Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಬಾಲಕನ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಕಾರ್ತಿಕ್​ನ ಮುಖದ ಮೇಲೆ S ಎಂದು ಬರೆದು ಆರೋಪಿಗಳು ವಿಕೃತಿ ಮೆರೆದಿದ್ದಾರೆ. S ಎಂದರೆ ಶೈನ್ ಆಲಿಯಾಸ್ ದಿಲೀಪ್ ಎಂದರ್ಥ. ಶೈನ್ ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಪ್ರಕರಣದ ಆರೋಪಿಗಳೆಲ್ಲರೂ ಅಪ್ರಾಪ್ತರಾಗಿದ್ದಾರೆ. ಪ್ರಮುಖ ಆರೋಪಿ ಡಾನ್ ಆಗಬೇಕು ಎಂದು ಈ ರೀತಿ ಕೃತ್ಯಗಳನ್ನು ಎಸಗುತ್ತಿದ್ದನು. ಆರೋಪಿಗಳು ರೌಡಿಗಳಂತೆ ಚಾಕು ಹಿಡಿದು ಗ್ಯಾಂಗ್ ಕಟ್ಟಿಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಾಕಿದ್ದಾರೆ.

ಕೋಲಾರ ಬಾಲಕನ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಅಮಾನತು
ಸಾಂದರ್ಭಿಕ ಚಿತ್ರ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ವಿವೇಕ ಬಿರಾದಾರ

Updated on: Nov 06, 2023 | 12:04 PM

ಕೋಲಾರ ನ.06: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ ಮೂರು ಕೊಲೆಗಳಾಗಿವೆ. ಅಕ್ಟೋಬರ್​​ 23 ಕಾಂಗ್ರೆಸ್​ (Congress) ಮುಖಂಡ, ಮಾಜಿ ಸಭಾಪತಿ ರಮೇಶ್​ ಕುಮಾರ್​ ಅವರ ಆಪ್ತ ಎಂ. ಶ್ರೀನಿವಾಸ್​, ಅಕ್ಟೋಬರ್​ 21 ಗ್ರಾಮ ಪಂಚಾಯತಿ ಸದಸ್ಯ ಅನಿಲ್​ ಕುಮಾರ್​ ಮತ್ತು ನವೆಂಬರ್​ 03 ರಂದು ಬಾಲಕ ಕಾರ್ತಿಕ್​ ಸಿಂಗ್​​ ಎಂಬುವರನ್ನು ಕೊಲೆ ಮಾಡಲಾಗಿತ್ತು. ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ (Kolar) ಠಾಣೆಯ ಮೂವರು ಪೊಲೀಸ್ (Police) ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಾಗೂ ಮಾಹಿತಿ ಕಲೆಹಾಕುವಲ್ಲಿ ವಿಫಲ ಹಿನ್ನೆಲೆಯಲ್ಲಿ ಎಎಸ್​ಐ ಮುನಿರಾಜು, ಕಾನ್ಸ್​ಟೇಬಲ್​​ಗಳಾದ ವಿಷ್ಣು, ಶಿವ ಅವರನ್ನು ಅಮಾನತು ಮಾಡಿ ಕೋಲಾರ ಎಸ್​ಪಿ ನಾರಾಯಣ್ ಆದೇಶ ಹೊರಡಿಸಿದ್ದಾರೆ.

ಕೋಲಾರ ಬಾಲಕನ ಕೊಲೆ ಪ್ರಕರಣ

ಕೋಲಾರದ ವೀರಾಂಜನೇಯ ನಗರದ ನಿವಾಸಿ ಅರುಣ್​ ಸಿಂಗ್​ ಅವರ ಪುತ್ರ ಕಾರ್ತಿಕ್​ ಸಿಂಗ್ (17) ಯನ್ನು ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ನಗರದ ಟೇಕಲ್​ ರಸ್ತೆಯ ಬಾಪೂಜಿ ಶಾಲಾ ಆವರಣದಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.

ಹತ್ಯೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಅಲಿಯಾಸ್ ಶೈನ್ ಸೇರಿದಂತೆ 8 ಜನರನ್ನು ಪೊಲೀಸರು ಬಂಧಿಸಿದ್ದರು. ಡಾನ್ ಆಗಬೇಕೆಂದು ಆರೋಪಿ ಹತ್ಯೆ ಮಾಡಿದ್ದನು ಎಂದು ಪೊಲೀಸರು ಹೇಳಿದ್ದರು. ಹತ್ಯೆಗೂ ಮುನ್ನ ಬಾಲಕನಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಬಟ್ಟೆ ಬಿಚ್ಚಿಸಿ ಮೈಕೈಗೆ ಗಾಜು, ಚಾಕು, ಬ್ಲೇಡ್​ನಿಂದ ಕುಯ್ದಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಇಬ್ಬರು ಕಾಂಗ್ರೆಸ್ ಮುಖಂಡರ ಹತ್ಯೆ: ಎರಡು ಠಾಣೆಯ ಒಟ್ಟು 6 ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಕಾರ್ತಿಕ್​ನ ಮುಖದ ಮೇಲೆ S ಎಂದು ಬರೆದು ಆರೋಪಿಗಳು ವಿಕೃತಿ ಮೆರೆದಿದ್ದಾರೆ. S ಎಂದರೆ ಶೈನ್ ಆಲಿಯಾಸ್ ದಿಲೀಪ್ ಎಂದರ್ಥ. ಶೈನ್ ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಪ್ರಕರಣದ ಆರೋಪಿಗಳೆಲ್ಲರೂ ಅಪ್ರಾಪ್ತರಾಗಿದ್ದಾರೆ. ಪ್ರಮುಖ ಆರೋಪಿ ಡಾನ್ ಆಗಬೇಕು ಎಂದು ಈ ರೀತಿ ಕೃತ್ಯಗಳನ್ನು ಎಸಗುತ್ತಿದ್ದನು. ಆರೋಪಿಗಳು ರೌಡಿಗಳಂತೆ ಚಾಕು ಹಿಡಿದು ಗ್ಯಾಂಗ್ ಕಟ್ಟಿಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಾಕಿದ್ದಾರೆ.

ಕೋಲಾರದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಖಂಡಿಸಿ ಅಭಿಯಾನ

ಅಪ್ರಾಪ್ತ ಬಾಲಕನ ಕೊಲೆ ಖಂಡಿಸಿ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್​ ಅಭಿಯಾನ ಮಾಡುತ್ತಿದ್ದಾರೆ. ಅಪ್ರಾಪ್ತ ಬಾಲಕ ಕಾರ್ತಿಕ್​​​ ಸಾವಿಗೆ ನ್ಯಾಯ ಕೊಡಿಸಿ ಮತ್ತು ಕೋಲಾರ ರಕ್ಷಿಸಿ, ಯುವಕರನ್ನು ರಕ್ಷಿಸುವಂತೆ ಆಗ್ರಹಿಸಿ ಅಭಿಯಾನ ಮಾಡುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ