AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜೆ ಹೆಣ್ಣುಮಗುವಿಗೆ ಜನ್ಮ, ಮಧ್ಯರಾತ್ರಿ ಇಂಜೆಕ್ಷನ್ ನೀಡಿದ್ದ ಕೆಲವೇ ಕ್ಷಣದಲ್ಲೇ ಬಾಣಂತಿ ಸಾವು

ರಾಜ್ಯದಲ್ಲಿ ಆಗಾಗ ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಕೇಳಿ ಬರುತ್ತಿರುತ್ತದೆ. ಅದರಂತೆ ಇದೀಗ ಕೋಲಾರ ಜಿಲ್ಲಾಸ್ಪತ್ರೆ(Kolar District Hospital)ಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಕೋಲಾರ ಜಿಲ್ಲಾಸ್ಪತ್ರೆ ವೈದ್ಯೆ ಡಾ.ಶಾಂತಾ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಪತ್ನಿ ಸಾವಿಗೆ ನ್ಯಾಯ ಬೇಕು ಎಂದು ಪತಿ ಗೋಪಾಲ್ ಸೇರಿದಂತೆ ಮೃತಳ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಸಂಜೆ ಹೆಣ್ಣುಮಗುವಿಗೆ ಜನ್ಮ, ಮಧ್ಯರಾತ್ರಿ ಇಂಜೆಕ್ಷನ್ ನೀಡಿದ್ದ ಕೆಲವೇ ಕ್ಷಣದಲ್ಲೇ ಬಾಣಂತಿ ಸಾವು
ಕೋಲಾರ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಬಲಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Mar 05, 2024 | 3:16 PM

Share

ಕೋಲಾರ, ,ಮಾ.05: ಕೋಲಾರ ಜಿಲ್ಲಾಸ್ಪತ್ರೆ(Kolar District Hospital)ಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೋಲಾರ ತಾಲೂಕಿನ ಜಂಗಾಲಹಳ್ಳಿಯ ಭವಾನಿ(26) ಮೃತ ಮಹಿಳೆ. ಸೋಮವಾರ(ಮಾ.04) ಬೆಳಗ್ಗೆ ಹೆರಿಗೆಗೆಂದು ಆಸ್ಪತ್ರೆಗೆ ಭವಾನಿ ಅವರು ದಾಖಲಾಗಿದ್ದರು. ಸೋಮವಾರ ಸಂಜೆ ವೇಳೆಗೆ ಹೆಣ್ಣುಮಗುವಿಗೆ ಜನ್ಮ ಕೂಡ ನೀಡಿದ್ದರು. ಎಲ್ಲವೂ ಸರಿಯಾಗಿತ್ತು. ಆದರೆ, ಮಧ್ಯರಾತ್ರಿ ಬಾಣಂತಿ ನೋವು ಎಂದು ಹೇಳಿದ್ದಾರೆ. ಈ ಹಿನ್ನಲೆ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ. ಇದಾದ ನಂತರ ಮಹಿಳೆಯ ಆರೋಗ್ಯ ಏರುಪೇರಾಗಿತ್ತು.

ವೈದ್ಯರ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು

ಇನ್ನು ತೀವ್ರ ನೋವಿನಿಂದ ಬಳಲುತ್ತಿದ್ದ ಬಾಣಂತಿಗೆ ಇಂಜೆಕ್ಷನ್​ ನೀಡಲಾಗಿತ್ತು. ಆದರೆ, ವೈದ್ಯರು ಇಂಜೆಕ್ಷನ್ ನೀಡಿದ ಕೆಲ ಕ್ಷಣದಲ್ಲೇ ಬಾಣಂತಿ ಭವಾನಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕೋಲಾರ ಜಿಲ್ಲಾಸ್ಪತ್ರೆ ವೈದ್ಯೆ ಡಾ.ಶಾಂತಾ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಪತ್ನಿ ಸಾವಿಗೆ ನ್ಯಾಯ ಬೇಕು ಎಂದು ಪತಿ ಗೋಪಾಲ್ ಸೇರಿದಂತೆ ಮೃತಳ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಚಿಕ್ಕೋಡಿ: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ, ಕುಟುಂಬಸ್ಥರಿಂದ ಠಾಣೆ ಎದುರು ಧರಣಿ

ಶಿವಮೊಗ್ಗದಲ್ಲಿ ಇಬ್ಬರು ಅಪರಿಚಿತರಿಂದ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಶಿವಮೊಗ್ಗದ ದ ರಾಯಲ್ ಆರ್ಕೇಡ್ ಹಿಂಭಾಗ ರಸ್ತೆಯಲ್ಲಿ ಕಾರ್ತಿಕ್​ ಎಂಬಾತನಿಗೆ ಇಬ್ಬರು ಅಪರಿಚಿತರು ಚಾಕು ಇರಿದು ಪರಾರಿಯಾಗಿದ್ದಾರೆ. ಇದರಿಂದ ಗಾಯಗೊಂಡು ಕಾರ್ತಿಕ್​ನನ್ನು ಕೂಡಲೇ ಶಿವಮೊಗ್ಗದ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ನಗರದ ಮಿಳಘಟ್ಟ ಬಡಾವಣೆಯ ಕಾರ್ತಿಕ್ ಸ್ಥಿತಿ ಗಂಭೀರವಾಗಿದ್ದು, ಇತನ ಮೇಲಿನ ದಾಳಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ