AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್​ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಆರ್ಥಿಕ ನೆರವು!

ಕೋಲಾರ ಕೆಜಿಎಫ್‌ನ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡರೂ ಸ್ಟ್ರೆಚರ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಎಲ್ಲರೂ ಉಬ್ಬೇರಿಸುವಂತೆ ಮಾಡಿದ್ದಳು. ಆದರೆ ಇತ್ತೀಚೆಗೆ ಆಕೆಯ ಚಿಕಿತ್ಸಾ ವೆಚ್ಚಕ್ಕೆ ತಂದೆ ಹರಸಾಹಸ ಪಡುತ್ತಿದ್ದಾಗ, ಮಾಜಿ ಸಚಿವ ಸುರೇಶ್ ಕುಮಾರ್ ನೆರವಿಗೆ ಬಂದಿದ್ದಾರೆ. ಮುಖ್ಯಮಂತ್ರಿಗಳ ನಿಧಿಯಿಂದ ಚಿಕಿತ್ಸೆ ಕೊಡಿಸಲು ಮುಂದಾಗಿ, ಬಾಲಕಿಯ ಕುಟುಂಬಕ್ಕೆ ಆಶಾಕಿರಣವಾಗಿದ್ದಾರೆ.

ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್​ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಆರ್ಥಿಕ ನೆರವು!
ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಆರ್ಥಿಕ ನೆರವು!
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Apr 21, 2026 | 10:30 AM

Share

ಕೋಲಾರ, ಏಪ್ರಿಲ್ 21: ಜಿಲ್ಲೆಯ ಕೆಜಿಎಫ್ (Kolar) ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ಎಲ್ಲರ ಗಮನ ಸೆಳೆದಿತ್ತು. ಈ ಮೂಲಕ ಮನಸ್ಥೈರ್ಯ ಇದ್ದರೆ ಯಾವುದೂ ಅಸಾಧ್ಯವಲ್ಲವೆಂದು ಬಾಲಕಿ ತೋರಿಸಿಕೊಟ್ಟಿದ್ದಳು. ಉಳಿದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಳು. ಆದರೆ ಈಗ ಅದೇ ಬಾಲಕಿಯ ಚಿಕಿತ್ಸೆಗೆ ಆಕೆಯ ತಂದೆ ಹರಸಾಹಸ ಪಡುತ್ತಿರುವುದನ್ನು ತಿಳಿದ ಮಾಜಿ ಸಚಿವ ಸುರೇಶ್ ಕುಮಾರ್, ಬಾಲಕಿಗೆ ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ.

ಸ್ಟ್ರೆಚರ್​ನಲ್ಲಿ ಮಲಗಿಕೊಂಡೇ ಪರೀಕ್ಷೆ ಬರೆದಿದ್ದ ಬಾಲಕಿ

ಕೆಜಿಎಫ್ ತಾಲೂಕಿನ ಚಿನ್ನನಾಗನಹಳ್ಳಿ ನಿವಾಸಿಯಾದ ಸೆಂಟ್ ಮೇರಿಸ್ ಹೈಸ್ಕೂಲ್ ವಿದ್ಯಾರ್ಥಿನಿ 16 ವರ್ಷದ ಕುಸುಮಾ, ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಒಂದು ಕಾಲು ಕಳೆದುಕೊಂಡಿದ್ದಳು. ನಂತರ ಆಕೆಯನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿತ್ತು.ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗದಿದ್ದರೂ, ವಿದ್ಯಾಭ್ಯಾಸದ ಮೇಲೆ ಆಸಕ್ತಿ ಕಳೆದುಕೊಳ್ಳದ ಕುಸುಮಾ, ತನ್ನ ತಾಯಿಯೊಂದಿಗೆ ಆಂಬ್ಯುಲೆನ್ಸ್ ಮೂಲಕ ಕೆಜಿಎಫ್‌ನ ಸೆಂಟ್ ಜೋಸೆಫ್ ಶಾಲೆಗೆ ಬಂದು ಪರೀಕ್ಷೆಗೆ ಹಾಜರಾಗಿದ್ದಳು. ಪರೀಕ್ಷಾ ಕೇಂದ್ರದಲ್ಲಿ ಸ್ಟ್ರೆಚರ್ ಬೆಡ್ ಮೇಲೆ ಮಲಗಿಕೊಂಡೇ ಆಕೆ ಪರೀಕ್ಷೆ ಬರೆದಿದ್ದು, ಆಕೆಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.. ವಿದ್ಯಾರ್ಥಿನಿಯ ಪರಿಸ್ಥಿತಿಯನ್ನು ಗಮನಿಸಿ, ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ನಾರಾಯಣಸ್ವಾಮಿ ಪರೀಕ್ಷೆ ಬರೆಯಲು ವಿಶೇಷ ಅನುಮತಿ ನೀಡಿದ್ದರು.

ಸುರೇಶ್ ಕುಮಾರ್ ಹೇಳಿದ್ದೇನು?

ಇದನ್ನೂ ಓದಿ ಆಂಬ್ಯುಲೆನ್ಸ್‌ನಲ್ಲೇ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿನಿ: ವಿಡಿಯೋ ನೋಡಿ

ವಿಷಯ ತಿಳಿದು ತಕ್ಷಣ ನೆರವಿಗೆ ಬಂದ ಸುರೇಶ್ ಕುಮಾರ್!

ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರಿನ ವೈಟ್‌ಫೀಲ್ಡ್‌ನ ಆಸ್ಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಅಗತ್ಯವಿದ್ದ ಹಣದ ಕೊರತೆಯಿಂದ ತಂದೆ ಶಂಕರಪ್ಪ ಸಂಕಷ್ಟಕ್ಕೀಡಾಗಿ, ತನ್ನ ಕಿಡ್ನಿ ಮಾರಾಟ ಮಾಡುವ ನಿರ್ಧಾರಕ್ಕೂ ಬಂದಿದ್ದರು. ವಿಷಯ ತಿಳಿದು ಮಾಜಿ ಸಚಿವ ಸುರೇಶ್ ಕುಮಾರ್ ತಕ್ಷಣ ಸ್ಪಂದಿಸಿ ನೆರವಿಗೆ ಬಂದಿದ್ದಾರೆ. ಅವರು ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರಿಗೆ ಮಾಹಿತಿ ನೀಡಿ, ಮುಖ್ಯಮಂತ್ರಿ ನಿಧಿಯಿಂದ ಚಿಕಿತ್ಸಾ ವೆಚ್ಚ ಭರಿಸುವ ವ್ಯವಸ್ಥೆ ಮಾಡಲು ಮುಂದಾಗಿದ್ದು, ಈ ಭರವಸೆಯಿಂದ ಕುಟುಂಬಕ್ಕೆ ಜೀವ ಬಂದಂತಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ವಿಷಯ ಹಂಚಿಕೊಂಡ ಸುರೇಶ್ ಕುಮಾರ್ ಅವರ ಮಾನವೀಯ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು