AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ನಿಯಮ ಮೀರಿ ಮದ್ಯ ಮಾರಾಟ! ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ

ಕೋಲಾರ ಜಿಲ್ಲೆಯಲ್ಲಿ ನಿಮಗೆ ಹಗಲು ರಾತ್ರಿ ಊಟ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ಎಣ್ಣೆ ಹೆಚ್ಚು ಕಡಿಮೆ ದಿನದ 24 ಗಂಟೆಯೂ ಸಿಗುತ್ತದೆ. ನೀವು ಈ ಜಿಲ್ಲೆಯ ಗಡಿಯೊಳಗೆ ಬಂದರೆ ಸಾಕು ನಿಮಗೆ ಯಾವ ಹಳ್ಳಿಯಾದರೂ ಸರಿ, ಯಾವ ಪಟ್ಟಣವಾದರೂ ಸರಿ ಊಟ, ತಿಂಡಿ, ಕಾಫಿ ಸಿಗಲಿಲ್ಲ ಅಂದರೂ ಎಣ್ಣೆ ಮಾತ್ರ ಸಿಕ್ಕೇ ಸಿಗುತ್ತದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಕೋಲಾರದಲ್ಲಿ ನಿಯಮ ಮೀರಿ ಮದ್ಯ ಮಾರಾಟ! ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ
ಕೋಲಾರದಲ್ಲಿ ನಿಯಮ ಮೀರಿ ಮದ್ಯ ಮಾರಾಟ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 15, 2024 | 8:49 PM

Share

ಕೋಲಾರ, ಮೇ.15: ಕೋಲಾರ(Kolar) ನಗರ ಅಥವಾ ಆಂಧ್ರ, ತಮಿಳುನಾಡಿನ ಗಡಿಯಲ್ಲೇ ಇರಲಿ ಯಾವ ಸಮಯದಲ್ಲಾದರೂ ಮದ್ಯ ಸಿಗುತ್ತದೆ. ಕೋಲಾರದಲ್ಲಿ ಸದ್ಯ ಅಬಕಾರಿ ಇಲಾಖೆ(Excise department) ಇದ್ದು ಇಲ್ಲದಂತಾಗಿದ್ದು, ಹಾಗಾಗಿ ಜಿಲ್ಲೆಯಲ್ಲಿ ಬಾರ್​ಗಳ ಅಬ್ಬರ ಜೊರಾಗಿದೆ. ಬಾರ್​ಗಳನ್ನು ಯಾವಾಗ ಬೇಕಾದರೂ ತೆಗೆಯಬಹುದು, ಮುಚ್ಚಬಹುದು. ಇಲ್ಲಿ ಯಾರೂ ಹೇಳುವವರಿಲ್ಲ. ಕೋಲಾರ ಜಿಲ್ಲೆಯ ಬಹುತೇಕ ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 6 ಗಂಟೆಗೆ ಬಾರ್​ಗಳು ತೆರೆದಿರುತ್ತವೆ. ಅಷ್ಟೇ ಅಲ್ಲ, ಜಿಲ್ಲೆಯ ಆಂಧ್ರ ಮತ್ತು ತಮಿಳುನಾಡಿನ ಗಡಿಯಲ್ಲೂ ಕೂಡ ಬಾರ್​ಗಳು ದಿನದ 24 ಗಂಟೆಯೂ ಕೆಲಸ ಮಾಡುತ್ತವೆ.

ಇನ್ನು ಕೋಲಾರದಲ್ಲಿ ಬಾರ್​ಗಳು, ಅದರಲ್ಲೂ ಸಿಎಲ್​-7 ಗಳು ನಾಯಿ ಕೊಡೆಗಳಂತೆ ತಲೆ ಎತ್ತಿವೆ. ಕಳೆದೊಂದು ವರ್ಷದಲ್ಲಿ ನಿರೀಕ್ಷೆಗೂ ಮೀರಿದ ಬಾರ್​ಗಳು ತೆರೆಯಲಾಗಿವೆ. ಅದರಲ್ಲೂ ಆಂಧ್ರದಲ್ಲಿ ಮದ್ಯದ ಬೆಲೆ ಹೆಚ್ಚಳ ಮಾಡಿದ ಹಿನ್ನೆಲೆ ಹಾಗೂ ಮದ್ಯದ ಗುಣಮಟ್ಟ ಸರಿ ಇಲ್ಲ ಎನ್ನುವ ಕಾರಣಕ್ಕೆ ಆಂಧ್ರದ ಮದ್ಯ ಪ್ರಿಯರು ಕರ್ನಾಟಕದ ಗಡಿಯ ಬಾರ್​ಗಳಿಗೆ ಕುಡಿಯಲು ಬರುತ್ತಾರೆ ಎನ್ನುವ ಕಾರಣಕ್ಕೆ ನಗರ ಪ್ರದೇಶದ ಬಾರ್​ಗಳನ್ನು ಗಡಿಗೆ ಸ್ಥಳಾಂತರ ಮಾಡಿದ್ದಾರೆ. ಅಲ್ಲದೆ ಹೊಸದಾಗಿ ಬಾರ್​ಗಳನ್ನು ತೆರೆಯಲಾಗಿದೆ. ಹಾಗಾಗಿ ಅಬಕಾರಿ ಇಲಾಖೆ ನಮಗೆ ವ್ಯಾಪಾರ ಆದರೆ ಸಾಕು ಎಂದು ತಲೆ ಕೆಡಿಸಿಕೊಳ್ಳುತ್ತಿಲ್ಲ.

ಇದನ್ನೂ ಓದಿ:ಮದ್ಯಪ್ರಿಯರಿಗೆ ಗುಡ್​ನ್ಯೂಸ್ ; ಮದ್ಯ ಮಾರಾಟ ನಿಷೇಧ ಅವಧಿ ಇಳಿಕೆ!

ಯಾರಾದರೂ ದೂರು ಕೊಟ್ಟರೂ ಕೂಡ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಬಾರ್​ ಮಾಲೀಕರು ಹಾಗೂ ಮದ್ಯ ಪ್ರಿಯರಿಗೆ ಕಡಿವಾಣ ಇಲ್ಲದಂತಾಗಿದೆ. ಕೂಡಲೇ ಸರ್ಕಾರ ಕುಡಿದ ಮತ್ತಿನಲ್ಲಿರುವ ಅಬಕಾರಿ ಇಲಾಖೆಯನ್ನು ಬಡಿದೆಚ್ಚರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಒಟ್ಟಾರೆ ಕೋಲಾರದಲ್ಲಿ ಏನು ಸಿಗುತ್ತದೇಯೋ, ಇಲ್ಲವೋ ಗೊತ್ತಿಲ್ಲ. ಆದರೆ, ಹೆಜ್ಜೆ ಹೆಜ್ಜೆಗೂ ಎಣ್ಣೆಯಂತೂ ಸಿಗುತ್ತಿದೆ. ಹಾಗಾಗಿ ಜಿಲ್ಲೆಯಲ್ಲಿ ಮದ್ಯ ಪ್ರಿಯರ ಸಂಖ್ಯೆ ಕೂಡ ಖುಷಿಯಾಗಿ ಎಲ್ಲೆಂದರಲ್ಲಿ ಕುಡಿದು ಮಲಗಿರುತ್ತಾರೆ. ಒಂದು ಕಾಲದಲ್ಲಿ ಚಿನ್ನದ ನಾಡು ಎಂದು ಹೆಸರು ಪಡೆದಿದ್ದ ಜಿಲ್ಲೆ, ಸದ್ಯ ಈಗ ಕುಡುಕರ ಸ್ವರ್ಗ ಎನ್ನುವ ಹೆಸರು ಪಡೆಯುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Wed, 15 May 24

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ