AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲು ಕ್ವಾರಿಯಲ್ಲಿ ಸ್ಫೋಟಕ್ಕೆ ಕಾರ್ಮಿಕ ಬಲಿ : ಕರ್ತವ್ಯ ಲೋಪ ಎಸಗಿದ ಇನ್ಸ್​​ಪೆಕ್ಟರ್ ಅಮಾನತು

ಕೊಮ್ಮನಹಳ್ಳಿಯ ಬಳಿ ಕಲ್ಲು ಕ್ವಾರಿಯಲ್ಲಿ ಸ್ಫೋಟಕ ಸಿಡಿದು ಕಾರ್ಮಿಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಸರಬರಾಜು ಮಾಡಿದ್ದ ಆರೋಪಿ ದಿಪೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಲು ಕ್ವಾರಿಯಲ್ಲಿ ಸ್ಫೋಟಕ್ಕೆ ಕಾರ್ಮಿಕ ಬಲಿ : ಕರ್ತವ್ಯ ಲೋಪ ಎಸಗಿದ ಇನ್ಸ್​​ಪೆಕ್ಟರ್ ಅಮಾನತು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Oct 14, 2022 | 8:54 PM

Share

ಕೋಲಾರ: ಕೊಮ್ಮನಹಳ್ಳಿಯ ಬಳಿ ಕಲ್ಲು ಕ್ವಾರಿಯಲ್ಲಿ (jelly crusher)  ಸ್ಫೋಟಕ ಸಿಡಿದು ಕಾರ್ಮಿಕ (Labor) ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಸರಬರಾಜು ಮಾಡಿದ್ದ ಆರೋಪಿ ದಿಪೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.  ಇನ್ನು ಕರ್ತವ್ಯ ಲೋಪ ಎಸಗಿದ ಆರೋಪದಡಿ ಮಾಸ್ತಿ ಪೊಲೀಸ್​ ಠಾಣೆ ಇನ್ಸ್​​ಪೆಕ್ಟರ್ (Inspector) ವಸಂತ​ನನ್ನು ಅಮಾನತು ಮಾಡಲಾಗಿದೆ. ಸದ್ಯ ಮಾಸ್ತಿ ಪೊಲೀಸರು ಅಪಘಾತ ಪ್ರಕರಣದ ಬದಲಾಗಿ ಸ್ಪೋಟಕ ಕಾಯ್ದೆ ಹಾಗೂ ಐಪಿಸಿ 201 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖಾಧಿಕಾರಿಯಾಗಿ ಕೋಲಾರದ ಡಿವೈಎಸ್​ಪಿ ದೇವರಾಜ್​ರವರು ನೇಮಕಗೊಂಡಿದ್ದಾರೆ.

ಘಟನೆ ಹಿನ್ನೆಲೆ 

ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿ ಜೆಲ್ಲಿ ಕ್ರಷರ್​ಲ್ಲಿ (jelly crusher) ಸ್ಫೋಟಕ ಸಿಡಿದು ಕಾರ್ಮಿಕ (Labor) ಸಾವನ್ನಪ್ಪಿದ್ದನು. ಬಿಹಾರ (Bihar) ಮೂಲದ ರಾಕೇಶ್ ಸಾಣಿ (34) ಮೃತ ಕಾರ್ಮಿಕ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಡಾಗ್ ಮತ್ತು ಬಾಂಬ್ ಸ್ಕ್ವಾಡ್ ತಂಡ ಸ್ಥಳಕ್ಕೆ ಭೇಟಿ‌ ನೀಡಿದೆ.

ಕೇಂದ್ರ ವಲಯ ಐಜಿ ಚಂದ್ರಶೇಖರ್ ಸ್ಪಷ್ಟನೆ

ಸ್ಥಳಕ್ಕೆ ಕೇಂದ್ರ ವಲಯದ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಎಸ್ಪಿ ದೇವರಾಜ್ ಅವರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು ನಿನ್ನೆ (ಅ. 13) ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಟ್ರಕ್ ನಿಂದ ಅಪಘಾತ ಆಗಿದೆ ಎಂದು ನಿತೀಶ್ ಕುಮಾರ್ ಎಂಬುವರು ಪೊಲೀಸರಿಗೆ ದೂರು ನೀಡಿದ್ದರು. ದೂರು ಹಿನ್ನೆಲೆ ಪ್ರಕರಣ ದಾಖಲಾಗಿತ್ತು. ಬಿಹಾರ್ ಮೂಲದ ರಾಕೇಶ್ ಎಂಬ ವ್ಯಕ್ತಿ ಮೃತ ಪಟ್ಟಿದ್ದಾನೆ. ಆದರೆ ನಮಗೆ ರಾಕೇಶ್​​ನ ಸಾವಿನ ಕುರಿತು ಅನುಮಾನ ವ್ಯಕ್ತವಾಗಿದ್ದು, ತನಿಖೆ ಮಾಡುತ್ತಿದ್ದೇವೆ. ಸದ್ಯ ಮೇಲ್ನೋಟಕ್ಕೆ ಬ್ಲ್ಯಾಸ್ಟ್ ನಿಂದ ಸಾವು ಆಗಿದೆ ಅಂತ ಹೇಳಲಾಗುತ್ತಿದೆ. ಇಬ್ಬರಿಗೆ ಗಾಯಾಳಾಗಿವೆ. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ದೀಪೆನ್ ಎಂಬುವವರು ಬ್ಲ್ಯಾಸ್ಟ್ ಪರವಾನಿಗೆ ಹೊಂದಿದ್ದಾರೆ. ಕ್ರಷರ್ ಮಂಜುನಾಥ್ ಎಂಬುವವರಿಗೆ ಸೇರಿದೆ. ಆಕ್ಸಿಡೆಂಟ್ ಅನ್ನೋ ಕಟ್ಟು ಕಥೆ ಎಲ್ಲಿಂದ ಬಂತು ಅನ್ನೋ ತನಿಖೆ ಆಗುತ್ತಿದೆ. ಪೊಲೀಸರು ಏಕೆ ಆಕ್ಸಿಡೆಂಟ್ ಅಂತ ದೂರು ದಾಖಲಿಸಿಕೊಂಡಿದ್ದಾರೆ ಅನ್ನೋ ತನಿಖೆ ಮಾಡಿಸುತ್ತೇವೆ. ಎಫ್​ಐಆರ್​ ದಾಖಲು ಮಾಡಿರುವ ಅಧಿಕಾರಿ ಬಗ್ಗೆಯೂ ತನಿಖೆ ಮಾಡಲಾಗುತ್ತೆ. ಮೈನಿಂಗ್ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕಾಗಿದೆ ಎಂದು ಕೊಮ್ಮನಹಳ್ಳಿಯಲ್ಲಿ ಹೇಳಿದ್ದಾರೆ.

ಜಿಲ್ಲಾಸ್ಪತ್ರೆಗೆ  ಸಚಿವ ಮುನಿರತ್ನ ಭೇಟಿ 

ಕೋಲಾರ ಜಿಲ್ಲಾಸ್ಪತ್ರೆ ಶವಗಾರಕ್ಕೆ ಸಚಿವ ಮುನಿರತ್ನ ಭೇಟಿ ನೀಡಿ  ಶವವನ್ನು ಮರು ಮರಣೋತ್ತರ ಪರೀಕ್ಷೆ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಿಡಿಯೋ ಸಹಿತಿ ಮರಣೋತ್ತರ ಪರೀಕ್ಷೆಗೆ ಸೂಚನೆ ನೀಡಿದರು. ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನದಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲಾ. ಪ್ರಕರಣದ ಸಂಪೂರ್ಣ ತನಿಖೆಗೆ ಸೂಚನೆ ನೀಡಿದ್ದೇನೆ.  ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳುವೆ ಎಂದು ಭರವಸೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ