AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಬಸ್​ ಅಪಘಾತ, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ ಗಂಭೀರ ಗಾಯ

ಕೇರಳದ ಕೊಟ್ಟಾಯಂ ಜಿಲ್ಲೆ ಎರುಮೇಲಿಯ ಕಣಮಲ ಬಳಿ ಬಸ್​ ಅಪಘಾತಕ್ಕೀಡಾಗಿದ್ದು, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ ಗಂಭೀರ ಗಾಯಗಳಾಗಿವೆ.

ಕೇರಳದಲ್ಲಿ ಬಸ್​ ಅಪಘಾತ, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ ಗಂಭೀರ ಗಾಯ
ಬಸ್ ಅಪಘಾತ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Oct 18, 2023 | 11:47 AM

Share

ಎರುಮೇಲಿ(ಕೇರಳ), (ಅಕ್ಟೋಬರ್ 18): ಕೇರಳದ (Kerala) ಕೊಟ್ಟಾಯಂ ಜಿಲ್ಲೆ ಎರುಮೇಲಿಯ ಕಣಮಲ ಬಳಿ ಬಸ್​ ಅಪಘಾತಕ್ಕೀಡಾಗಿದ್ದು, ಕರ್ನಾಟಕದ 17 ಶಬರಿಮಲೆ ಭಕ್ತರಿಗೆ(shabarimale ayyappa Swamy devotees)  ಗಂಭೀರ ಗಾಯಗಳಾಗಿವೆ. ಖಾಸಗಿ ಬಸ್​​, ಟೆಂಪೋ ಟ್ರಾವೆಲರ್ಸ್​ನಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲಿನಿಂದ ಶಬರಿಮಲೆಗೆ ತೆರಳಿದ್ದಾಗ ಎರುಮೇಲಿಯ ಕಣಮಲ ಬಳಿ ಬಸ್​ ಅಪಘಾತಕ್ಕೀಡಾಗಿದೆ. ಪರಿಣಾಮ ಬಸ್​​ನಲ್ಲಿದ್ದ 50 ಜನರ ಪೈಕಿ 17 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಮುಳಬಾಗಿಲು ತಾಲೂಕಿನ ತಮ್ಮರೆಡ್ಡಿಹಳ್ಳಿ, ಬಂಗವಾದಿ, ಮಜರಾ ಕಿತ್ತೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಸದ್ಯ ಗಾಯಾಳುಗಳನ್ನು ವಿವಿಧ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಭೀಕರ ಅಪಘಾತ: ರಸ್ತೆ ಬದಿ ಕುಳಿತಿದ್ದವರ ಮೇಲೆ ಹರಿದ ಅಪರಿಚಿತ ವಾಹನ, ನಾಲ್ವರು ದುರ್ಮರಣ

ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಉಡುಪಿ: ಮಣಿಪಾಲ ಸಮೀಪದ ಪರ್ಕಳದಲ್ಲಿ ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಅಡುಗೆ ಕೆಲಸ ಮಾಡಿಕೊಂಡಿದ್ದ ಹಿರಿಯಡ್ಕ ನಿವಾಸಿ ಅಕ್ಷಯ್ ಭಟ್(26) ಮೃತ ಬೈಕ್ ಸವಾರ. ದೇವಸ್ಥಾನವೊಂದರಲ್ಲಿ ನವರಾತ್ರಿಯ ಪ್ರಯುಕ್ತ ಅಡುಗೆ ಕೆಲಸಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿಗೆ ಬಂದು ಗುದ್ದಿದ ಬಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಕಾರಿಗೆ ಬಸ್ ಡಿಕ್ಕೆ ಹೊಡೆದಿದೆ. ಹೈದರಾಬಾದ್ ಬೆಂಗಳೂರು ಹೆದ್ದಾರಿಯ ದೇವನಹಳ್ಳಿ ಟೋಲ್​ನಲ್ಲಿ ಕಾರಿನ ಹಿಂಬದಿಗೆ ಬಸ್ ಡಿಕ್ಕಿ ಹೊಡೆದಿದೆ. ನೋಡ ನೋಡುತ್ತಿದ್ದಂತೆಯೇ ಟೋಲ್ ನಲ್ಲಿ ನಿಂತಿದ್ದ ಕಾರಿಗೆ ಗುದ್ದಿದ್ದು, ಅಪಘಾತದ ದೃಶ್ಯ ಸಿಟಿ ಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ಕಾರು ಹಾಗೂ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಓಡಿಸಲು ಕ್ಲೀನರ್​ಗೆ ಕೊಟ್ಟಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಏರ್ಪೋರ್ಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:21 am, Wed, 18 October 23

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ