ಕೋಲಾರ: ಮಸೀದಿ ಎದುರು ಡಿಜೆ ಸೌಂಡ್ ಹಾಕಿದ್ದಕ್ಕೆ ಕೆಂಪೇಗೌಡರ ಪಲ್ಲಕ್ಕಿ ತಡೆದು ಗಲಾಟೆ

ಕರ್ನಾಟಕದೆಲ್ಲೆಡೆ ಇಂದು (ಜೂನ್ 27) ನಾಡಪ್ರಭು ಕೆಂಪೇಗೌಡರ 515 ನೇ ಜನ್ಮದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡಿದೆ. ಅದರಂತೆ ಕೋಲಾರದಲ್ಲಿ ಜಯಂತಿ ನಿಮಿತ್ತ ಕೆಂಪೇಗೌಡರ ಭಾವಚಿತ್ರ ವೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ನಡೆದಿದೆ, ಇನ್ನು ಗಲಾಟೆ ಆಗಿದ್ದೇಕೆ ಎನ್ನುವ ವಿವರ ಇಲ್ಲಿದೆ

Follow us
| Updated By: ರಮೇಶ್ ಬಿ. ಜವಳಗೇರಾ

Updated on:Jun 27, 2024 | 4:08 PM

ಕೋಲಾರ, (ಜೂನ್ 27): ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ನಿಮಿತ್ತ ಇಂದು (ಜೂನ್ 27) ಕೋಲಾರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ವಿವಿಧ ವಾದ್ಯಗಳೊಂದಿಗೆ ಕೆಂಪೇಗೌಡರ ಪಲ್ಲಕ್ಕಿಯನ್ನು ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಕೋಲಾರ ನಗರದ ಅರಹಳ್ಳಿ ಗೇಟಿ ಬಳಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಮಸೀದಿ ಎದುರು ಡಿಜೆ ಸೌಂಡ್ ಹಾಕಿಕೊಂಡು ಹೋಗಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಕೋಲಾರ ನಗರದ ಅರಹಳ್ಳಿ ಗೇಟಿ ಬಳಿಯ ಮಸೀದಿ ಮುಂದೆ ಡಿಜೆ ಸೌಂಡ್​ ಹಾಕಿದ್ದಕ್ಕೆ ಕೆಂಪೇಗೌಡರ ಪಲ್ಲಕ್ಕಿ ಮತ್ತು ಡಿಜೆ ತಡೆದು ಗಲಾಟೆ ಮಾಡಲಾಗಿದೆ. ಇದರಿಂದ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಇದು ಕೈ ಮೀರಿ ಹೋಗುವ ಮೊದಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಎರಡು ಗುಂಪುಗಳ ಜನರನ್ನು ಮನವೊಲಿಸಿದ್ದಾರೆ. ಈ ಗಲಾಟೆಯಿಂದಾಗಿ ಸ್ಥಳದಲ್ಲಿ ಕೆಲಕಾಲ‌ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಸರಿಯಾದ ಸಮಯಕ್ಕೆ ಪೊಲೀಸರು ಆಗಮಿಸಿದ್ದರಿಂದ ಎಲ್ಲವೂ ಬಗೆಹರಿದಿದೆ.

ಇದನ್ನೂ ಓದಿ: ಕೆಂಪೇಗೌಡ ಜಯಂತಿಗೆ ಕುಮಾರಸ್ವಾಮಿ, ದೇವೇಗೌಡ ಆಹ್ವಾನಿಸದ ವಿಚಾರ: ಡಿಕೆ ಶಿವಕುಮಾರ್​​ ಹೇಳಿದ್ದಿಷ್ಟು

ಕೆಂಪೇಗೌಡ ಜಯಂತಿಯಲ್ಲಿ ಅಸಭ್ಯ ನೃತ್ಯ

ಇನ್ನು ಇದೇ ಕೋಲಾರದಲ್ಲಿ ನಡೆದ ಕೆಂಪೇಗೌಡ ಜಯಂತಿ ಮೆರವಣಿಗೆಯಲ್ಲಿ ಮಂಗಳಮುಖಿಯರು ಅಸಭ್ಯ ನೃತ್ಯ ಮಾಡಿದ್ದಾರೆ. ಸಾರ್ವಜನಿಕವಾಗಿ ಅರ್ಧಂಬರ್ಧ, ತುಂಡು ಬಟ್ಟೆ ತೊಟ್ಟು ಯುವಕರೊಂದಿಗೆ ಆಶ್ಲೀಲ ನೃತ್ಯ ಮಾಡಿದ್ದಾರೆ. ಇದರಿಂದ ಮಹಿಳೆಯರು, ಮಕ್ಕಳು, ಹಿರಿಯರಿಗೆ ಮುಜುಗರ ಉಂಟಾಗಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:06 pm, Thu, 27 June 24

ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ