AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದ ಮಧ್ಯೆ ಕೋಚಿಮುಲ್ ನಿರ್ದೇಶಕರಿಗೆ ವಿದೇಶ ಪ್ರವಾಸ ಭಾಗ್ಯ: ಸಾರ್ವಜನಿಕರಿಂದ ವಿರೋಧ

ನಿರ್ದೇಶಕರು ಹಾಗೂ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದ್ದು, ರೈತರ ಶ್ರಮದಿಂದ ನಡೆಯುತ್ತಿರುವ ಕೋಚಿಮುಲ್ ಒಕ್ಕೂಟದಲ್ಲಿ ಇದೆಂತಹಾ ಸಂಪ್ರದಾಯ ಎಂಬ ಪ್ರಶ್ನೆ ವ್ಯಕ್ತವಾಗಿದೆ. ಬರದ‌ ಮಧ್ಯೆ ಪ್ರವಾಸಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ.

ಬರದ ಮಧ್ಯೆ ಕೋಚಿಮುಲ್ ನಿರ್ದೇಶಕರಿಗೆ ವಿದೇಶ ಪ್ರವಾಸ ಭಾಗ್ಯ: ಸಾರ್ವಜನಿಕರಿಂದ ವಿರೋಧ
ಕೋಚಿಮುಲ್
TV9 Web
| Edited By: |

Updated on: Oct 20, 2023 | 7:27 PM

Share

ಕೋಲಾರ, ಅಕ್ಟೋಬರ್ 20: ಸರ್ಕಾರ ವಿರುದ್ಧದ ಪರ್ಸೆಂಟೇಜ್ ಆರೋಪಕ್ಕೆ ಸಾಕ್ಷಿಯಾದ ಕೋಚಿಮುಲ್ (Kochimul) (ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್) ನಿರ್ದೇಶಕರಿಗೆ ಈಗ ವಿದೇಶ ಪ್ರವಾಸ (Foreign Tour) ಭಾಗ್ಯ ದೊರೆತಿದೆ. ಮತ್ತೊಂದೆಡೆ, ಬರದ ಮಧ್ಯೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವಿದೇಶ ಪ್ರವಾಸ ಆಯೋಜಿಸುತ್ತಿರುವುದಕ್ಕೆ ಸಾರ್ವಜನಿಕರಿಂದ ವಿರೋಧವೂ ವ್ಯಕ್ತವಾಗಿದೆ. ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ 11 ಮಂದಿ ನಿರ್ದೇಶಕರು ಹಾಗೂ ಅವರ ಕುಟುಂಬಸ್ಥರು, ಇಬ್ಬರು ಅಧಿಕಾರಿಗಳು ಯೂರೋಪ್ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಕೋಚಿಮುಲ್ ಅಧ್ಯಕ್ಷ ಕೆವೈ ನಂಜೇಗೌಡ ನೇತೃತ್ವದಲ್ಲಿ ಪ್ರವಾಸ ಆಯೋಜಿಸಲಾಗಿದ್ದು, ಶುಕ್ರವಾರ ರಾತ್ರಿ ಕೆವೈ ನಂಜೇಗೌಡ ಕುಟುಂಬ ಸಮೇತ ಪ್ರವಾಸ ಬೆಳೆಸಿದ್ದಾರೆ. ಉಳಿದ ನಿರ್ದೇಶಕರು ಹಾಗೂ ಅಧಿಕಾರಿಗಳು ಭಾನುವಾರ ಪ್ರವಾಸ ಹೊರಡಲಿದ್ದಾರೆ.

ನಿರ್ದೇಶಕರು ಹಾಗೂ ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದ್ದು, ರೈತರ ಶ್ರಮದಿಂದ ನಡೆಯುತ್ತಿರುವ ಕೋಚಿಮುಲ್ ಒಕ್ಕೂಟದಲ್ಲಿ ಇದೆಂತಹಾ ಸಂಪ್ರದಾಯ ಎಂಬ ಪ್ರಶ್ನೆ ವ್ಯಕ್ತವಾಗಿದೆ. ಬರದ‌ ಮಧ್ಯೆ ಪ್ರವಾಸಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ.

ಯೂರೋಪ್ ಪ್ರವಾಸಕ್ಕೆ ತಗಲುವ ಲಕ್ಷಾಂತರ ರೂಪಾಯಿ ಹಣ ಎಲ್ಲಿಯದು, ಯಾರದ್ದು ಎಂಬ ಪ್ರಶ್ನೆ ಕೂಡ ಸೃಷ್ಟಿಯಾಗಿದೆ. ಪ್ರವಾಸಕ್ಕೆ ಒಕ್ಕೂಟದ ಗುತ್ತಿದಾರರೊಬ್ಬರಿಂದ ಹಣ ಸಂಗ್ರಹಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ: ನನ್ ಮುಟ್ಟಿದ್ರೆ ಕೇಸ್, ಪೊಲೀಸರಿಗೆ ಬಿಜೆಪಿ MP ವಾರ್ನಿಂಗ್; ಇಲ್ಲಿದೆ ವಿಡಿಯೋ

ಬಂಗಾರಪೇಟೆ ಜಯಸಿಂಹ ಕೃಷ್ಣಪ್ಪ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ನಿರ್ದೇಶಕ ಹನುಮೇಶ್ ಹೊರತುಪಡಿಸಿ, 11 ಜನ ನಿರ್ದೇಶಕರು ಹಾಗೂ ಎಂಡಿ ಗೋಪಾಲ್, ಹಾಗೂ ವ್ಯವಸ್ಥಾಪಕ ನಾಗೇಶ್ ಕುಟುಂಬ ಸಮೇತ ಪ್ರವಾಸ ಕೈಗೊಂಡಿದ್ದಾರೆ. ಟೂರ್ ಭಾಗ್ಯಕ್ಕೆ ಒಕ್ಕೂಟದಲ್ಲಿ ಗುತ್ತಿಗೆದಾರನೊಬ್ಬನಿಂದ ಹಣ ವ್ಯವಸ್ಥೆ ಮಾಡಲಾಗಿದೆ ಎನ್ನಲಾಗಿದ್ದು, ನಿರ್ದೇಶಕರ ಯೂರೋಪ್ ಪ್ರವಾಸ ಅವಳಿ ಜಿಲ್ಲೆಯ ರೈತರ ಕೆಂಗಣ್ಣಿಗೆ ಗುರಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ