AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿದ್ದ ಶಿಕ್ಷಕನಿಗೆ ಹೈಕೋರ್ಟ್​​ನಲ್ಲೂ ಸಂಕಷ್ಟ

ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟು, ನಗ್ನ ವಿಡಿಯೋ ಮಾಡಿಟ್ಟುಕೊಂಡಿದ್ದ ಮಾಲೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪಗೆ ಹೈಕೋರ್ಟ್​​ನಲ್ಲೂ ಸಂಕಷ್ಟ ಕಾದಿದೆ. ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕೋಲಾರ: ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿದ್ದ ಶಿಕ್ಷಕನಿಗೆ ಹೈಕೋರ್ಟ್​​ನಲ್ಲೂ ಸಂಕಷ್ಟ
ಕರ್ನಾಟಕ ಹೈಕೋರ್ಟ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: Ganapathi Sharma|

Updated on: Sep 07, 2024 | 10:10 AM

Share

ಕೋಲಾರ, ಸೆಪ್ಟೆಂಬರ್ 7: ಮೊಬೈಲ್​ನಲ್ಲಿ ಹೆಣ್ಣು ಮಕ್ಕಳ ನಗ್ನ ಫೋಟೋ, ವಿಡಿಯೋ ಮಾಡಿ ಇಟ್ಟುಕೊಂಡಿದ್ದ ಹಾಗೂ ವಿದ್ಯಾರ್ಥನಿಯರಿಗೆ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿರುವ ಕೋಲಾರದ ಶಿಕ್ಷಕನೊಬ್ಬ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ ಮೊಬೈಲ್​ನಲ್ಲಿ ಸುಮಾರು 5000 ನಗ್ನ ವಿಡಿಯೋಗಳು ಪತ್ತೆಯಾಗಿದ್ದವು.

ವಿದ್ಯಾರ್ಥಿಗಳಿಂದ ಶೌಚಗುಂಡಿ ಶುಚಿಗೊಳಿಸಿದ ಆರೋಪದಲ್ಲಿ ತನಿಖೆ ನಡೆಸಲಾಗಿತ್ತು. ಆದರೆ, ತನಿಖೆ ವೇಳೆ ಭಯನಾಕ ಸತ್ಯ ಹೊರಬಂದಿತ್ತು. ತನಿಖೆ ಸಂದರ್ಭ ಶಿಕ್ಷಕ ಮುನಿಯಪ್ಪನ 4 ಮೊಬೈಲ್​ಗಳನ್ನು ಸೀಜ್ ಮಾಡಲಾಗಿತ್ತು. ಮೊಬೈಲ್​ ಪರಿಶೀಲನೆ ಮಾಡಿದಾಗ ಹೆಣ್ಣುಮಕ್ಕಳ ನಗ್ನ ವಿಡಿಯೋ‌, ಫೋಟೋಗಳು ಪತ್ತೆಯಾಗಿದ್ದವು. ಹೀಗಾಗಿ ಶಿಕ್ಷಕನ ವಿರುದ್ಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಮಹಾಲಿಂಗಪುರದಲ್ಲಿ ಮತ್ತೊಂದು ಭ್ರೂಣಹತ್ಯೆ; ಹೆಣ್ಣು ಎಂದು ಗರ್ಭಪಾತ, ಆದ್ರೆ ಅದು ಗಂಡು ಮಗುವಾಗಿತ್ತು

2023ರ ಡಿಸೆಂಬರ್​ 17ರಂದು ವಸತಿ ಶಾಲೆಯಲ್ಲಿ ಬೆಳಕಿಗೆ ಬಂದಿದ್ದ ಪ್ರಕರಣ ಇದಾಗಿದೆ. ಆ ಸಂದರ್ಭದಲ್ಲಿ, ಮಕ್ಕಳಿಗೆ ಶಿಕ್ಷಕ ಚಿತ್ರಹಿಂಸೆ ನೀಡಿ ರೆಕಾರ್ಡ್ ಮಾಡಿದ್ದ ವಿಡಿಯೋ ವೈರಲ್ ಕೂಡ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ