AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯೋ ವಿಧಿಯೇ! ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳು, ರಕ್ಷಣೆಗೆ ಹೋಗಿ ತಂದೆಯೂ ಸಾವು

ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet) ತಾಲ್ಲೂಕು ಕಾಮಸಮುದ್ರ ಗ್ರಾಮದ ವೃಷಬಾವತಿ ಕೆರೆ(Vrishabhavathi Lake )ಯಲ್ಲಿ ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ನಡೆದಿದೆ. ಈ ಕುರಿತು ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಯ್ಯೋ ವಿಧಿಯೇ! ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳು, ರಕ್ಷಣೆಗೆ ಹೋಗಿ ತಂದೆಯೂ ಸಾವು
ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 28, 2024 | 8:28 PM

Share

ಕೋಲಾರ, ಏ.28: ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet) ತಾಲ್ಲೂಕು ಕಾಮಸಮುದ್ರ ಗ್ರಾಮದ ವೃಷಬಾವತಿ ಕೆರೆ(Vrishabhavathi Lake )ಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಸೈಯದ್ ಅಯೂಬ್(35), ಫಾತಿಮಾ(10) ಸಾವು ಮೃತ ರ್ದುದೈವಿಗಳು. ಮಜರಾಗೊಲ್ಲಹಳ್ಳಿಗೆ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ತಂದೆ ಮತ್ತು ಮಗಳು, ಕೆರೆ ನೋಡಲು ಹೋಗಿ ಸೆಲ್ಫಿ ತೆಗೆದುಕೊಳ್ಳುವಾಗ ಮಗಳು ಕಾಲುಜಾರಿಬಿದ್ದಿದ್ದಾಳೆ. ಈ ವೇಳೆ ಮಗಳು ಫಾತಿಮಾ ರಕ್ಷಿಸಲು ಕೆರೆಗೆ ಇಳಿದ ತಂದೆ ಅಯೂಬ್ ಕೂಡ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಾಯಿಯೊಂದನ್ನ ಹೊತ್ತೊಯ್ದು ತಿಂದು ಹಾಕಿದ ಚಿರತೆ

ಮಂಡ್ಯ: ಜಿಲ್ಲೆ ಪಾಂಡವಪುರ ತಾಲೂಕಿನ ಕನಗನಹಳ್ಳಿ ಗ್ರಾಮದಲ್ಲಿ ಚಿರತೆಯು ನಾಯಿಯೊಂದನ್ನ ಹೊತ್ತೊಯ್ದು ತಿಂದು ಹಾಕಿದ ಘಟನೆ ಇಂದು(ಏ.28) ಮುಂಜಾನೆ 3.30 ಗಂಟೆ ಸುಮಾರಿಗೆ ನಡೆದಿದೆ. ಬಳಿಕ ಜಮೀನಿನ ಬಳಿ ರೈತರಿಗೆ ಚಿರತೆ ಕಾಣಿಸಿಕೊಂಡು‌‌ ಆತಂಕ ಹುಟ್ಟಿಸಿದೆ. ಕಳೆದ ಒಂದು ತಿಂಗಳಿನಿಂದ ಗ್ರಾಮದ ಅಸುಪಾಸಿನಲ್ಲಿ‌ ಕಾಣಿಸಿಕೊಳ್ಳುತ್ತಿದೆ. ಕೂಡಲೇ ಬೋನು ಇರಿಸಿ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರ ಮನವಿ ಮಾಡಿದ್ದಾರೆ. ಇನ್ನು ನಾಯಿ ಮೇಲೆ ಚಿರತೆ ದಾಳಿ ಮಾಡಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಬಳ್ಳಾರಿ: ಮದುವೆ ದಿಬ್ಬಣದ ಲಾರಿ ಪಲ್ಟಿ; ಇಬ್ಬರು ಸ್ಥಳದಲ್ಲೇ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಬೈಕ್ ವ್ಹೀಲಿಂಗ್ ಆಯ್ತು ಇದೀಗ ಆಟೋದಲ್ಲಿ ಡೆಡ್ಲಿ ವ್ಹೀಲಿಂಗ್

ಬೆಂಗಳೂರು: ಬೈಕ್ ವ್ಹೀಲಿಂಗ್ ಆಯ್ತು ಇದೀಗ ಆಟೋದಲ್ಲಿ ಡೆಡ್ಲಿ ವ್ಹೀಲಿಂಗ್ ಶುರುವಾಗಿದೆ. ಹೌದು ಎರಡು ಚಕ್ರದಲ್ಲಿ ಆಟೊ ಚಲಾಯಿಸಿ ಪುಂಡಾಟ ಮೆರೆದ ಘಟನೆ ನಿನ್ನೆ(ಏ.27) ತಡರಾತ್ರಿ ದೇವೇಗೌಡ ಪೆಟ್ರೋಲ್ ಬಂಕ್ ಫ್ಲೈಓವರ್ ನಲ್ಲಿ ನಡೆದಿದೆ. ಘಟನೆಯ ಡೆಡ್ಲಿ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ನಂಬರ್ ಪ್ಲೇಟ್ ಇಲ್ಲದ ಆಟೋದಲ್ಲಿ ಸ್ಟಂಟ್ ಮಾಡಲಾಗಿದೆ. ಈ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ತಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:21 pm, Sun, 28 April 24

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?