Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಬಸ್​ ಅಪಘಾತ, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ ಗಂಭೀರ ಗಾಯ

ಕೇರಳದ ಕೊಟ್ಟಾಯಂ ಜಿಲ್ಲೆ ಎರುಮೇಲಿಯ ಕಣಮಲ ಬಳಿ ಬಸ್​ ಅಪಘಾತಕ್ಕೀಡಾಗಿದ್ದು, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ ಗಂಭೀರ ಗಾಯಗಳಾಗಿವೆ.

ಕೇರಳದಲ್ಲಿ ಬಸ್​ ಅಪಘಾತ, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ ಗಂಭೀರ ಗಾಯ
ಬಸ್ ಅಪಘಾತ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ರಮೇಶ್ ಬಿ. ಜವಳಗೇರಾ

Updated on:Oct 18, 2023 | 11:47 AM

ಎರುಮೇಲಿ(ಕೇರಳ), (ಅಕ್ಟೋಬರ್ 18): ಕೇರಳದ (Kerala) ಕೊಟ್ಟಾಯಂ ಜಿಲ್ಲೆ ಎರುಮೇಲಿಯ ಕಣಮಲ ಬಳಿ ಬಸ್​ ಅಪಘಾತಕ್ಕೀಡಾಗಿದ್ದು, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ(shabarimale ayyappa Swamy devotees)  ಗಂಭೀರ ಗಾಯಗಳಾಗಿವೆ. ಖಾಸಗಿ ಬಸ್​​, ಟೆಂಪೋ ಟ್ರಾವೆಲರ್ಸ್​ನಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲಿನಿಂದ ಶಬರಿಮಲೆಗೆ ತೆರಳಿದ್ದಾಗ ಎರುಮೇಲಿಯ ಕಣಮಲ ಬಳಿ ಬಸ್​ ಅಪಘಾತಕ್ಕೀಡಾಗಿದೆ. ಪರಿಣಾಮ ಬಸ್​​ನಲ್ಲಿದ್ದ 50 ಜನರ ಪೈಕಿ 17 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಮುಳಬಾಗಿಲು ತಾಲೂಕಿನ ತಮ್ಮರೆಡ್ಡಿಹಳ್ಳಿ, ಬಂಗವಾದಿ, ಮಜರಾ ಕಿತ್ತೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಸದ್ಯ ಗಾಯಾಳುಗಳನ್ನು ವಿವಿಧ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಭೀಕರ ಅಪಘಾತ: ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಅಪರಿಚಿತ ವಾಹನ, ನಾಲ್ವರು ದುರ್ಮರಣ

ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಉಡುಪಿ: ಮಣಿಪಾಲ ಸಮೀಪದ ಪರ್ಕಳದಲ್ಲಿ ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಅಡುಗೆ ಕೆಲಸ ಮಾಡಿಕೊಂಡಿದ್ದ ಹಿರಿಯಡ್ಕ ನಿವಾಸಿ ಅಕ್ಷಯ್ ಭಟ್(26) ಮೃತ ಬೈಕ್ ಸವಾರ. ದೇವಸ್ಥಾನವೊಂದರಲ್ಲಿ ನವರಾತ್ರಿಯ ಪ್ರಯುಕ್ತ ಅಡುಗೆ ಕೆಲಸಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿಗೆ ಬಂದು ಗುದ್ದಿದ ಬಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಕಾರಿಗೆ ಬಸ್ ಡಿಕ್ಕೆ ಹೊಡೆದಿದೆ. ಹೈದರಾಬಾದ್ ಬೆಂಗಳೂರು ಹೆದ್ದಾರಿಯ ದೇವನಹಳ್ಳಿ ಟೋಲ್​ನಲ್ಲಿ ಕಾರಿನ ಹಿಂಬದಿಗೆ ಬಸ್ ಡಿಕ್ಕಿ ಹೊಡೆದಿದೆ. ನೋಡ ನೋಡುತ್ತಿದ್ದಂತೆಯೇ ಟೋಲ್ ನಲ್ಲಿ ನಿಂತಿದ್ದ ಕಾರಿಗೆ ಗುದ್ದಿದ್ದು, ಅಪಘಾತದ ದೃಶ್ಯ ಸಿಟಿ ಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ಕಾರು ಹಾಗೂ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಓಡಿಸಲು ಕ್ಲೀನರ್​ಗೆ ಕೊಟ್ಟಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಏರ್ಪೋರ್ಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:21 am, Wed, 18 October 23

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್