AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !

2023-24ನೇ ಸಾಲಿನ ಬಜೆಟ್​ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ಬಜೆಟ್​​ಗೆ ಎಷ್ಟು ಖರ್ಚಾಗಿದೆ ಎಂದು ಕೋಲಾರದ ಆರ್​ಟಿಐ ಕಾರ್ಯಕರ್ತ ಕೆ.ಸಿ.ರಾಜಣ್ಣ ಆರ್​ಟಿಐ ಕಾಯ್ದೆಯಡಿ ಮಾಹಿತಿ ಕೇಳಿದ್ದರು.

2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !
ಬಜೆಟ್​​​ ಖರ್ಚು-ವೆಚ್ಚ, ಸಿದ್ದರಾಮಯ್ಯ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ

Updated on:Oct 01, 2023 | 11:37 AM

ಕೋಲಾರ ಅ.01: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ 2.O ಕಾಂಗ್ರೆಸ್​ ಸರ್ಕಾರ ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಬಜೆಟ್​​ (Budget) ಮಂಡಿಸಿತು. ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಬಜೆಟ್​ ಅಧಿವೇಶನ ಮುಗಿದು ಎರಡು ತಿಂಗಳು ಕಳೆದಿದೆ. ಈ ಬಜೆಟ್​​ಗೆ ಖರ್ಚಾದ ಹಣ ಎಷ್ಟು ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಜುಲೈ 3ರಿಂದ ಜುಲೈ 21ರವರೆಗೆ ನಡೆದಿದ್ದ ರಾಜ್ಯ ಸರ್ಕಾರದ ಬಜೆಟ್​ ಅಧಿವೇಶನದ ಸಮಯದಲ್ಲಿ ಸಚಿವಾಲಯ ಸಿಬ್ಬಂದಿ, ಅಧಿಕಾರಿ, ಸಿಬ್ಬಂದಿಗೆ ಮಾಡಿದ್ದ ವೆಚ್ಚ ಬಹಿರಂಗಗೊಂಡಿದೆ.

ಆರ್​ಟಿಐ ಕಾಯ್ದೆಯಡಿ ಕೋಲಾರ ಮೂಲದ ಆರ್​ಟಿಐ ಕಾರ್ಯಕರ್ತ ಕೆ.ಸಿ.ರಾಜಣ್ಣ ಮಾಹಿತಿ ಕೇಳಿದ್ದರು. ಇದಕ್ಕೆ ಸಚಿವಾಲಯದ ಅಧೀನ ಕಾರ್ಯದರ್ಶಿ ಜಯಶೀಲ ಎಂ.ಎಸ್​ ಮಾಹಿತಿ ನೀಡಿದ್ದು, ಊಟ, ಉಪಚಾರ, ಪ್ರಯಾಣ ಭತ್ಯೆಗೆ ಬರೊಬ್ಬರಿ 95,97,000 ಹಣ ಖರ್ಚಾಗಿದೆ. ಉಳಿದಂತೆ ಲೋಕೋಪಯೋಗಿ ಇಲಾಖೆ, ತೋಟಗಾರಿಕಾ ಇಲಾಖೆ, ವೈದ್ಯಾಧಿಕಾರಿ, ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗೆ ಖರ್ಚು ವೆಚ್ಚದ ಹಣ ಕೊಡುವುದು ಇನ್ನೂ ಬಾಕಿ ಇದೆ ಎಂದು ತಿಳಿಸಿದ್ದಾರೆ.

  • ಸಭಾಧ್ಯಕ್ಷರ ಆಪ್ತ ಸಿಬ್ಬಂದಿ ಶಾಖೆ – 1,71,000 ಲಕ್ಷ ರೂ.
  •  ವಿಧಾನಸಭೆ ಸಚಿವಾಯದ ಅಧಿಕಾರಿ/ನೌಕರರು – 92,98, 500 ಲಕ್ಷ ರೂ
  •  ನಿಯೋಜನೆಗೊಂಡಿರುವ ಅಧಿಕಾರಿ/ನೌಕರರು – 1,27, 500 ಲಕ್ಷ ರೂ.

ಒಟ್ಟು 95, 97, 000 ಲಕ್ಷ ರೂ ಖರ್ಚು ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:34 am, Sun, 1 October 23

ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ