ಬೆಟ್ಟಿಂಗ್​ಗೆ ವೇದಿಕೆಯಾದ ಲೋಕಸಭಾ ಚುನಾವಣಾ ಫಲಿತಾಂಶ; ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನೇರಾನೇರ ಬಾಜಿ

ವರ್ಷಕ್ಕೊಮ್ಮೆ ನಡೆಯುವ ಐಪಿಎಲ್​ ಕ್ರಿಕೆಟ್ ಪಂದ್ಯ​ಕ್ಕೆ ಜನರು ಮುಗಿಬಿದ್ದು ಬೆಟ್ಟಿಂಗ್ ಆಡುತ್ತಾರೆ,​ ಇನ್ನು ಐದು ವರ್ಷಕ್ಕೊಮ್ಮೆ ಬರುವ ದೇಶದ ಚುನಾವಣೆಗೆ ಬಾಜಿ ಕಟ್ಟುವವರ ಸಂಖ್ಯೆ ಹೇಗಿರಬೇಡ, ಅದರಲ್ಲೂ ಆಂಧ್ರ ಹಾಗೂ ತಮಿಳುನಾಡಿನ ಗಡಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಬೆಟ್ಟಿಂಗ್​ ಭರಾಟೆ ಜೋರಾಗಿಯೇ ನಡೆಯುತ್ತಿದೆ.

ಬೆಟ್ಟಿಂಗ್​ಗೆ ವೇದಿಕೆಯಾದ ಲೋಕಸಭಾ ಚುನಾವಣಾ ಫಲಿತಾಂಶ; ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನೇರಾನೇರ ಬಾಜಿ
ಕೋಲಾರದಲ್ಲಿ ಹೆಚ್ಚಾದ ಲೋಕಸಭಾ ಬೆಟ್ಟಿಂಗ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: May 01, 2024 | 3:21 PM

ಕೋಲಾರ, ಮೇ.01: ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಪಟ್ಟಿಗೆ ಸೇರಾಗಿದೆ. ಹೀಗಿರುವಾಗ ಕೋಲಾರ(Kolar)ದಲ್ಲಿ ನಾಲ್ಕು ಜನರು ಸೇರಿದ್ರೆ ಮಾತು ಶುರುವಾಗೋದೆ ಚುನಾವಣೆ ಏನಾಗಬಹುದೆಂದು. ಈ ಬಾರಿ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ, ಯಾರು ಸೋಲ್ತಾರೆ, ಎನ್ನುವುದೊಂದೇ ಲೆಕ್ಕಾಚಾರ. ಅದರಲ್ಲೂ ತಮ್ಮ ತಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗಂತು ರಾತ್ರಿ ಹೊತ್ತು ನಿದ್ದೆ ಬರುತ್ತಿಲ್ಲ. ಅದರಲ್ಲೂ ಚುನಾವಣೆಯ ಫಲಿತಾಂಶಕ್ಕೆ ಬರೋಬ್ಬರಿ ಒಂದುವರೆ ತಿಂಗಳು ಕಾಯಬೇಕಾದ ಪರಿಸ್ಥಿತಿ ಇರುವ ಕಾರಣ ಕುತೂಹಲ ದುಪ್ಪಟ್ಟಾಗುತ್ತಿದ್ದು, ಬೆಟ್ಟಿಂಗ್(Betting)​ ಆಗಿ ಪರಿವರ್ತನೆಯಾಗುತ್ತಿದೆ.

ಬೆಟ್ಟಿಂಗ್​ಗೆ ವೇದಿಕೆಯಾದ ಲೋಕಸಭಾ ಚುನಾವಣೆ

ಚುನಾವಣೆ ಮುಗಿದು ಆರು ದಿನ ಕಳೆದಿದೆ ಈಗ ರಿಲ್ಯಾಕ್ಸ್ ಮೂಡ್​ನಿಂದ ಹೊರ ಬಂದಿರುವ ಕಾರ್ಯಕರ್ತರು ಹಾಗೂ ಮುಖಂಡರಂತೂ ಎಲ್ಲೆಲ್ಲೂ ಒಂದೇ ಮಾತು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಮಲ್ಲೇಶ್​ ಬಾಬು ಗೆಲ್ತಾರಾ ಅಥವಾ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್​ ಗೆಲ್ಲುತ್ತಾರಾ ಎಂದು. ಈ ಹಿನ್ನಲೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಚುನಾವಣೆಯಲ್ಲಿ ತಮ್ಮ ತಮ್ಮ ಅಭ್ಯರ್ಥಿ ಪರವಾಗಿ ಬೆಟ್ಟಿಂಗ್​ ಆಡೋದಕ್ಕೆ ಶುರುಮಾಡಿದ್ದಾರೆ.

ಬಾಜಿಯಲ್ಲಿವೆ ಕುರಿ, ಕೋಳಿ, ಜಮೀನು

ಇನ್ನು ಐಪಿಎಲ್​ ಕ್ರಿಕೆಟ್​ ಮ್ಯಾಚ್​ಗಳಲ್ಲಿ ಬೆಟ್ಟಿಂಗ್ ಕಟ್ಟಲು ಪ್ರತ್ಯೇಕ ವೆಬ್​ ಸೈಟ್​, ಮೊಬೈಲ್​ ಅಪ್ಲಿಕೇಷನ್​ ಗಳು ಇರುತ್ತವೆ. ಆದರೆ, ಇಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡೆವೆ ನೇರಾನೇರ ಬೆಟ್ಟಿಂಗ್ ನಡೆಯುತ್ತದೆ. ಒಂದು ಗ್ರಾಮದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಬೆಟ್ಟಿಂಗ್​ ಕಟ್ಟಿಕೊಳ್ಳುತ್ತಿದ್ದಾರೆ. ಪ್ರಮುಖವಾಗಿ ತಮ್ಮ ನೆಚ್ಚಿನ ನಾಯಕನ ಪರವಾಗಿ ಲಕ್ಷಾಂತರ ರೂಪಾಯಿ ಬೆಟ್ಟಿಂಗ್ ಕಟ್ಟಲಾಗುತ್ತಿದೆ. ಈ ಬೆಟ್ಟಿಂಗ್​ನಲ್ಲಿ ಕೇವಲ ಹಣವಷ್ಟೇ ಅಲ್ಲ, ಬೈಕ್​, ಕಾರು, ಕುರಿ, ಕೋಳಿ, ಮೇಕೆ, ಹಸು, ಜೊತೆಗೆ ಬೆಲೆಬಾಳುವ ಭೂಮಿಯನ್ನು ಕೂಡ ಪಣಕ್ಕಿಡಲಾಗಿದೆಯಂತೆ.
ಕೇವಲ ಚುನಾವಣೆ ಸಂಬಂಧವೇ ಜಿಲ್ಲೆಯಾಧ್ಯಂತ ಕೋಟ್ಯಾಂತರ ರೂಪಾಯಿ ಬೆಟ್ಟಿಂಗ್ ಗುಪ್ತ ಗುಪ್ತಾಗಿ​ ನಡೆಯುತ್ತಿದೆ ಎನ್ನಲಾಗಿದೆ. ಚುಣಾವಣೆಗೆ ಮುನ್ನವೇ ಅಭ್ಯರ್ಥಿಗಳ ಪರವಾದ ಟ್ರೆಂಡ್​ ನೋಡಿ ಬೆಟ್ಟಿಂಗ್ ಕಟ್ಟಲಾಗಿತ್ತಂತೆ. ಆದರೆ, ಈಗ ಚುನಾವಣೆ ಮತದಾನ ಪ್ರಕ್ರಿಯೆ ಮುಗಿದ ನಂತರ ಯಾರು ಗೆಲ್ಲಬಹುದು ಎನ್ನುವ ಒಂದು ಲೆಕ್ಕಾಚಾರ ಸಿಕ್ಕಿದೆ. ಹಾಗಾಗಿ ಬೆಟ್ಟಿಂಗ್​ ಕಟ್ಟುವವರ ಸಂಖ್ಯೆ ದುಪ್ಪಾಟ್ಟಾಗಿದೆ. ಇದು ಗುಟ್ಟು ಗುಟ್ಟಾಗಿ ವಿವಿಧ ಪಕ್ಷಗಳ ಕಾರ್ಯಕರ್ತರ ನಡುವೆ ನಡೆಯುವ ಬೆಟ್ಟಿಂಗ್ ಆಗಿದೆ.
ನಗರ ಪ್ರದೇಶದಲ್ಲಿ ಹಣ ವಾಹನ, ಚಿನ್ನ ಬೆಳ್ಳಿ, ಮೊಬೈಲ್​​ ಈ ರೀತಿ ಬೆಟ್ಟಿಂಗ್​ ನಡೆಯುತ್ತಿದ್ರೆ, ಗ್ರಾಮೀಣ ಭಾಗಗಳಲ್ಲಂತೂ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಕುರಿ, ಕೋಳಿ, ಹಸು, ಎಮ್ಮೆ ಇಲ್ಲಾ ಹಣವನ್ನು ಅಡವಿಟ್ಟು ಬೆಟ್ಟಿಂಗ್​ ನಡೆಯುತ್ತಿದೆ ಎನ್ನಲಾಗುತ್ತಿದೆ. ಇನ್ನು ಜಿಲ್ಲಾಡಳಿತ ಹಾಗೂ ಪೊಲೀಸ್  ಇಲಾಖೆ ಕೂಡ ಈ ಬೆಟ್ಟಿಂಗ್​ ನಿಯಂತ್ರಣ ಮಾಡೋದು ಕಷ್ಟದ ಕೆಲಸವಾಗಿದೆ. ಹೌದು, ಬೆಟ್ಟಿಂಗ್ ಆಡುವವರು ತಾವು ವೈಯಕ್ತಿಕವಾಗಿ ಬೆಟ್ಟಿಂಗ್​ ಕಟ್ಟಿಕೊಂಡಿರುತ್ತಾರೆ, ಹಾಗಾಗಿ ಯಾವುದೇ ಸಾಕ್ಷಿ, ಪುರಾವೆ ಸಿಗೋದಿಲ್ಲ ಎನ್ನಲಾಗುತ್ತಿದೆ. ಆದರೂ ಪೊಲೀಸ್​ ಇಲಾಖೆ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಾರ್ವಜನಿಕರ ಮನವಿ ಮಾಡಿದ್ದಾರೆ.
ಒಟ್ಟಾರೆ ಬೆಟ್ಟಿಂಗ್​ ಕಾನೂನು ಬಾಹಿರವಾದರೂ ಸದ್ಯದ ಪರಿಸ್ಥಿತಿಯಲ್ಲಿ ಕಾರ್ಯಕರ್ತರು ತಮ್ಮ ನಾಯಕನ ಗೆಲುವಿನ ಲೆಕ್ಕಾಚಾರ ಹಾಗೂ ಕುತೂಹಲದಲ್ಲಿ ಮುಳುಗಿದ್ದು, ಕಾರ್ಯಕರ್ತರ ಕುತೂಹಲಕ್ಕೆ ತೆರೆ ಬೀಳಲು ಇನ್ನು 34 ದಿನ ಬಾಕಿ ಇದ್ದು, ಯಾರು ಗೆಲ್ಲುತ್ತಾರೆ, ಯಾರು ಸೋಲ್ತಾರೆ, ಯಾರಿಗೆ ಲಾಭ, ಯಾರಿಗೆ ನಷ್ಟ ಎನ್ನುವುದು ತಿಳಿಯಲು ಮತಎಣಿಕೆ ಮುಗಿಯುವವರೆಗೆ ಕಾಯಲೇ ಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ