AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar News: ಕೋಲಾರದ ರೈತ ಕುಟುಂಬಕ್ಕೆ ಭರ್ಜರಿ ಜಾಕ್​ಪಾಟ್; ಟೊಮೆಟೊ ಮಾರಾಟದಿಂದ ಸಿಕ್ತು 38 ಲಕ್ಷ ರೂ

ಕೋಲಾರ ಎಪಿಎಂಸಿ ಮಾರುಕಟ್ಟೆಯು ದೇಶದಲ್ಲಿ ಟೊಮೇಟೊಗೆ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದೆ. ಮಂಗಳವಾರದಂದು 15 ಕೆಜಿ ಟೊಮೆಟೊ ಬಾಕ್ಸ್‌ಗೆ ಗರಿಷ್ಠ 2,200 ರೂ. ದೊರೆತಿತ್ತು.

Kolar News: ಕೋಲಾರದ ರೈತ ಕುಟುಂಬಕ್ಕೆ ಭರ್ಜರಿ ಜಾಕ್​ಪಾಟ್; ಟೊಮೆಟೊ ಮಾರಾಟದಿಂದ ಸಿಕ್ತು 38 ಲಕ್ಷ ರೂ
ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ಹರಾಜು
TV9 Web
| Edited By: |

Updated on: Jul 12, 2023 | 9:35 PM

Share

ಕೋಲಾರ: ಕೋಲಾರದ ರೈತ ಕುಟುಂಬವೊಂದು ಎಪಿಎಂಸಿ ಮಾರುಕಟ್ಟೆಯಲ್ಲಿ ಮಂಗಳವಾರ 38 ಲಕ್ಷ ರೂ.ಗೆ 2 ಸಾವಿರ ಬಾಕ್ಸ್ ಟೊಮೆಟೊ (Tomato Price) ಮಾರಾಟ ಮಾಡಿದೆ. ಪ್ರಭಾಕರ್ ಗುಪ್ತಾ ಮತ್ತು ಅವರ ಸಹೋದರರು ತಮ್ಮ ಉತ್ಪನ್ನಗಳನ್ನು ಬಾಕ್ಸ್‌ಗೆ 1,900 ರೂ.ನಂತೆ ಮಂಗಳವಾರದಂದು ಮಾರಾಟ ಮಾಡಿದ್ದಾರೆ. 15 ಕೆಜಿಯ ಟೊಮೆಟೊ ಬಾಕ್ಸ್‌ ಗರಿಷ್ಠ 2,200 ರೂ.ನಂತೆ ಮಾರಾಟವಾಗಿತ್ತು. ಬುಧವಾರ ಅದೇ ಬಾಕ್ಸ್‌ನ ಗರಿಷ್ಠ ಬೆಲೆ 1,800 ರೂ. ಇತ್ತು.

ಕೋಲಾರ ಜಿಲ್ಲೆಯ ಬೇತಮಂಗಲದ 40 ಎಕರೆ ಜಮೀನಿನಲ್ಲಿ ಗುಪ್ತಾ ಮತ್ತು ಅವರ ಸಹೋದರರು ಕಳೆದ 40 ವರ್ಷಗಳಿಂದ ತರಕಾರಿ ಕೃಷಿ ಮಾಡುತ್ತಿದ್ದಾರೆ. ರಸಗೊಬ್ಬರ ಮತ್ತು ಕೀಟನಾಶಕಗಳ ಬಗ್ಗೆ ಉತ್ತಮ ಜ್ಞಾನವನ್ನು ಹೊಂದಿದ್ದರಿಂದ ಕುಟುಂಬವು ಉತ್ತಮ ಗುಣಮಟ್ಟದ ತರಕಾರಿಗಳನ್ನು ಬೆಳೆದಿದೆ ಎಂದು ಪ್ರಭಾಕರ್ ಅವರ ಸಹೋದರ ಸುರೇಶ್ ಹೇಳಿರುವುದಾಗಿ ‘ನ್ಯೂಸ್ 9’ ವರದಿ ಮಾಡಿದೆ.

ಎರಡು ವರ್ಷಗಳ ಹಿಂದೆ ಕೂಡ ಗುಪ್ತಾ ಕುಟುಂಬಕ್ಕೆ ಟೊಮೆಟೊಗೆ ಉತ್ತಮ ಬೆಲೆ ಸಿಕ್ಕಿತ್ತು. ಆಗ 15 ಕೆಜಿ ಟೊಮೆಟೊ ಬಾಕ್ಸ್‌ಗೆ 800 ರೂ.ನಂತೆ ಕುಟುಂಬವು ಮಾರಾಟ ಮಾಡಿತ್ತು ಎಂದು ವರದಿ ಉಲ್ಲೇಖಿಸಿದೆ.

‘2.5 ಎಕರೆಯಲ್ಲಿ ಟೊಮೇಟೊ ಬೆಳೆದಿದ್ದೇನೆ. ಒಂದು ಎಕರೆಯಲ್ಲಿ ಟೊಮೆಟೊ ಬೆಳೆಯಲು ಸುಮಾರು 2.5 ಲಕ್ಷ ರೂ. ಖರ್ಚಾಗಿದೆ. ನಾನು 2.5 ಎಕರೆಯಲ್ಲಿ 300 ಬಾಕ್ಸ್ ಟೊಮೆಟೊ ಬೆಳೆಯುತ್ತಿದ್ದೆ. ಈಗ ಕೇವಲ 90 ಬಾಕ್ಸ್ ಟೊಮೆಟೊ ಸಿಕ್ಕಿದೆ ಎಂದು ರೈತ ಎಸ್​​ಬಿ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತಷ್ಟು ದುಬಾರಿಯಾದ ಟೊಮ್ಯಾಟೋ; ಕೋಲಾರದಲ್ಲಿ 15 ಕೆಜಿ ಬಾಕ್ಸ್ 2200 ರೂ.

ಕೋಲಾರ ಎಪಿಎಂಸಿ ಮಾರುಕಟ್ಟೆಯು ದೇಶದಲ್ಲಿ ಟೊಮೇಟೊಗೆ ಎರಡನೇ ಅತಿದೊಡ್ಡ ಮಾರುಕಟ್ಟೆಯಾಗಿದೆ. ಮಂಗಳವಾರದಂದು 15 ಕೆಜಿ ಟೊಮೆಟೊ ಬಾಕ್ಸ್‌ಗೆ ಗರಿಷ್ಠ 2,200 ರೂ. ದೊರೆತಿತ್ತು. ಕೋಲಾರದಿಂದ ದಿನಕ್ಕೆ 8,000 ಮೆಟ್ರಿಕ್ ಟನ್ ಟೊಮೆಟೊ ಪೂರೈಕೆಯಾಗುತ್ತಿತ್ತು. ಈಗ ಕೇವಲ 1,000 ಮೆಟ್ರಿಕ್ ಟೊಮೆಟೊ ಪೂರೈಕೆ ಮಾಡುತ್ತಿದ್ದೇವೆ ಎಂದು ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿ ಸುಧಾಕರ್ ತಿಳಿಸಿದ್ದಾರೆ.

ಕೋಲಾರದಲ್ಲಿ ಟೊನೆಟೊ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋಲಾರದಲ್ಲಿ ಟೊಮೆಟೊ ಬೆಳೆಯುವ ರೈತರು ಹಗಲಿರುಳು ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು