AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಬಾಲಕನ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಕಾರ್ತಿಕ್​ನ ಮುಖದ ಮೇಲೆ S ಎಂದು ಬರೆದು ಆರೋಪಿಗಳು ವಿಕೃತಿ ಮೆರೆದಿದ್ದಾರೆ. S ಎಂದರೆ ಶೈನ್ ಆಲಿಯಾಸ್ ದಿಲೀಪ್ ಎಂದರ್ಥ. ಶೈನ್ ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಪ್ರಕರಣದ ಆರೋಪಿಗಳೆಲ್ಲರೂ ಅಪ್ರಾಪ್ತರಾಗಿದ್ದಾರೆ. ಪ್ರಮುಖ ಆರೋಪಿ ಡಾನ್ ಆಗಬೇಕು ಎಂದು ಈ ರೀತಿ ಕೃತ್ಯಗಳನ್ನು ಎಸಗುತ್ತಿದ್ದನು. ಆರೋಪಿಗಳು ರೌಡಿಗಳಂತೆ ಚಾಕು ಹಿಡಿದು ಗ್ಯಾಂಗ್ ಕಟ್ಟಿಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಾಕಿದ್ದಾರೆ.

ಕೋಲಾರ ಬಾಲಕನ ಹತ್ಯೆ ಪ್ರಕರಣ: ಮೂವರು ಪೊಲೀಸ್ ಸಿಬ್ಬಂದಿ ಅಮಾನತು
ಸಾಂದರ್ಭಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 06, 2023 | 12:04 PM

Share

ಕೋಲಾರ ನ.06: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ ಮೂರು ಕೊಲೆಗಳಾಗಿವೆ. ಅಕ್ಟೋಬರ್​​ 23 ಕಾಂಗ್ರೆಸ್​ (Congress) ಮುಖಂಡ, ಮಾಜಿ ಸಭಾಪತಿ ರಮೇಶ್​ ಕುಮಾರ್​ ಅವರ ಆಪ್ತ ಎಂ. ಶ್ರೀನಿವಾಸ್​, ಅಕ್ಟೋಬರ್​ 21 ಗ್ರಾಮ ಪಂಚಾಯತಿ ಸದಸ್ಯ ಅನಿಲ್​ ಕುಮಾರ್​ ಮತ್ತು ನವೆಂಬರ್​ 03 ರಂದು ಬಾಲಕ ಕಾರ್ತಿಕ್​ ಸಿಂಗ್​​ ಎಂಬುವರನ್ನು ಕೊಲೆ ಮಾಡಲಾಗಿತ್ತು. ಬಾಲಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ (Kolar) ಠಾಣೆಯ ಮೂವರು ಪೊಲೀಸ್ (Police) ಸಿಬ್ಬಂದಿ ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಾಗೂ ಮಾಹಿತಿ ಕಲೆಹಾಕುವಲ್ಲಿ ವಿಫಲ ಹಿನ್ನೆಲೆಯಲ್ಲಿ ಎಎಸ್​ಐ ಮುನಿರಾಜು, ಕಾನ್ಸ್​ಟೇಬಲ್​​ಗಳಾದ ವಿಷ್ಣು, ಶಿವ ಅವರನ್ನು ಅಮಾನತು ಮಾಡಿ ಕೋಲಾರ ಎಸ್​ಪಿ ನಾರಾಯಣ್ ಆದೇಶ ಹೊರಡಿಸಿದ್ದಾರೆ.

ಕೋಲಾರ ಬಾಲಕನ ಕೊಲೆ ಪ್ರಕರಣ

ಕೋಲಾರದ ವೀರಾಂಜನೇಯ ನಗರದ ನಿವಾಸಿ ಅರುಣ್​ ಸಿಂಗ್​ ಅವರ ಪುತ್ರ ಕಾರ್ತಿಕ್​ ಸಿಂಗ್ (17) ಯನ್ನು ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ನಗರದ ಟೇಕಲ್​ ರಸ್ತೆಯ ಬಾಪೂಜಿ ಶಾಲಾ ಆವರಣದಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದರು.

ಹತ್ಯೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಅಲಿಯಾಸ್ ಶೈನ್ ಸೇರಿದಂತೆ 8 ಜನರನ್ನು ಪೊಲೀಸರು ಬಂಧಿಸಿದ್ದರು. ಡಾನ್ ಆಗಬೇಕೆಂದು ಆರೋಪಿ ಹತ್ಯೆ ಮಾಡಿದ್ದನು ಎಂದು ಪೊಲೀಸರು ಹೇಳಿದ್ದರು. ಹತ್ಯೆಗೂ ಮುನ್ನ ಬಾಲಕನಿಗೆ ಚಿತ್ರಹಿಂಸೆ ಕೊಟ್ಟಿದ್ದಾರೆ. ಬಟ್ಟೆ ಬಿಚ್ಚಿಸಿ ಮೈಕೈಗೆ ಗಾಜು, ಚಾಕು, ಬ್ಲೇಡ್​ನಿಂದ ಕುಯ್ದಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಇಬ್ಬರು ಕಾಂಗ್ರೆಸ್ ಮುಖಂಡರ ಹತ್ಯೆ: ಎರಡು ಠಾಣೆಯ ಒಟ್ಟು 6 ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಕಾರ್ತಿಕ್​ನ ಮುಖದ ಮೇಲೆ S ಎಂದು ಬರೆದು ಆರೋಪಿಗಳು ವಿಕೃತಿ ಮೆರೆದಿದ್ದಾರೆ. S ಎಂದರೆ ಶೈನ್ ಆಲಿಯಾಸ್ ದಿಲೀಪ್ ಎಂದರ್ಥ. ಶೈನ್ ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಪ್ರಕರಣದ ಆರೋಪಿಗಳೆಲ್ಲರೂ ಅಪ್ರಾಪ್ತರಾಗಿದ್ದಾರೆ. ಪ್ರಮುಖ ಆರೋಪಿ ಡಾನ್ ಆಗಬೇಕು ಎಂದು ಈ ರೀತಿ ಕೃತ್ಯಗಳನ್ನು ಎಸಗುತ್ತಿದ್ದನು. ಆರೋಪಿಗಳು ರೌಡಿಗಳಂತೆ ಚಾಕು ಹಿಡಿದು ಗ್ಯಾಂಗ್ ಕಟ್ಟಿಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಹಾಕಿದ್ದಾರೆ.

ಕೋಲಾರದಲ್ಲಿ ಅಪ್ರಾಪ್ತ ಬಾಲಕನ ಕೊಲೆ ಖಂಡಿಸಿ ಅಭಿಯಾನ

ಅಪ್ರಾಪ್ತ ಬಾಲಕನ ಕೊಲೆ ಖಂಡಿಸಿ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್​ ಅಭಿಯಾನ ಮಾಡುತ್ತಿದ್ದಾರೆ. ಅಪ್ರಾಪ್ತ ಬಾಲಕ ಕಾರ್ತಿಕ್​​​ ಸಾವಿಗೆ ನ್ಯಾಯ ಕೊಡಿಸಿ ಮತ್ತು ಕೋಲಾರ ರಕ್ಷಿಸಿ, ಯುವಕರನ್ನು ರಕ್ಷಿಸುವಂತೆ ಆಗ್ರಹಿಸಿ ಅಭಿಯಾನ ಮಾಡುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ 

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು