AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಬಾಲಕನ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಕಾರ್ತಿಕ್​ನ ಮುಖದ ಮೇಲೆ S ಎಂದು ಬರೆದು ಆರೋಪಿಗಳು ವಿಕೃತಿ ಮೆರೆದಿದ್ದಾರೆ. S ಎಂದರೆ ಶೈನ್ ಆಲಿಯಾಸ್ ದಿಲೀಪ್ ಎಂದರ್ಥ. ಶೈನ್ ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಪ್ರಕರಣದ ಆರೋಪಿಗಳೆಲ್ಲರೂ ಅಪ್ರಾಪ್ತರಾಗಿದ್ದಾರೆ. ಪ್ರಮುಖ ಆರೋಪಿ ಡಾನ್ ಆಗಬೇಕು ಎಂದು ಈ ರೀತಿ ಕೃತ್ಯಗಳನ್ನು ಎಸಗುತ್ತಿದ್ದನು. ಆರೋಪಿಗಳು ರೌಡಿಗಳಂತೆ ಚಾಕು ಹಿಡಿದು ಗ್ಯಾಂಗ್ ಕಟ್ಟಿಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಾಕಿದ್ದಾರೆ.

ಕೋಲಾರ ಬಾಲಕನ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಅಮಾನತು
ಸಾಂದರ್ಭಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 06, 2023 | 12:04 PM

Share

ಕೋಲಾರ ನ.06: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ ಮೂರು ಕೊಲೆಗಳಾಗಿವೆ. ಅಕ್ಟೋಬರ್​​ 23 ಕಾಂಗ್ರೆಸ್​ (Congress) ಮುಖಂಡ, ಮಾಜಿ ಸಭಾಪತಿ ರಮೇಶ್​ ಕುಮಾರ್​ ಅವರ ಆಪ್ತ ಎಂ. ಶ್ರೀನಿವಾಸ್​, ಅಕ್ಟೋಬರ್​ 21 ಗ್ರಾಮ ಪಂಚಾಯತಿ ಸದಸ್ಯ ಅನಿಲ್​ ಕುಮಾರ್​ ಮತ್ತು ನವೆಂಬರ್​ 03 ರಂದು ಬಾಲಕ ಕಾರ್ತಿಕ್​ ಸಿಂಗ್​​ ಎಂಬುವರನ್ನು ಕೊಲೆ ಮಾಡಲಾಗಿತ್ತು. ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ (Kolar) ಠಾಣೆಯ ಮೂವರು ಪೊಲೀಸ್ (Police) ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಾಗೂ ಮಾಹಿತಿ ಕಲೆಹಾಕುವಲ್ಲಿ ವಿಫಲ ಹಿನ್ನೆಲೆಯಲ್ಲಿ ಎಎಸ್​ಐ ಮುನಿರಾಜು, ಕಾನ್ಸ್​ಟೇಬಲ್​​ಗಳಾದ ವಿಷ್ಣು, ಶಿವ ಅವರನ್ನು ಅಮಾನತು ಮಾಡಿ ಕೋಲಾರ ಎಸ್​ಪಿ ನಾರಾಯಣ್ ಆದೇಶ ಹೊರಡಿಸಿದ್ದಾರೆ.

ಕೋಲಾರ ಬಾಲಕನ ಕೊಲೆ ಪ್ರಕರಣ

ಕೋಲಾರದ ವೀರಾಂಜನೇಯ ನಗರದ ನಿವಾಸಿ ಅರುಣ್​ ಸಿಂಗ್​ ಅವರ ಪುತ್ರ ಕಾರ್ತಿಕ್​ ಸಿಂಗ್ (17) ಯನ್ನು ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ನಗರದ ಟೇಕಲ್​ ರಸ್ತೆಯ ಬಾಪೂಜಿ ಶಾಲಾ ಆವರಣದಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.

ಹತ್ಯೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಅಲಿಯಾಸ್ ಶೈನ್ ಸೇರಿದಂತೆ 8 ಜನರನ್ನು ಪೊಲೀಸರು ಬಂಧಿಸಿದ್ದರು. ಡಾನ್ ಆಗಬೇಕೆಂದು ಆರೋಪಿ ಹತ್ಯೆ ಮಾಡಿದ್ದನು ಎಂದು ಪೊಲೀಸರು ಹೇಳಿದ್ದರು. ಹತ್ಯೆಗೂ ಮುನ್ನ ಬಾಲಕನಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಬಟ್ಟೆ ಬಿಚ್ಚಿಸಿ ಮೈಕೈಗೆ ಗಾಜು, ಚಾಕು, ಬ್ಲೇಡ್​ನಿಂದ ಕುಯ್ದಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಇಬ್ಬರು ಕಾಂಗ್ರೆಸ್ ಮುಖಂಡರ ಹತ್ಯೆ: ಎರಡು ಠಾಣೆಯ ಒಟ್ಟು 6 ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಕಾರ್ತಿಕ್​ನ ಮುಖದ ಮೇಲೆ S ಎಂದು ಬರೆದು ಆರೋಪಿಗಳು ವಿಕೃತಿ ಮೆರೆದಿದ್ದಾರೆ. S ಎಂದರೆ ಶೈನ್ ಆಲಿಯಾಸ್ ದಿಲೀಪ್ ಎಂದರ್ಥ. ಶೈನ್ ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಪ್ರಕರಣದ ಆರೋಪಿಗಳೆಲ್ಲರೂ ಅಪ್ರಾಪ್ತರಾಗಿದ್ದಾರೆ. ಪ್ರಮುಖ ಆರೋಪಿ ಡಾನ್ ಆಗಬೇಕು ಎಂದು ಈ ರೀತಿ ಕೃತ್ಯಗಳನ್ನು ಎಸಗುತ್ತಿದ್ದನು. ಆರೋಪಿಗಳು ರೌಡಿಗಳಂತೆ ಚಾಕು ಹಿಡಿದು ಗ್ಯಾಂಗ್ ಕಟ್ಟಿಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಾಕಿದ್ದಾರೆ.

ಕೋಲಾರದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಖಂಡಿಸಿ ಅಭಿಯಾನ

ಅಪ್ರಾಪ್ತ ಬಾಲಕನ ಕೊಲೆ ಖಂಡಿಸಿ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್​ ಅಭಿಯಾನ ಮಾಡುತ್ತಿದ್ದಾರೆ. ಅಪ್ರಾಪ್ತ ಬಾಲಕ ಕಾರ್ತಿಕ್​​​ ಸಾವಿಗೆ ನ್ಯಾಯ ಕೊಡಿಸಿ ಮತ್ತು ಕೋಲಾರ ರಕ್ಷಿಸಿ, ಯುವಕರನ್ನು ರಕ್ಷಿಸುವಂತೆ ಆಗ್ರಹಿಸಿ ಅಭಿಯಾನ ಮಾಡುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!