ್ತಿರುತ್ತದೆ ಎಂದು ಕೋಲಾರ ತಾಲೂಕಿನ ಈಕಂಬಳ್ಳಿ ಗ್ರಾಮದ ಮಹಿಳೆಯರು ಟಿವಿ9 ಕನ್ನಡಕ್ಕೆ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ 1,814 ಗ್ರಾಮಗಳನ್ನು ಜಲಜೀವನ‌ ಮಿಷನ್​ ಯೋಜನೆಯಲ್ಲಿ ಆಯ್ಕೆ ಮಾಡಲಾಗಿದೆ, ಈ ಪೈಕಿ ಈಗಾಗಲೇ 1,508 ಗ್ರಾಮಗಳಲ್ಲಿ ಯೋಜನೆಗೆ ಟೆಂಡರ್ ಪ್ರಕ್ರಿಯೆ ಪೂರ್ಣವಾಗಿದೆ. 1,002 ಗ್ರಾಮಗಳಲ್ಲಿ ಕಾಮಗಾರಿ ನಡೆಯುತ್ತಿದೆ. ಈಗಾಗಲೇ ಜಿಲ್ಲೆಯ 100 ಗ್ರಾಮಗಳಲ್ಲಿ ಯೋಜನೆ ಪೂರ್ಣಗೊಂಡಿದೆ. ನಾಲ್ಕನೇ ಹಂತದ ಕಾಮಗಾರಿಯಲ್ಲಿ ಮಾತ್ರ ಕೆಲವೊಂದು ಸಣ್ಣ ಪುಟ್ಟ ತಾಂತ್ರಿಕ ತೊಂದರೆಗಳು ಇದೆ. ಈ ಹಿನ್ನೆಲೆಯಲ್ಲಿ ನಾಲ್ಕನೇ ಹಂತತ ಯೋಜನೆಗೂ ಆಡಳಿತಾತ್ಮಕ ಕೆಲಸಗಳು ಪೂರ್ಣಗೊಳ್ಳುತ್ತಿವೆ. ಈ ಮಾಹಿತಿಯನ್ನು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ನೀಡಿದ್ದಾರೆ.

ಇದನ್ನೂ ಓದಿ: ಕುಮಟಾ- ಶಿರಸಿ ರಸ್ತೆ ಸಂಚಾರ ಡಿಸೆಂಬರ್ 2ರಿಂದ ಫೆಬ್ರವರಿ 25ರವರೆಗೆ ಬಂದ್

ಒಟ್ಟಾರೆ ಗ್ರಾಮ ಗ್ರಾಮದ ಜನರಿಗೆ ಶುದ್ದ ಕುಡಿಯುವ ನೀರು ಸಿಗಬೇಕು ಕುಡಿಯುವ ನೀರಿಗಾಗಿ ಯಾವೊಬ್ಬ ಭಾರತೀಯನು ಪರದಾಡ ಬಾರದು ಅನ್ನೋ ಉದ್ದೇಶದಿಂದ ಮಾಡಲಾದ ಜಲಜೀವನ್ ಮಿಷನ್ ಯೋಜನೆ ಕೋಲಾರದಲ್ಲಿ ಸಾಕಾರಗೊಂಡಿದೆ. ಈ ಯೋಜನೆ ಪೂರ್ಣಗೊಂಡಿರುವ ಗ್ರಾಮಗಳಲ್ಲಿ ಜನರು ‘ಮನೆ ಮನೆ ಗಂಗೆ’ ಯೋಜನೆಗೆ ಮನಸೋತಿರುವುದು ಹೌದು.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ