AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !

2023-24ನೇ ಸಾಲಿನ ಬಜೆಟ್​ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ಬಜೆಟ್​​ಗೆ ಎಷ್ಟು ಖರ್ಚಾಗಿದೆ ಎಂದು ಕೋಲಾರದ ಆರ್​ಟಿಐ ಕಾರ್ಯಕರ್ತ ಕೆ.ಸಿ.ರಾಜಣ್ಣ ಆರ್​ಟಿಐ ಕಾಯ್ದೆಯಡಿ ಮಾಹಿತಿ ಕೇಳಿದ್ದರು.

2023-24ನೇ ಸಾಲಿನ ಬಜೆಟ್​ ಅಧಿವೇಶನಕ್ಕೆ ಖರ್ಚಾಗಿದ್ದು ಬರೊಬ್ಬರಿ 95 ಲಕ್ಷ ರೂ. !
ಬಜೆಟ್​​​ ಖರ್ಚು-ವೆಚ್ಚ, ಸಿದ್ದರಾಮಯ್ಯ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Oct 01, 2023 | 11:37 AM

Share

ಕೋಲಾರ ಅ.01: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ 2.O ಕಾಂಗ್ರೆಸ್​ ಸರ್ಕಾರ ಜುಲೈ ತಿಂಗಳಲ್ಲಿ 2023-24ನೇ ಸಾಲಿನ ಬಜೆಟ್​​ (Budget) ಮಂಡಿಸಿತು. ಸಿಎಂ ಸಿದ್ದರಾಮಯ್ಯ ಅವರು ಬಜೆಟ್​ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಬಜೆಟ್​ ಅಧಿವೇಶನ ಮುಗಿದು ಎರಡು ತಿಂಗಳು ಕಳೆದಿದೆ. ಈ ಬಜೆಟ್​​ಗೆ ಖರ್ಚಾದ ಹಣ ಎಷ್ಟು ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಜುಲೈ 3ರಿಂದ ಜುಲೈ 21ರವರೆಗೆ ನಡೆದಿದ್ದ ರಾಜ್ಯ ಸರ್ಕಾರದ ಬಜೆಟ್​ ಅಧಿವೇಶನದ ಸಮಯದಲ್ಲಿ ಸಚಿವಾಲಯ ಸಿಬ್ಬಂದಿ, ಅಧಿಕಾರಿ, ಸಿಬ್ಬಂದಿಗೆ ಮಾಡಿದ್ದ ವೆಚ್ಚ ಬಹಿರಂಗಗೊಂಡಿದೆ.

ಆರ್​ಟಿಐ ಕಾಯ್ದೆಯಡಿ ಕೋಲಾರ ಮೂಲದ ಆರ್​ಟಿಐ ಕಾರ್ಯಕರ್ತ ಕೆ.ಸಿ.ರಾಜಣ್ಣ ಮಾಹಿತಿ ಕೇಳಿದ್ದರು. ಇದಕ್ಕೆ ಸಚಿವಾಲಯದ ಅಧೀನ ಕಾರ್ಯದರ್ಶಿ ಜಯಶೀಲ ಎಂ.ಎಸ್​ ಮಾಹಿತಿ ನೀಡಿದ್ದು, ಊಟ, ಉಪಚಾರ, ಪ್ರಯಾಣ ಭತ್ಯೆಗೆ ಬರೊಬ್ಬರಿ 95,97,000 ಹಣ ಖರ್ಚಾಗಿದೆ. ಉಳಿದಂತೆ ಲೋಕೋಪಯೋಗಿ ಇಲಾಖೆ, ತೋಟಗಾರಿಕಾ ಇಲಾಖೆ, ವೈದ್ಯಾಧಿಕಾರಿ, ಭದ್ರತಾ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗೆ ಖರ್ಚು ವೆಚ್ಚದ ಹಣ ಕೊಡುವುದು ಇನ್ನೂ ಬಾಕಿ ಇದೆ ಎಂದು ತಿಳಿಸಿದ್ದಾರೆ.

  • ಸಭಾಧ್ಯಕ್ಷರ ಆಪ್ತ ಸಿಬ್ಬಂದಿ ಶಾಖೆ – 1,71,000 ಲಕ್ಷ ರೂ.
  •  ವಿಧಾನಸಭೆ ಸಚಿವಾಯದ ಅಧಿಕಾರಿ/ನೌಕರರು – 92,98, 500 ಲಕ್ಷ ರೂ
  •  ನಿಯೋಜನೆಗೊಂಡಿರುವ ಅಧಿಕಾರಿ/ನೌಕರರು – 1,27, 500 ಲಕ್ಷ ರೂ.

ಒಟ್ಟು 95, 97, 000 ಲಕ್ಷ ರೂ ಖರ್ಚು ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:34 am, Sun, 1 October 23

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!