ಬಸ್ ಟಿಕೆಟ್ ವಿಚಾರಕ್ಕೆ ಕಿರಿಕ್; ಕಂಡಕ್ಟರ್ ಮೇಲೆ ಹೋಂಗಾರ್ಡ್ನಿಂದ ಹಲ್ಲೆ, ಇಬ್ಬರ ಬಂಧನ
ಕೋಲಾರ ಜಿಲ್ಲೆಯ ಮುಳಬಾಗಿಲು(Mulabagilu) ತಾಲೂಕಿನ ಅಗರ ಗ್ರಾಮದಲ್ಲಿ ಬಸ್ ಟಿಕೆಟ್ ಕೊಡುವ ವಿಚಾರದಲ್ಲಿ ಕಂಡಕ್ಟರ್(Conductor) ಮತ್ತು ಹೋಂಗಾರ್ಡ್(Home guard) ನಡುವೆ ಗಲಾಟೆ ಆಗಿದ್ದು, ರಸ್ತೆ ನಡುವೆಯೇ ಹೋಂಗಾರ್ಡ್ ಮತ್ತು ಆತನ ಸಹೋದರ ಸೇರಿ ಕಂಡಕ್ಟರ್ನನ್ನು ಕೆಳಗೆ ಬೀಳಿಸಿ ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಘಟನೆ ನಡೆದಿದೆ.
ಕೋಲಾರ, ಮೇ.28: ಬಸ್ ಟಿಕೆಟ್ ಕೊಡುವ ವಿಚಾರದಲ್ಲಿ ಕಂಡಕ್ಟರ್(Conductor) ಮತ್ತು ಹೋಂಗಾರ್ಡ್(Home guard) ನಡುವೆ ಗಲಾಟೆ ಆಗಿದ್ದು, ರಸ್ತೆ ನಡುವೆಯೇ ಹೋಂಗಾರ್ಡ್ ಅನುದೀಪ್ ಮತ್ತು ಆತನ ಸಹೋದರ ಪ್ರದೀಪ್ ಸೇರಿ ಕಂಡಕ್ಟರ್ನನ್ನು ಕೆಳಗೆ ಬೀಳಿಸಿ ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು(Mulabagilu) ತಾಲೂಕಿನ ಅಗರ ಗ್ರಾಮದಲ್ಲಿ ನಡೆದಿದೆ. ಟಿಕೆಟ್ ತೆಗೆದುಕೊಳ್ಳುವಂತೆ ಹೇಳಿದ್ದಕ್ಕೆ ಕಂಡಕ್ಟರ್ ನಾಗರಾಜಪ್ಪನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಹೋಂಗಾರ್ಡ್ ಅನುದೀಪ್ ಹಾಗೂ ಆತನ ಸೋದರ ಪ್ರದೀಪ್ ಅವರನ್ನು ಬಂಧಿಸಿ, ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಈ ಹಲ್ಲೆಯ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

