AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಮೈತುಂಬಾ ಗಾಯ, ಇನ್ಫೆಕ್ಷನ್ ಭೀತಿ; ಕೆಜಿಎಫ್‌ನಲ್ಲಿ ಅದೊಂದು ಹುಳು ಕಾಟಕ್ಕೆ ಜನರು ತತ್ತರ

Kolar News: ಕೋಲಾರದ ಕೆಜಿಎಫ್ ಬೋರಿಲಾಲ್ ಪೇಟೆಯಲ್ಲಿ ಲಕ್ಷಾಂತರ ಕಂಬಳಿ ಹುಳುಗಳ ಕಾಟದಿಂದ ಜನರು ತತ್ತರಿಸಿದ್ದಾರೆ. ಚರ್ಮದ ತುರಿಕೆ, ಗಾಯಗಳಿಂದ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ವಚ್ಛತೆಯ ಕೊರತೆ ಮತ್ತು ಹರಳು ಗಿಡಗಳ ಹೆಚ್ಚಳ ಇದಕ್ಕೆ ಕಾರಣವೆಂದಿದ್ದಾರೆ.

ಕೋಲಾರ: ಮೈತುಂಬಾ ಗಾಯ, ಇನ್ಫೆಕ್ಷನ್ ಭೀತಿ; ಕೆಜಿಎಫ್‌ನಲ್ಲಿ ಅದೊಂದು ಹುಳು ಕಾಟಕ್ಕೆ ಜನರು ತತ್ತರ
ಕಂಬಳಿ ಹುಳುImage Credit source: tv9 kannada
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Aug 27, 2026 | 9:25 PM

Share

ಕೋಲಾರ, ಆಗಸ್ಟ್​ 27: ಕೋಲಾರ (kolar) ಜಿಲ್ಲೆಯ ಕೆಜಿಎಫ್ ನಗರದ ಬೋರಿಲಾಲ್ ಪೇಟೆಯಲ್ಲಿ ಕಳೆದ ಕೆಲ ದಿನಗಳಿಂದ ಕಂಬಳಿ ಹುಳುಗಳ (Caterpillar) ಕಾಟ ಶುರುವಾಗಿದ್ದು, ಇಡೀ ಬಡಾವಣೆಯ ಜನರು ಬೆಚ್ಚಿಬಿದ್ದಿದ್ದಾರೆ. ಮನೆಯ ಗೋಡೆ, ಚಾವಣಿ, ರಸ್ತೆ, ಹಾಸಿಗೆ, ಒಣಹಾಕಿದ ಬಟ್ಟೆ ಹೀಗೆ ಎಲ್ಲಿ ನೋಡಿದರಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕಂಬಳಿ ಹುಳುಗಳು ಹರಿದಾಡುತ್ತಿದ್ದು, ಜನರಿಗೆ ಕೂರಲು, ನಿಲ್ಲಲು ಹಾಗೂ ನೆಮ್ಮದಿಯಿಂದ ನಿದ್ದೆ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಎದುರಾಗಿದೆ.

ನಡೆದಿದ್ದೇನು?

ಕೋಲಾರ ಜಿಲ್ಲೆಯ ಕೆಜಿಎಫ್​ ನಗರದ ಬೋರಿಲಾಲ್ ಪೇಟೆಯಲ್ಲಿ ಕಳೆದ ಕೆಲವು ದಿನಗಳಿಂದ ಜನರಿಗೆ ಕಂಬಳಿ ಹುಳುಗಳ ಕಾಟ ಹೆಚ್ಚಾಗಿದೆ. ಒಂದಲ್ಲ ಎರಡು ಲಕ್ಷಾಂತರ ಕಂಬಳಿ ಹುಳುಗಳು ಏರಿಯಾದ ಮನೆಗಳಿಗೆ ಬಂದು ಸೇರಿಕೊಂಡಿವೆ. ಮನೆಯ ಗೋಡೆಗಳ ಮೇಲೆ, ರಸ್ತೆಯಲ್ಲಿ, ಜನರ ಬಟ್ಟೆಯ ಮೇಲೆ ಹೀಗೆ ಎಲ್ಲೆಂದರಲ್ಲಿ ಕಂಬಳಿ ಹುಳುಗಳು ಕಾಣಿಸುತ್ತಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಮೈ ಕೆರೆತ, ಗಾಯ ಹಾಗೂ ಇನ್ಫೆಕ್ಷನ್ ಭೀತಿ

ಇನ್ನು ಈ ಕಂಬಳಿ ಹುಳುಗಳು ಕಚ್ಚಿದರೆ ಅಥವಾ ಮೈಮೇಲೆ ಓಡಾಡಿದರೆ ಸಾಕು ಮೈ ಕೆರೆತ, ತುರಿಗೆ ಉಂಟಾಗಿ ಮೈಮೇಲೆ ಗಾಯಗಳಾದಂತಾಗುತ್ತಿದೆ. ಇನ್ನು ಕೆಲವರಿಗೆ ಇನ್ಫೆಕ್ಷನ್ ರೀತಿ ಆಗಿ ಕೆರೆತದಿಂದ ಗಾಯಗಳಾಗುತ್ತಿದೆ. ಹಾಗಾಗಿ ದಿಕ್ಕು ಕಾಣದಂತಾಗಿರುವ ಬೋರಿಲಾಲ್ ಪೇಟೆಯ ಜನರು ಕೆಜಿಎಫ್ ನಗರಸಭೆ ಅಧಿಕಾರಿಗಳಿಗೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಂಬಳಿ ಹುಳುಗಳ ಕಾಟದಿಂದ ನಮ್ಮನ್ನು ರಕ್ಷಣೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ.

ಅಧಿಕಾರಿಗಳ ದಂಡು ಭೇಟಿ

ಇನ್ನು ಕಂಬಳಿ ಹುಳುಗಳಿಂದ ಬೋರಿಲಾಲ್ ಪೇಟೆಯ ಜನ ಅನುಭವಿಸುತ್ತಿರುವ ತೊಂದರೆ ಕುರಿತು ಮಾಹಿತಿ ತಿಳಿದ ತಕ್ಷಣ ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶ್ರೀನಿವಾಸ್ ಹಾಗೂ ಅಧಿಕಾರಿಗಳ ತಂಡ ಬೋರಿಲಾಲ್ ಪೇಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಬಡಾವಣೆಯಲ್ಲಿ ಸರಿಯಾದ ಸ್ವಚ್ಛತೆ ಇಲ್ಲದಿರುವುದು ಹಾಗೂ ಅಕ್ಕಪಕ್ಕದಲ್ಲಿ ವಿಪರೀತವಾಗಿ ಹರಳು ಗಿಡಗಳು (ಆವುಡಲಕಾಯಿ ಗಿಡಗಳು) ಬೆಳೆದಿರುವುದೇ ಈ ಕಂಬಳಿಹುಳುಗಳ ಸಂತತಿ ಲಕ್ಷಾಂತರ ಸಂಖ್ಯೆಯಲ್ಲಿ ಹೆಚ್ಚಾಗಲು ಪ್ರಮುಖ ಕಾರಣ ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.

ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಕಂಬಳಿ ಹುಳುಗಳಿಂದ ತೊಂದರೆ ಅನುಭವಿಸುತ್ತಿರುವ ಜನರಿಗೆ ಸ್ಥಳದಲ್ಲೇ ಚಿಕಿತ್ಸೆ ವ್ಯವಸ್ಥೆ ಮಾಡಿದ್ದು, ಕೆಜಿಎಫ್ ನಗರಸಭೆ ಅಧಿಕಾರಿಗಳು ಕಂಬಳಿ ಹುಳುಗಳ ನಿಯಂತ್ರಣಕ್ಕೆ ಔಷಧಿ ಸಿಂಪಡಿಸಿದ್ದಾರೆ.

ಇದನ್ನೂ ಓದಿ: ಕೋಲಾರ ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?

ಒಟ್ಟಾರೆ ಕಳೆದ ಹಲವು ದಿನಗಳಿಂದ ಬೋರಿಲಾಲ್ ಪೇಟೆಯ ಜನರ ನಿದ್ದೆಗೆಡಿಸಿದ್ದ ಕಂಬಳಿ ಹುಳುಗಳ ನಿಯಂತ್ರಣಕ್ಕೆ ಅಧಿಕಾರಿಗಳ ತಂಡ ಮುಂದಾಗಿದೆ. ಕೂಡಲೇ ಏರಿಯಾವನ್ನು ಸ್ವಚ್ಛಗೊಳಿಸಿ ಹಾಗೂ ಔಷಧಿ ಸಿಂಪಡನೆ ಮಾಡಿ ಜನರನ್ನು ಆತಂಕದಿಂದ ದೂರ ಮಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್‌ನಾಗ್‌ ಫಸ್ಟ್ ರಿಯಾಕ್ಷನ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್