AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ ಟಿಕೆಟ್ ವಿಚಾರಕ್ಕೆ ಕಿರಿಕ್​​; ಕಂಡಕ್ಟರ್ ಮೇಲೆ ಹೋಂಗಾರ್ಡ್​ನಿಂದ ಹಲ್ಲೆ, ಇಬ್ಬರ ಬಂಧನ

ಬಸ್​ ಟಿಕೆಟ್ ವಿಚಾರಕ್ಕೆ ಕಿರಿಕ್​​; ಕಂಡಕ್ಟರ್ ಮೇಲೆ ಹೋಂಗಾರ್ಡ್​ನಿಂದ ಹಲ್ಲೆ, ಇಬ್ಬರ ಬಂಧನ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 28, 2024 | 5:08 PM

Share

ಕೋಲಾರ ಜಿಲ್ಲೆಯ ಮುಳಬಾಗಿಲು(Mulabagilu) ತಾಲೂಕಿನ ಅಗರ ಗ್ರಾಮದಲ್ಲಿ ಬಸ್​ ಟಿಕೆಟ್​ ಕೊಡುವ ವಿಚಾರದಲ್ಲಿ ಕಂಡಕ್ಟರ್​(Conductor) ಮತ್ತು ಹೋಂಗಾರ್ಡ್(Home guard)​ ನಡುವೆ ಗಲಾಟೆ​ ಆಗಿದ್ದು, ರಸ್ತೆ ನಡುವೆಯೇ ಹೋಂಗಾರ್ಡ್ ಮತ್ತು ಆತನ ಸಹೋದರ ಸೇರಿ ಕಂಡಕ್ಟರ್​​ನನ್ನು ಕೆಳಗೆ ಬೀಳಿಸಿ ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಘಟನೆ ನಡೆದಿದೆ.

ಕೋಲಾರ, ಮೇ.28: ಬಸ್​ ಟಿಕೆಟ್​ ಕೊಡುವ ವಿಚಾರದಲ್ಲಿ ಕಂಡಕ್ಟರ್​(Conductor) ಮತ್ತು ಹೋಂಗಾರ್ಡ್(Home guard)​ ನಡುವೆ ಗಲಾಟೆ​ ಆಗಿದ್ದು, ರಸ್ತೆ ನಡುವೆಯೇ ಹೋಂಗಾರ್ಡ್ ಅನುದೀಪ್ ಮತ್ತು ಆತನ ಸಹೋದರ ಪ್ರದೀಪ್ ಸೇರಿ ಕಂಡಕ್ಟರ್​​ನನ್ನು ಕೆಳಗೆ ಬೀಳಿಸಿ ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು(Mulabagilu) ತಾಲೂಕಿನ ಅಗರ ಗ್ರಾಮದಲ್ಲಿ ನಡೆದಿದೆ. ಟಿಕೆಟ್​ ತೆಗೆದುಕೊಳ್ಳುವಂತೆ ಹೇಳಿದ್ದಕ್ಕೆ ಕಂಡಕ್ಟರ್​ ನಾಗರಾಜಪ್ಪನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಹೋಂಗಾರ್ಡ್​ ಅನುದೀಪ್​ ಹಾಗೂ ಆತನ ಸೋದರ ಪ್ರದೀಪ್ ಅವರನ್ನು​ ಬಂಧಿಸಿ, ಮುಳಬಾಗಿಲು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಈ ಹಲ್ಲೆಯ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More