AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar News: ಕೋಲಾರದ ರೈತ ಕುಟುಂಬಕ್ಕೆ ಭರ್ಜರಿ ಜಾಕ್​ಪಾಟ್; ಟೊಮೆಟೊ ಮಾರಾಟದಿಂದ ಸಿಕ್ತು 38 ಲಕ್ಷ ರೂ

ಕೋಲಾರ ಎಪಿಎಂಸಿ ಮಾರುಕಟ್ಟೆಯು ದೇಶದಲ್ಲಿ ಟೊಮೇಟೊಗೆ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದೆ. ಮಂಗಳವಾರದಂದು 15 ಕೆಜಿ ಟೊಮೆಟೊ ಬಾಕ್ಸ್‌ಗೆ ಗರಿಷ್ಠ 2,200 ರೂ. ದೊರೆತಿತ್ತು.

Kolar News: ಕೋಲಾರದ ರೈತ ಕುಟುಂಬಕ್ಕೆ ಭರ್ಜರಿ ಜಾಕ್​ಪಾಟ್; ಟೊಮೆಟೊ ಮಾರಾಟದಿಂದ ಸಿಕ್ತು 38 ಲಕ್ಷ ರೂ
ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ಹರಾಜು
TV9 Web
| Updated By: Ganapathi Sharma|

Updated on: Jul 12, 2023 | 9:35 PM

Share

ಕೋಲಾರ: ಕೋಲಾರದ ರೈತ ಕುಟುಂಬವೊಂದು ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ 38 ಲಕ್ಷ ರೂ.ಗೆ 2 ಸಾವಿರ ಬಾಕ್ಸ್ ಟೊಮೆಟೊ (Tomato Price) ಮಾರಾಟ ಮಾಡಿದೆ. ಪ್ರಭಾಕರ್ ಗುಪ್ತಾ ಮತ್ತು ಅವರ ಸಹೋದರರು ತಮ್ಮ ಉತ್ಪನ್ನಗಳನ್ನು ಬಾಕ್ಸ್‌ಗೆ 1,900 ರೂ.ನಂತೆ ಮಂಗಳವಾರದಂದು ಮಾರಾಟ ಮಾಡಿದ್ದಾರೆ. 15 ಕೆಜಿಯ ಟೊಮೆಟೊ ಬಾಕ್ಸ್‌ ಗರಿಷ್ಠ 2,200 ರೂ.ನಂತೆ ಮಾರಾಟವಾಗಿತ್ತು. ಬುಧವಾರ ಅದೇ ಬಾಕ್ಸ್‌ನ ಗರಿಷ್ಠ ಬೆಲೆ 1,800 ರೂ. ಇತ್ತು.

ಕೋಲಾರ ಜಿಲ್ಲೆಯ ಬೇತಮಂಗಲದ 40 ಎಕರೆ ಜಮೀನಿನಲ್ಲಿ ಗುಪ್ತಾ ಮತ್ತು ಅವರ ಸಹೋದರರು ಕಳೆದ 40 ವರ್ಷಗಳಿಂದ ತರಕಾರಿ ಕೃಷಿ ಮಾಡುತ್ತಿದ್ದಾರೆ. ರಸಗೊಬ್ಬರ ಮತ್ತು ಕೀಟನಾಶಕಗಳ ಬಗ್ಗೆ ಉತ್ತಮ ಜ್ಞಾನವನ್ನು ಹೊಂದಿದ್ದರಿಂದ ಕುಟುಂಬವು ಉತ್ತಮ ಗುಣಮಟ್ಟದ ತರಕಾರಿಗಳನ್ನು ಬೆಳೆದಿದೆ ಎಂದು ಪ್ರಭಾಕರ್ ಅವರ ಸಹೋದರ ಸುರೇಶ್ ಹೇಳಿರುವುದಾಗಿ ‘ನ್ಯೂಸ್ 9’ ವರದಿ ಮಾಡಿದೆ.

ಎರಡು ವರ್ಷಗಳ ಹಿಂದೆ ಕೂಡ ಗುಪ್ತಾ ಕುಟುಂಬಕ್ಕೆ ಟೊಮೆಟೊಗೆ ಉತ್ತಮ ಬೆಲೆ ಸಿಕ್ಕಿತ್ತು. ಆಗ 15 ಕೆಜಿ ಟೊಮೆಟೊ ಬಾಕ್ಸ್‌ಗೆ 800 ರೂ.ನಂತೆ ಕುಟುಂಬವು ಮಾರಾಟ ಮಾಡಿತ್ತು ಎಂದು ವರದಿ ಉಲ್ಲೇಖಿಸಿದೆ.

‘2.5 ಎಕರೆಯಲ್ಲಿ ಟೊಮೇಟೊ ಬೆಳೆದಿದ್ದೇನೆ. ಒಂದು ಎಕರೆಯಲ್ಲಿ ಟೊಮೆಟೊ ಬೆಳೆಯಲು ಸುಮಾರು 2.5 ಲಕ್ಷ ರೂ. ಖರ್ಚಾಗಿದೆ. ನಾನು 2.5 ಎಕರೆಯಲ್ಲಿ 300 ಬಾಕ್ಸ್ ಟೊಮೆಟೊ ಬೆಳೆಯುತ್ತಿದ್ದೆ. ಈಗ ಕೇವಲ 90 ಬಾಕ್ಸ್ ಟೊಮೆಟೊ ಸಿಕ್ಕಿದೆ ಎಂದು ರೈತ ಎಸ್​​ಬಿ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತಷ್ಟು ದುಬಾರಿಯಾದ ಟೊಮ್ಯಾಟೋ; ಕೋಲಾರದಲ್ಲಿ 15 ಕೆಜಿ ಬಾಕ್ಸ್ 2200 ರೂ.

ಕೋಲಾರ ಎಪಿಎಂಸಿ ಮಾರುಕಟ್ಟೆಯು ದೇಶದಲ್ಲಿ ಟೊಮೇಟೊಗೆ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದೆ. ಮಂಗಳವಾರದಂದು 15 ಕೆಜಿ ಟೊಮೆಟೊ ಬಾಕ್ಸ್‌ಗೆ ಗರಿಷ್ಠ 2,200 ರೂ. ದೊರೆತಿತ್ತು. ಕೋಲಾರದಿಂದ ದಿನಕ್ಕೆ 8,000 ಮೆಟ್ರಿಕ್ ಟನ್ ಟೊಮೆಟೊ ಪೂರೈಕೆಯಾಗುತ್ತಿತ್ತು. ಈಗ ಕೇವಲ 1,000 ಮೆಟ್ರಿಕ್ ಟೊಮೆಟೊ ಪೂರೈಕೆ ಮಾಡುತ್ತಿದ್ದೇವೆ ಎಂದು ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿ ಸುಧಾಕರ್ ತಿಳಿಸಿದ್ದಾರೆ.

ಕೋಲಾರದಲ್ಲಿ ಟೊನೆಟೊ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಟೊಮೆಟೊ ಬೆಳೆಯುವ ರೈತರು ಹಗಲಿರುಳು ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು