AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದ ಕಾಲೇಜುಗಳಿಗೆ ಮತ್ತೆ ಸಿಗಲಿದೆ ಜೀವಕಳೆ, ಕಾಲೇಜುಗಳ ಅಭಿವೃದ್ಧಿಗೆ ₹18.7 ಕೋಟಿ ಬಿಡುಗಡೆ

ಜಿಲ್ಲೆಯ ಕಾಲೇಜುಗಳಿಗೆ ಮತ್ತೆ ಜೀವಕಳೆ ಬರಲಿದ್ದು, ಕಾಲೇಜುಗಳ ಅಭಿವೃದ್ಧಿಗೆ ಒಟ್ಟು 18.7 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಖುದ್ದಾಗಿ ಕಾಲೇಜುಗಳ ಪರಿಸ್ಥಿತಿ ಅವಲೋಕಿಸಿರೋ ಸಚಿವ ಮುನಿರತ್ನ, ಸರ್ಕಾರದಿಂದ ಅನುದಾನ ತರುವಲ್ಲಿ ಸಫಲರಾಗಿದ್ದಾರೆ.

ಕೋಲಾರದ ಕಾಲೇಜುಗಳಿಗೆ ಮತ್ತೆ ಸಿಗಲಿದೆ ಜೀವಕಳೆ, ಕಾಲೇಜುಗಳ ಅಭಿವೃದ್ಧಿಗೆ ₹18.7 ಕೋಟಿ ಬಿಡುಗಡೆ
ಕಾಲೇಜುಗಳಿಗೆ ಭೇಟಿ ನೀಡಿ ಕಾಲೇಜುಗಳ ಪರಿಸ್ಥಿತಿ ಅವಲೋಕಿಸಿರೋ ಸಚಿವ ಮುನಿರತ್ನ
TV9 Web
| Updated By: ಆಯೇಷಾ ಬಾನು|

Updated on: Feb 17, 2022 | 7:57 AM

Share

ಕೋಲಾರ: ಕೋಲಾರದ ಕಾಲೇಜು(Kolar Colleges) ವಿದ್ಯಾರ್ಥಿಗಳ ಪಾಡು ಹೇಳತೀರದ್ದು. ಕಾಲೇಜು ಕಟ್ಟಡ ಭೂತ ಬಂಗಲೆಯಂತಾಗಿದೆ. ಮೇಲ್ಛಾವಣಿ ಬಿರುಕು ಬಿಟ್ಟಿದೆ. ಶೌಚಾಲಯಗಳು ಗಬ್ಬು ನಾರ್ತಿವೆ. ಆದ್ರೆ ಇವಕ್ಕೆಲ್ಲ ಶೀಘ್ರವೇ ಮುಕ್ತಿ ಸಿಗೋ ಕಾಲ ಬಂದಿದೆ. ಎಷ್ಟೋ ವರ್ಷಗಳ ಬಳಿಕ ಜಿಲ್ಲೆಯ ಕಾಲೇಜುಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿದೆ.

ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿದ್ದರೂ ಕೋಲಾರ ಹಲವು ಕಾರಣಗಳಿಂದ ನಿರ್ಲ್ಯಕ್ಷಕ್ಕೆ ಒಳಗಾಗಿರುವ ಜಿಲ್ಲೆ. ಇಲ್ಲಿನ ಕಾಲೇಜುಗಳಂತೂ ಕನಿಷ್ಠ ಸುಣ್ಣ-ಬಣ್ಣ ಕಂಡು ಅದೆಷ್ಟೋ ವರ್ಷಗಳು ಕಳೆದುಹೋಗಿವೆ. ಕಟ್ಟಡಗಳ ನಿರ್ವಹಣೆಯೇ ಇಲ್ಲದ ಕಾರಣ ಪಾಳುಬಿದ್ದ ಬಂಗಲೆಗಳಂತೆ ಕಾಲೇಜುಗಳು ಭಾಸವಾಗ್ತಿವೆ. ಈ ನಡುವೆ ಕೋಲಾರದ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಜಿಲ್ಲೆಯ ಕಾಲೇಜುಗಳಿಗೆ ಮತ್ತೆ ಜೀವಕಳೆ ಬರಲಿದ್ದು, ಕಾಲೇಜುಗಳ ಅಭಿವೃದ್ಧಿಗೆ ಒಟ್ಟು 18.7 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಖುದ್ದಾಗಿ ಕಾಲೇಜುಗಳ ಪರಿಸ್ಥಿತಿ ಅವಲೋಕಿಸಿರೋ ಸಚಿವ ಮುನಿರತ್ನ, ಸರ್ಕಾರದಿಂದ ಅನುದಾನ ತರುವಲ್ಲಿ ಸಫಲರಾಗಿದ್ದಾರೆ.

ಇನ್ನು ಕಾಲೇಜುಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿರೋದು ವಿದ್ಯಾರ್ಥಿಗಳ ಜೊತೆ ಉಪನ್ಯಾಸಕ ವರ್ಗಕ್ಕೂ ಸಂತಸ ತಂದಿದೆ. ಹಣ ಬಿಡುಗಡೆಯಾಗಿದ್ದೇ ತಡ ಕಾಲೇಜಿನಲ್ಲಿ ಆಗಬೇಕಾದ ಅತ್ಯಗತ್ಯ ಕೆಲಸಗಳ ಪಟ್ಟಿ ಸಿದ್ಧವಾಗ್ತಿದೆ. ಕೋಲಾರ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ 2.5 ಕೋಟಿ, ಪ್ರಥಮ ದರ್ಜೆ ಕಾಲೇಜಿಗೆ 1.67 ಕೋಟಿ, ಶ್ರೀನಿವಾಸಪುರ ಪ್ರಥಮ ದರ್ಜೆ ಕಾಲೇಜಿಗೆ 1.78 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದೆ. ಹಾಗೆಯೇ ಕೆಜಿಎಫ್ ಪ್ರಥಮ ದರ್ಜೆ ಕಾಲೇಜಿಗೆ 2.77 ಕೋಟಿ, ಮಾಲೂರು ಪ್ರಥಮ ದರ್ಜೆ ಕಾಲೇಜಿಗೆ 2.88ಕೋಟಿ, ಬಂಗಾರಪೇಟೆ ಪ್ರಥಮ ದರ್ಜೆ ಕಾಲೇಜಿಗೆ 2.76 ಕೋಟಿ ರೂಪಾಯಿಯನ್ನ ಸರ್ಕಾರ ಮಂಜೂರು ಮಾಡಿದೆ. ಮುಳಬಾಗಿಲು ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿಗೆ 2.71ಕೋಟಿ, ಮಾಲೂರು ಪದವಿ ಪೂರ್ವ ಕಾಲೇಜಿಗೂ 1 ಕೋಟಿ ರೂಪಾಯಿ ರಿಲೀಸ್ ಆಗಿದೆ.

ಒಟ್ನನಲ್ಲಿ ಕೋಲಾರ ಜಿಲ್ಲೆಯ ಕಾಲೇಜುಗಳ ಅಭಿವೃದ್ಧಿಗೆ ಕೊನೆಗೂ ಸರ್ಕಾರ ಮುಂದಾಗಿದೆ. ಹೀಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ಕೊಠಡಿಗಳು ದೊರೆಯಬಹುದೆಂಬ ನಿರೀಕ್ಷೆ ಇದ್ದು, ಅನುದಾನ ಯಾವರೀತಿ ಸದುಪಯೋಗವಾಗುತ್ತೆ ಅನ್ನೋದನ್ನ ಕಾದುನೋಡಬೇಕಿದೆ.

ವರದಿ: ರಾಜೇಂದ್ರಸಿಂಹ, ಟಿವಿ9 ಕೋಲಾರ

ಇದನ್ನೂ ಓದಿ: ಮದುವೆ ಮನೆಗೆ ಹೋಗಿದ್ದ 13 ಮಹಿಳೆಯರು ಬಾವಿಗೆ ಬಿದ್ದು ಸಾವು; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮುಖ್ಯಮಂತ್ರಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ