AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಈದ್ ಮಿಲಾದ್ ಪ್ರಯುಕ್ತ ಕ್ಲಾಕ್ ಟವರ್​ನಲ್ಲಿ ಅಳವಡಿಸಿದ್ದ ವಿವಾದಿತ ಕತ್ತಿ ಸಂದೇಶ ತೆರವು

ಈದ್ ಮಿಲಾದ್ ಪ್ರಯುಕ್ತ ದೇವರ ಆಶೀರ್ವಚನ ಪದಗಳನ್ನು ಬರೆಯಲಾಗಿರುವ ಬೃಹತ್ ಕತ್ತಿಯನ್ನು ಕೋಲಾರದ ಕ್ಲಾಕ್ ಟವರ್​ನಲ್ಲಿ ಅಳವಡಿಸಲಾಗಿತ್ತು. ದ್ವಾರ ಬಾಗಿಲಲ್ಲಿ ನಿರ್ಮಿಸಿದ್ದ ಬೃಹದಾಕಾರದ ಈ ಕತ್ತಿ ವಿವಾದಕ್ಕೆ ಕಾರಣವಾಗಿದ್ದು, ಇದನ್ನು ತೆರವು ಗೊಳಿಸದಿದ್ದರೆ ತ್ರಿಶೂಲ ಹಾಕುವುದಾಗಿ ಬಿಜೆಪಿ ಸಂಸದ ಮುನಿಸ್ವಾಮಿ ಎಚ್ಚರಿಕೆ ನೀಡಿದರು. ಇದರ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಧಿಕಾರಿ, ಎಸ್​ಪಿ ವಿವಾದಿತ ಕತ್ತಿಯನ್ನು ತೆರವುಗೊಳಿಸಿದರು.

ಕೋಲಾರ: ಈದ್ ಮಿಲಾದ್ ಪ್ರಯುಕ್ತ ಕ್ಲಾಕ್ ಟವರ್​ನಲ್ಲಿ ಅಳವಡಿಸಿದ್ದ ವಿವಾದಿತ ಕತ್ತಿ ಸಂದೇಶ ತೆರವು
ಕೋಲಾರದ ಕ್ಲಾಕ್ ಟವರ್​ನಲ್ಲಿ ಅಳವಡಿಸಿದ್ದ ವಿವಾದಿತ ಕತ್ತಿ ಸಂದೇಶ ತೆರವುಗೊಳಿಸಿದ ಪೊಲೀಸರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 28, 2023 | 5:59 PM

Share

ಕೋಲಾರ, ಸೆ.28: ಈದ್ ಮಿಲಾದ್ (Eid Milad) ಪ್ರಯುಕ್ತ ದೇವರ ಆಶೀರ್ವಚನ ಪದಗಳನ್ನು ಬರೆಯಲಾಗಿರುವ ಬೃಹತ್ ಕತ್ತಿಯನ್ನು ಕೋಲಾರದ (Kolar) ಕ್ಲಾಕ್ ಟವರ್​ನಲ್ಲಿ ಅಳವಡಿಸಲಾಗಿತ್ತು. ದ್ವಾರ ಬಾಗಿಲಲ್ಲಿ ನಿರ್ಮಿಸಿದ್ದ ಬೃಹದಾಕಾರದ ಈ ಕತ್ತಿ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ಸಂಸದ ಎಸ್. ಮುನಿಸ್ವಾಮಿ (S.Muniswamy) ಅವರು ತೀವ್ರವಾಗಿ ವಿರೋಧಿಸಿದ್ದರು.

ಕತ್ತಿ ತೆರವುಗೊಳಿಸದಿದ್ದರೆ ತ್ರೀಶೂಲ ಹಾಕುವುದಾಗಿ ಕೋಲಾರ ಸಂಸದ ಎಸ್.ಮುನಿಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಕೂಡಲೇ ಎಚ್ಚೆತ್ತ ಜಿಲ್ಲಾಧಿಕಾರಿ ಹಾಗೂ ಎಸ್​ಪಿ, ಅರ್ಧ ಗಂಟೆಗೂ ಹೆಚ್ಚು ಕಾಲ ಕ್ಲಾಕ್ ಟವರ್ ವೃತ್ತ ಬಂದ್ ಮಾಡಿಸಿ ತೆರವುಗೊಳಿಸಿದರು. ಪೊಲೀಸರ ಸೂಚನೆ ಮೇರೆಗೆ ಮುಸ್ಲಿಂ ಯುವಕರು ಕ್ರೇನ್ ಮೂಲಕ ಕತ್ತಿ ತೆರವು ಮಾಡಿದರು.

ಇದನ್ನೂ ಓದಿ: ವಿಜಯಪುರ: ಈದ್ ಮಿಲಾದ್ ಮೆರವಣಿಗೆಯಲ್ಲಿದ್ದ ಯುವಕರಿಂದ ಶಾಂತಿ ಸೌಹಾರ್ದತೆ ಕದಡಲು ಯತ್ನ

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಕೋಲಾರ ಸಂಸದ ಎಸ್. ಮುನಿಸ್ವಾಮಿ, ಪುಂಡರ ಒತ್ತಾಯಕ್ಕೆ ಮಣಿದು ನಗರಸಭೆ ದ್ವಾರ ಬಾಗಿಲು ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದರು. ಜಿಲ್ಲಾ ಎಸ್​ಪಿ ನಾರಾಯಣ ಅವರನ್ನು ಕೇಳಿದಾಗ ನಾವು ಅನುಮತಿ ಕೊಟ್ಟಿಲ್ಲ ಅಂತ ಹೇಳಿದ್ದರು. ಹೀಗಾಗಿ ಬೆಳಗ್ಗೆ ಮಾಧ್ಯಮದ ಮೂಲಕ ನಾವು ತ್ರಿಶೂಲ ಹಾಕುತ್ತೇವೆ ಅಂತ ಹೇಳಿದ್ದೆ. ಅದಕ್ಕೆ ಎಚ್ಚೆತ್ತುಕೊಂಡ ಡಿಸಿ ಅಕ್ರಮ್ ಪಾಷಾ ಮತ್ತು ಎಸ್​ಪಿ ನಾರಾಯಣ ಸೇರಿ ತಲವಾರು ದ್ವಾರ ಬಾಗಿಲು ತೆರವು ಮಾಡಿದ್ದಾರೆ ಎಂದರು.

ಜಿಲ್ಲಾಧಿಕಾರಿ ಹಾಗೂ ನಗರಸಭೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಶಾಂತಿಯುತವಾದ ಕ್ಲಾಕ್ ಟವರ್​ನಲ್ಲಿ ದ್ವಾರ ಬಾಗಿಲು ನಿರ್ಮಾಣ ಮಾಡಿದ್ದು ಎಷ್ಟು ಸರಿ? ಇವರಿಗೆ ದ್ವಾರ ಬಾಗಿಲು ಹಾಕಲು ಹೇಳಿದ್ಯಾರು?ನಾವು ಗಣೇಶ ಹಬ್ಬ ಮಾಡಬೇಕು ಅಂದರೆ ಅನುಮತಿ ಕೊಡಬೇಕು ಅಂತಾರೆ. ಇದಕ್ಕೆ ಯಾವ ರೀತಿಯಲ್ಲಿ ಅವಕಾಶ ಕೊಟ್ಟರು? ಕಾಂಗ್ರೆಸ್ ಸರ್ಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!