AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಪರಿಷತ್ ಚುನಾವಣೆ ಟಿಕೆಟ್ ಲಭಿಸದ ಹಿನ್ನೆಲೆ; ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ಬಿಜೆಪಿ ಸೇರ್ಪಡೆ

ನನಗೆ ಟಿಕೆಟ್ ಕೊಡುವುದಾಗಿ ಹೇಳಿ ನನ್ನ ಕತ್ತಲಲ್ಲಿಟ್ಟರು. ಸ್ಥಳೀಯ ಶಾಸಕರು‌ ನಮಗೆ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್​ ಪಕ್ಷ ನನ್ನ ಸೇವೆಯನ್ನು ಪರಿಗಣಿಸಿಲ್ಲ. ಹಾಗಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದೆ ಎಂದು ಅವರು ತಿಳಿಸಿದ್ದಾರೆ.

ಕೋಲಾರ: ಪರಿಷತ್ ಚುನಾವಣೆ ಟಿಕೆಟ್ ಲಭಿಸದ ಹಿನ್ನೆಲೆ; ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ಬಿಜೆಪಿ ಸೇರ್ಪಡೆ
ಚಂದ್ರಾರೆಡ್ಡಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 27, 2021 | 6:01 PM

Share

ಕೋಲಾರ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರ ರೆಡ್ಡಿ ಇಂದು (ನವೆಂಬರ್ 27) ಧಿಡೀರ್ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸದಲ್ಲಿ ಸಿಎಂ ಎದುರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪರಿಷತ್ ಚುನಾವಣೆ ಟಿಕೆಟ್ ಅಕಾಂಕ್ಷಿಯಾಗಿದ್ದ ಚಂದ್ರಾ ರೆಡ್ಡಿ, ಟಿಕೆಟ್ ಕೈ ತಪ್ಪಿದ ಬಳಿಕ ಯಾರೋಬ್ಬರು ಮಾತನಾಡಿಸದ ಹಿನ್ನಲೆ ಬೇಸರಗೊಂಡಿದ್ದರು ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಬೆಂಬಲದ ನಿರೀಕ್ಷೆಯಲ್ಲಿದ್ದ ಚಂದ್ರಾ ರೆಡ್ಡಿ ಈಗ ಬಿಜೆಪಿಗೆ ಸೇರಿದ್ದಾರೆ. ಚಂದ್ರಾ ರೆಡ್ಡಿ ನಡೆಯಿಂದ ಕಾಂಗ್ರೆಸ್ ಅವಾಕ್ಕಾಗಿದೆ. ಕಾಂಗ್ರೆಸ್​ನಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯ ಆಗಿದೆ. ಹಾಗಾಗಿ ಬೇಸತ್ತು ಕಾಂಗ್ರೆಸ್​​ಗೆ ರಾಜೀನಾಮೆ ನೀಡಿದೆ. ಕಾಂಗ್ರೆಸ್​​ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಆಗಿದ್ದೇನೆ ಎಂದು ಕೋಲಾರದಲ್ಲಿ ಬಿಜೆಪಿ ಸೇರ್ಪಡೆ ಬಳಿಕ ಕೋಲಾರ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚಂದ್ರಾರೆಡ್ಡಿ ಹೇಳಿಕೆ ನೀಡಿದ್ದಾರೆ. 6 ವರ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ನನಗೆ ಟಿಕೆಟ್ ಕೊಡುವುದಾಗಿ ಹೇಳಿ ನನ್ನ ಕತ್ತಲಲ್ಲಿಟ್ಟರು. ಸ್ಥಳೀಯ ಶಾಸಕರು‌ ನಮಗೆ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್​ ಪಕ್ಷ ನನ್ನ ಸೇವೆಯನ್ನು ಪರಿಗಣಿಸಿಲ್ಲ. ಹಾಗಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದೆ ಎಂದು ಅವರು ತಿಳಿಸಿದ್ದಾರೆ.

ಡಿಸೆಂಬರ್ 10 ರಂದು ವಿಧಾನಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಚಿವರಾದ ಕೆ.ಸುಧಾಕರ್, ಮುನಿರತ್ನ, ಸಂಸದ ಮುನಿಸ್ವಾಮಿ ವರ್ತೂರು ಪ್ರಕಾಶ್​ ಭೇಟಿ ಆಗಿದ್ದಾರೆ. ಮಾಜಿ ಸಚಿವ ಹೆಚ್. ನಾಗೇಶ್​ರಿಂದ ವರ್ತೂರು ಪ್ರಕಾಶ್​ ಭೇಟಿ ಮಾಡಲಾಗಿದೆ. ವರ್ತೂರು ಪ್ರಕಾಶ್​ ಮನೆಯಲ್ಲಿ ನಾಯಕರು ಊಟಮಾಡಿದ್ದಾರೆ. ಕೋಲಾರದಲ್ಲಿ ಒಂದೇ ದಿನ ಅಚ್ಚರಿ ರಾಜಕೀಯ ಬೆಳವಣಿಗೆ ನಡೆದಿದೆ. ಕೋಲಾರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿಜೆಪಿ ಸೇರಿದ್ದಾರೆ. ಕೆ.ಚಂದ್ರಾರೆಡ್ಡಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆನ್ನಲ್ಲಿ ಬಿಜೆಪಿ ನಾಯಕರು ವರ್ತೂರು ಪ್ರಕಾಶ್​ ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಪರ ಬಿ ಫಾರಂ ಪಡೆದ ಸರ್ಕಾರಿ ಅಧಿಕಾರಿ; ಚುನಾವಣಾ ಆಯೋಗ ಠಾಣೆಯಲ್ಲಿ ಪ್ರಕರಣ ದಾಖಲು

ಇದನ್ನೂ ಓದಿ: BY Vijayendra: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಬಿವೈ ವಿಜಯೇಂದ್ರ ಘೋಷಣೆ

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ