AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರಿ ಗಲಾಟೆ; ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

16 ಜನ ಸದಸ್ಯರಲ್ಲಿ ಕಾಂಗ್ರೆಸ್ 8 ಹಾಗೂ ಜೆಡಿಎಸ್ 8 ಸಮಬಲ ಹೊಂದಿದ್ದವು. ಆದ್ರೆ ಕಾಂಗ್ರೆಸ್ನ ಸದಸ್ಯನೋರ್ವ ಜೆಡಿಎಸ್ ಗೆ ದ್ರೋಹ ಮಾಡಿದ ಎಂದು ಆಕ್ರೋಶ ಉಂಟಾಗಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ನಡೆಸುತ್ತಿದ್ದಾರೆ.

ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರಿ ಗಲಾಟೆ; ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ
ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಭಾರಿ ಗಲಾಟೆ
TV9 Web
| Edited By: ಆಯೇಷಾ ಬಾನು|

Updated on:Jun 24, 2022 | 6:03 PM

Share

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ(Byraganapalli Grama Panchayat Election) ಭಾರಿ ಗೊಂದಲ, ಗದ್ದಲ ನಡೆದಿದೆ. ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷಗಳು ಸಮಬಲ ಕಾಯ್ದುಕೊಂಡ ಹಿನ್ನೆಲೆ ಲಾಟರಿ‌ ಮೂಲಕ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಈ ವೇಳೆ ಕಾಂಗ್ರೆಸ್(Congress) ಜಯ ಗಳಿಸಿದೆ. ಈ ಹಿನ್ನೆಲೆ ಜೆಡಿಎಸ್(JDS) ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ಹೊರ ಹಾಕಿರುವ ಘಟನೆ ನಡೆದಿದೆ.

ರಾಯಲಸೀಮ ರಾಜಕಾರಣಕ್ಕೆ ಹೆಸರಾದ ಶ್ರೀನಿವಾಸಪುರದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಜಿದ್ದಿನ ರಾಜಕಾರಣ ಆರಂಭವಾಗಿದೆ. ಕಾಂಗ್ರೆಸ್‌ನ ಸ್ವಾಮಿ ಹಾಗೂ ಜೆಡಿಎಸ್‌ನ ರೆಡ್ಡಿ ಬಣದ ಮಧ್ಯೆ ಚುನಾವಣೆ ಕಾವು ಜೋರಾಗಿದೆ. ಇನ್ನೂ ಚುನಾವಣೆಗೆ ಒಂದು ವರ್ಷ ಇರುವಾಗಲೆ ರಾಜಕೀಯ ಗಲಾಟೆ ಆರಂಭವಾಗಿದೆ. ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿಯಾದ ಹಿನ್ನೆಲೆ ಜೆಡಿಎಸ್ ಗಲಾಟೆ ಆರಂಭ ಮಾಡಿದ್ದು ಬಳಿಕ ಪರಸ್ಪರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ, ಮೊಹಮ್ಮದ್ ನಲಪಾಡ್ ಮತ್ತು ಪೊಲೀಸರ ನಡುವೆ ಜಟಾಪಟಿ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಬೈರಗಾನಪಲ್ಲಿ ಗ್ರಾಮ ಪಂಚಾಯತಿ ಚುನಾವಣೆ ವೇಳೆ ಗೊಂದಲ ಉಂಟಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಕಾಂಗ್ರೆಸ್ ಮುಖಂಡರ 1 ಎರ್ಟಿಗಾ ಕಾರ್ ಮೇಲೆ ಕಲ್ಲು ತೂರಾಟ ನಡೆದಿದ್ದು, ಒಂದು ಬೈಕ್ ಜಖಂ ಆಗಿದೆ. ಇನ್ನೂ 16 ಜನ ಸದಸ್ಯ ಬಲ ಹೊಂದಿರುವ ಬೈರಗಾನಪಲ್ಲಿ ಗ್ರಾಮ ಪಂಚಾಯತನಲ್ಲಿ ಕಾಂಗ್ರೆಸ್ 8 ಹಾಗೂ ಜೆಡಿಎಸ್ 8 ಸಮಬಲ ಹೊಂದಿದೆ. ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ 2 ಪಕ್ಷಗಳ ಸದಸ್ಯರು ಸಮಬಲ ಕಾಯ್ದುಕೊಂಡ ಹಿನ್ನೆಲೆ, ಚುನಾವಾಣಾಧಿಕಾರಿ ಲಾಟರಿ ಮೂಲಕ ಪಂಚಾಯತ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಸಿದ್ರು. ಲಾಟರಿಯಲ್ಲಿ ಕಾಂಗ್ರೆಸ್ ಬೆಂಬಲಿತರಾದ ಅಧ್ಯಕ್ಷೆಯಾಗಿ ನಿರ್ಮಲಮ್ಮ, ಉಪಾಧ್ಯಕ್ಷೆಯಾಗಿ ಗೌರಮ್ಮ ಆಯ್ಕೆಯಾದ್ರು. ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್‌ನ ಸದಸ್ಯನೋರ್ವ ಒಳ ಒಪ್ಪಂದ ಮಾಡಿಕೊಂಡು ಜೆಡಿಎಸ್‌ಗೆ ದ್ರೋಹ ಮಾಡಿದ ಎಂದು ಜೆಡಿಎಸ್ ಕಾರ್ಯಕರ್ತರು ಗ್ರಾಮ ಪಂಚಾಯತ ಎದುರು ಗಲಾಟೆ ಶುರು ಮಾಡಿದ್ರು.

ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿ ಜೆಡಿಎಸ್ ಮುಖಂಡರು ಕಾಂಗ್ರೆಸ್ ವಿರುದ್ದ ಆಕ್ರೋಶ ಹೊರ ಹಾಕಿದ್ರು. ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರ ಹರಸಾಹಸ ಪಡಬೇಕಾಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಹ ಗಲಾಟೆ ಶುರು ಮಾಡುತ್ತಿದ್ದಂತೆ ಪೊಲೀಸರು 2 ಗುಂಪುಗಳನ್ನ ಚದುರಿಸಿ ಪರಿಸ್ಥಿತಿ ನಿಯಂತ್ರಣ ಗೊಳಿಸಿದ್ರು. ಒಟ್ಟಾರೆ ಶ್ರೀನಿವಾಸಪುರದಲ್ಲಿ ಪ್ರತಿಷ್ಠೆಯ ಪಂಚಾಯತನ ಅಧ್ಯಕ್ಷ ಹಾಗು ಉಪಾಧ್ಯಕ್ಷ ೨ ಸ್ಥಾನಗಳಲ್ಲಿ ಕಾಂಗ್ರೇಸ್ ಜಯಭೇರಿ ಜೆಡಿಎಸ್‌ಗೆ ನುಂಗಲಾರದ ತುತ್ತಾಗಿದ್ದು, ಇದು ಮುಂದಿನ ಚುನಾವಣೆಗಳ ಮೇಲೆ ನೇರ ಪರಿಣಾಮ ಬೀರಲಿದೆ.

Published On - 3:45 pm, Fri, 24 June 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ