ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದು ಪೊಲೀಸ್​ ಪೇದೆ ಎಸ್ಕೇಫ್​

| Updated By: ಕಿರಣ್ ಹನುಮಂತ್​ ಮಾದಾರ್

Updated on: May 17, 2024 | 7:17 PM

ಬೇಲಿಯೇ ಎದ್ದು ಹೊಲ ಮೆಯ್ದಂತೆ" ಎನ್ನುವ ಗಾದೆ ಮಾತಿನಂತೆ ಖದೀಮರನ್ನ ಹಿಡಿಯುವ ಪೊಲೀಸರೇ ಕಳ್ಳರಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet) ಠಾಣೆಯ ಅಪರಾಧ ವಿಭಾಗದ ಪೊಲೀಸ್​ ಪೇದೆ ಅನಿಲ್ ಎಂಬಾತ ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ ಅರ್ಧ ಕೆಜಿ ಚಿನ್ನವನ್ನು ಕದ್ದು ಎಸ್ಕೇಫ್​ ಆಗಿದ್ದಾನೆ.

ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದು ಪೊಲೀಸ್​ ಪೇದೆ ಎಸ್ಕೇಫ್​
ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ
Follow us on

ಕೋಲಾರ, ಮೇ.17: ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ ಅರ್ಧ ಕೆಜಿ ಚಿನ್ನವನ್ನು ಕ್ರೈಂ ವಿಭಾಗದ ಪೊಲೀಸ್ ಕಾನ್ಸ್​ಟೇಬಲ್​ ​ಕಳವು ಮಾಡಿದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet) ಠಾಣೆಯ ಅಪರಾಧ ವಿಭಾಗದ ಪೊಲೀಸ್​ ಪೇದೆ ಅನಿಲ್ ಎಂಬಾತ ​ಈ ಕೃತ್ಯ ಎಸಗಿದ್ದಾನೆ. ಫೆಬ್ರವರಿ 25ರಂದು ಬಂಗಾರಪೇಟೆ ಬಸ್ ನಿಲ್ದಾಣದಲ್ಲಿ ಚಿನ್ನದ ವ್ಯಾಪಾರಿ ಗೌತಮ್ ಚಂದ್​ಗೆ ಸೇರಿದ 2 ಕೆಜಿ ಚಿನ್ನ ಕಳ್ಳತನವಾಗಿತ್ತು. ಈ ಪೈಕಿ 1 ಕೆ.ಜಿ 408 ಗ್ರಾಂ ರಿಕವರಿ ಮಾಡಲಾಗಿತ್ತು. ಆದರೆ, ಇದರಲ್ಲಿ 582 ಗ್ರಾಂ ಚಿನ್ನ ನಾಪತ್ತೆಯಾಗಿತ್ತು.

ಹೌದು, 1 ಕೋಟಿ 40 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣದ ಬದಲು, 1 ಕೋಟಿ 6 ಲಕ್ಷ ಮೌಲ್ಯದ ಚಿನ್ನಾಭರಣವನ್ನ ಮಾತ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ಕಳೆದ 15 ದಿನಗಳಿಂದ ಅಂದರೆ, ಲೋಕಸಭೆ ಚುನಾವಣೆ 2ನೇ ಹಂತದ ಮತದಾನದ ನಂತರ ಕ್ರೈಂ ಕಾನ್ಸ್​ಟೇಬಲ್ ಅನಿಲ್ ನಾಪತ್ತೆಯಾಗಿದ್ದಾನೆ. ಇದೀಗ ಚಿನ್ನಾಭರಣ ಕಳವು ಪ್ರಕರಣ ಸಂಬಂಧ ಐವರನ್ನು ಬಂಧಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸುವಂತೆ ಕೆಜಿಎಫ್ DySPಗೆ ಎಸ್​ಪಿ ಶಾಂತರಾಜು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಸಿಎಂ ನಿವಾಸದ ಕೂಗಳತೆ ದೂರದಲ್ಲೇ ಕೆಜಿಗಟ್ಟಲೇ ಚಿನ್ನಾಭರಣ ಕಳ್ಳತನ: ಅಸ್ಸಾಂ ಮೂಲದ ವ್ಯಕ್ತಿಯ ಬಂಧನ

ನಿವೃತ್ತ ನೌಕರನ ಹಣ ದೋಚಿದ ಕಳ್ಳರು

ವಿಜಯಪುರ: ತಾಳಿಕೋಟೆ ಪಟ್ಟಣದ ಯೂನಿಯನ್ ಬ್ಯಾಂಕ್​ ಬಳಿ ನಿವೃತ್ತ ನೌಕರನ ಗಮನ ಬೇರೆಡೆ ಸೆಳೆದು 2.20 ಲಕ್ಷ ರೂ. ಹಣವನ್ನು ಕಳ್ಳರು ದೋಚಿದ್ದಾರೆ. ನಿವೃತ್ತ ನೌಕರ ನಾಗಪ್ಪ ಅಮರಪ್ಪ ಕೆಂಭಾವಿ ಹಣ ಕಳೆದುಕೊಂಡವರು. ಬ್ಯಾಂಕ್​ನಲ್ಲಿ ಹಣ ಡ್ರಾ ಮಾಡಿಕೊಳ್ಳುವಾಗ ನಾಗಪ್ಪರನ್ನು ಹಿಂಬಾಲಿಸಿದ್ದ ಖದೀಮರು, ಬ್ಯಾಂಕ್ ಹೊರಗಡೆ ಬಂದು ನಿಂತಾಗ ಗಮನ ಬೇರೆಡೆ ಸೆಳೆದು ಹಣ ಕಿತ್ತುಕೊಂಡು ಬೈಕ್​ನಲ್ಲಿ ಪರಾರಿಯಾಗಿದ್ದು, ಈ ಕುರಿತು ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:12 pm, Fri, 17 May 24