AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !

2023-24ನೇ ಸಾಲಿನ ಬಜೆಟ್​ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ಬಜೆಟ್​​ಗೆ ಎಷ್ಟು ಖರ್ಚಾಗಿದೆ ಎಂದು ಕೋಲಾರದ ಆರ್​ಟಿಐ ಕಾರ್ಯಕರ್ತ ಕೆ.ಸಿ.ರಾಜಣ್ಣ ಆರ್​ಟಿಐ ಕಾಯ್ದೆಯಡಿ ಮಾಹಿತಿ ಕೇಳಿದ್ದರು.

2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !
ಬಜೆಟ್​​​ ಖರ್ಚು-ವೆಚ್ಚ, ಸಿದ್ದರಾಮಯ್ಯ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ವಿವೇಕ ಬಿರಾದಾರ|

Updated on:Oct 01, 2023 | 11:37 AM

Share

ಕೋಲಾರ ಅ.01: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ 2.O ಕಾಂಗ್ರೆಸ್​ ಸರ್ಕಾರ ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಬಜೆಟ್​​ (Budget) ಮಂಡಿಸಿತು. ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಬಜೆಟ್​ ಅಧಿವೇಶನ ಮುಗಿದು ಎರಡು ತಿಂಗಳು ಕಳೆದಿದೆ. ಈ ಬಜೆಟ್​​ಗೆ ಖರ್ಚಾದ ಹಣ ಎಷ್ಟು ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಜುಲೈ 3ರಿಂದ ಜುಲೈ 21ರವರೆಗೆ ನಡೆದಿದ್ದ ರಾಜ್ಯ ಸರ್ಕಾರದ ಬಜೆಟ್​ ಅಧಿವೇಶನದ ಸಮಯದಲ್ಲಿ ಸಚಿವಾಲಯ ಸಿಬ್ಬಂದಿ, ಅಧಿಕಾರಿ, ಸಿಬ್ಬಂದಿಗೆ ಮಾಡಿದ್ದ ವೆಚ್ಚ ಬಹಿರಂಗಗೊಂಡಿದೆ.

ಆರ್​ಟಿಐ ಕಾಯ್ದೆಯಡಿ ಕೋಲಾರ ಮೂಲದ ಆರ್​ಟಿಐ ಕಾರ್ಯಕರ್ತ ಕೆ.ಸಿ.ರಾಜಣ್ಣ ಮಾಹಿತಿ ಕೇಳಿದ್ದರು. ಇದಕ್ಕೆ ಸಚಿವಾಲಯದ ಅಧೀನ ಕಾರ್ಯದರ್ಶಿ ಜಯಶೀಲ ಎಂ.ಎಸ್​ ಮಾಹಿತಿ ನೀಡಿದ್ದು, ಊಟ, ಉಪಚಾರ, ಪ್ರಯಾಣ ಭತ್ಯೆಗೆ ಬರೊಬ್ಬರಿ 95,97,000 ಹಣ ಖರ್ಚಾಗಿದೆ. ಉಳಿದಂತೆ ಲೋಕೋಪಯೋಗಿ ಇಲಾಖೆ, ತೋಟಗಾರಿಕಾ ಇಲಾಖೆ, ವೈದ್ಯಾಧಿಕಾರಿ, ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗೆ ಖರ್ಚು ವೆಚ್ಚದ ಹಣ ಕೊಡುವುದು ಇನ್ನೂ ಬಾಕಿ ಇದೆ ಎಂದು ತಿಳಿಸಿದ್ದಾರೆ.

  • ಸಭಾಧ್ಯಕ್ಷರ ಆಪ್ತ ಸಿಬ್ಬಂದಿ ಶಾಖೆ – 1,71,000 ಲಕ್ಷ ರೂ.
  •  ವಿಧಾನಸಭೆ ಸಚಿವಾಯದ ಅಧಿಕಾರಿ/ನೌಕರರು – 92,98, 500 ಲಕ್ಷ ರೂ
  •  ನಿಯೋಜನೆಗೊಂಡಿರುವ ಅಧಿಕಾರಿ/ನೌಕರರು – 1,27, 500 ಲಕ್ಷ ರೂ.

ಒಟ್ಟು 95, 97, 000 ಲಕ್ಷ ರೂ ಖರ್ಚು ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:34 am, Sun, 1 October 23

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್