AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದು ಪೊಲೀಸ್​ ಪೇದೆ ಎಸ್ಕೇಫ್​

ಬೇಲಿಯೇ ಎದ್ದು ಹೊಲ ಮೆಯ್ದಂತೆ" ಎನ್ನುವ ಗಾದೆ ಮಾತಿನಂತೆ ಖದೀಮರನ್ನ ಹಿಡಿಯುವ ಪೊಲೀಸರೇ ಕಳ್ಳರಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet) ಠಾಣೆಯ ಅಪರಾಧ ವಿಭಾಗದ ಪೊಲೀಸ್​ ಪೇದೆ ಅನಿಲ್ ಎಂಬಾತ ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ ಅರ್ಧ ಕೆಜಿ ಚಿನ್ನವನ್ನು ಕದ್ದು ಎಸ್ಕೇಫ್​ ಆಗಿದ್ದಾನೆ.

ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದು ಪೊಲೀಸ್​ ಪೇದೆ ಎಸ್ಕೇಫ್​
ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:May 17, 2024 | 7:17 PM

Share

ಕೋಲಾರ, ಮೇ.17: ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ ಅರ್ಧ ಕೆಜಿ ಚಿನ್ನವನ್ನು ಕ್ರೈಂ ವಿಭಾಗದ ಪೊಲೀಸ್ ಕಾನ್ಸ್​ಟೇಬಲ್​ ​ಕಳವು ಮಾಡಿದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet) ಠಾಣೆಯ ಅಪರಾಧ ವಿಭಾಗದ ಪೊಲೀಸ್​ ಪೇದೆ ಅನಿಲ್ ಎಂಬಾತ ​ಈ ಕೃತ್ಯ ಎಸಗಿದ್ದಾನೆ. ಫೆಬ್ರವರಿ 25ರಂದು ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ಚಿನ್ನದ ವ್ಯಾಪಾರಿ ಗೌತಮ್ ಚಂದ್​ಗೆ ಸೇರಿದ 2 ಕೆಜಿ ಚಿನ್ನ ಕಳ್ಳತನವಾಗಿತ್ತು. ಈ ಪೈಕಿ 1 ಕೆ.ಜಿ 408 ಗ್ರಾಂ ರಿಕವರಿ ಮಾಡಲಾಗಿತ್ತು. ಆದರೆ, ಇದರಲ್ಲಿ 582 ಗ್ರಾಂ ಚಿನ್ನ ನಾಪತ್ತೆಯಾಗಿತ್ತು.

ಹೌದು, 1 ಕೋಟಿ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣದ ಬದಲು, 1 ಕೋಟಿ 6 ಲಕ್ಷ ಮೌಲ್ಯದ ಚಿನ್ನಾಭರಣವನ್ನ ಮಾತ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ಕಳೆದ 15 ದಿನಗಳಿಂದ ಅಂದರೆ, ಲೋಕಸಭೆ ಚುನಾವಣೆ 2ನೇ ಹಂತದ ಮತದಾನದ ನಂತರ ಕ್ರೈಂ ಕಾನ್ಸ್​ಟೇಬಲ್ ಅನಿಲ್ ನಾಪತ್ತೆಯಾಗಿದ್ದಾನೆ. ಇದೀಗ ಚಿನ್ನಾಭರಣ ಕಳವು ಪ್ರಕರಣ ಸಂಬಂಧ ಐವರನ್ನು ಬಂಧಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸುವಂತೆ ಕೆಜಿಎಫ್ DySPಗೆ ಎಸ್​ಪಿ ಶಾಂತರಾಜು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಸಿಎಂ ನಿವಾಸದ ಕೂಗಳತೆ ದೂರದಲ್ಲೇ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ: ಅಸ್ಸಾಂ ಮೂಲದ ವ್ಯಕ್ತಿಯ ಬಂಧನ

ನಿವೃತ್ತ ನೌಕರನ ಹಣ ದೋಚಿದ ಕಳ್ಳರು

ವಿಜಯಪುರ: ತಾಳಿಕೋಟೆ ಪಟ್ಟಣದ ಯೂನಿಯನ್ ಬ್ಯಾಂಕ್​ ಬಳಿ ನಿವೃತ್ತ ನೌಕರನ ಗಮನ ಬೇರೆಡೆ ಸೆಳೆದು 2.20 ಲಕ್ಷ ರೂ. ಹಣವನ್ನು ಕಳ್ಳರು ದೋಚಿದ್ದಾರೆ. ನಿವೃತ್ತ ನೌಕರ ನಾಗಪ್ಪ ಅಮರಪ್ಪ ಕೆಂಭಾವಿ ಹಣ ಕಳೆದುಕೊಂಡವರು. ಬ್ಯಾಂಕ್​ನಲ್ಲಿ ಹಣ ಡ್ರಾ ಮಾಡಿಕೊಳ್ಳುವಾಗ ನಾಗಪ್ಪರನ್ನು ಹಿಂಬಾಲಿಸಿದ್ದ ಖದೀಮರು, ಬ್ಯಾಂಕ್ ಹೊರಗಡೆ ಬಂದು ನಿಂತಾಗ ಗಮನ ಬೇರೆಡೆ ಸೆಳೆದು ಹಣ ಕಿತ್ತುಕೊಂಡು ಬೈಕ್​ನಲ್ಲಿ ಪರಾರಿಯಾಗಿದ್ದು, ಈ ಕುರಿತು ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Fri, 17 May 24

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್