AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಅಕ್ರಮ ಗಾಂಜಾ, ಡ್ರಗ್ಸ್​ ಕೃತ್ಯ ಹೆಚ್ಚಳ; ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಗೆ ಚಳಿ ಬಿಡಿಸಿದ ಅಬಕಾರಿ, ಪೊಲೀಸ್​ ಇಲಾಖೆ

ಡ್ರಗ್, ಗಾಂಜಾ, ಅಕ್ರಮ ಮದ್ಯದಿಂದ ಅಪರಾಧ ಕೃತ್ಯಗಳು ಹೆಚ್ಚಾದ ಆರೋಪದ ಹಿನ್ನಲೆ ಕೋಲಾರ ಜಿಲ್ಲಾ ಪೊಲೀಸ್​ ಹಾಗೂ ಅಬಕಾರಿ ಇಲಾಖೆ ಕಳೆದ ಎರಡು ದಿನಗಳಿಂದ ನಿರಂತರ ಕಾರ್ಯಾಚರಣೆ ಮಾಡುವ ಮೂಲಕ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಗೆ ಚಳಿ ಬೀಡಿಸುವ ಜೊತೆಗೆ ಪೊಲೀಸರು, ರೌಡಿ ಶೀಟರ್​ಗಳಿಗೆ ಎಚ್ಚರಿಕೆ ನೀಡುವ ಕೆಲಸಕ್ಕೆ ಮುಂದಾಗಿದೆ. 

ಕೋಲಾರದಲ್ಲಿ ಅಕ್ರಮ ಗಾಂಜಾ, ಡ್ರಗ್ಸ್​ ಕೃತ್ಯ ಹೆಚ್ಚಳ; ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಗೆ ಚಳಿ ಬಿಡಿಸಿದ ಅಬಕಾರಿ, ಪೊಲೀಸ್​ ಇಲಾಖೆ
ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 19, 2023 | 7:19 PM

Share
ಕೋಲಾರ, ನ.19: ಕಳೆದ ಮೂರು ತಿಂಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ಸುಮಾರು 40 ಕೊಲೆಗಳು ನಡೆದಿವೆ. ಅದರಲ್ಲೂ ಮೂರು ಅತೀ ಆತಂಕವಾಗಿ ಕೊಲೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಕೋಲಾರ(Kolar)ದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಣಕ್ಕೆ ತರಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಅಷ್ಟೇ ಅಲ್ಲದೆ ಕಾನೂನು ಸುವ್ಯವಸ್ಥೆ ಹಾಳಾಗಲು ಕಾರಣವಾದ ಮಾದಕ ವಸ್ತುಗಳ ನಿಯಂತ್ರಣ ಮಾಡಲು ಪೊಲೀಸ್​ ಇಲಾಖೆ, ಅಬಕಾರಿ ಇಲಾಖೆ ಹಾಗೂ ಜಿಲ್ಲಾ ಔಷಧ ನಿಯಂತ್ರಣ ಇಲಾಖೆಗಳು ನಿರಂತವಾಗಿ ಮೆಡಿಕಲ್ ಸ್ಟೋರ್​ಗಳು, ಬಾರ್​ಗಳು, ವೈನ್ಸ್​ ಸ್ಟೋರ್​ಗಳ ಮೇಲೆ ನಿರಂತರ ದಾಳಿ ಮಾಡಿ ತಪಾಸಣೆ ಮಾಡುತ್ತಿವೆ.
ಇನ್ನೊಂದೆಡೆ ಪೊಲೀಸರು, ರೌಡಿಶೀಟರ್​​ಗಳ ಮನೆಗಳ ಮೇಲೆ ದಾಳಿ ಮಾಡಿ, ರೌಡಿಗಳಿಗೆ ಎಚ್ಚರಿಕೆ ಕೊಡುವ ಜೊತೆಗೆ ಅವರ ಮನೆಗಳನ್ನು ತಪಾಸಣೆ ಮಾಡುತ್ತಿದೆ. ಇನ್ನು ಯುವಕರು ಹೆಚ್ಚಾಗಿ ಮಾದಕ ವಸ್ತುಗಳಾದ ಗಾಂಜಾ ಸೇರಿದಂತೆ ಇತರ ವಸ್ತುಗಳಿಗೆ ಮಾರು ಹೋಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟಲ್​ಗಳನ್ನೂ ತಪಾಸಣೆ ಮಾಡಲಾಗುತ್ತಿದೆ. ಈ ಮೂಲಕ ಕಳೆದೊಂದು ವಾರದಿಂದ ನಿರಂತರ ಕಾರ್ಯಾಚರಣೆ ಮೂಲಕ ಸದ್ಯ ಕೋಲಾರದಲ್ಲಿ ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿದಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲೂ ಕೂಡ ಉಸ್ತುವಾರಿ ಸಚಿವ ಬೈರತಿ ಸುರೇಶ್​, ಸ್ವತ: ಗೃಹಸಚಿವರಿಗೆ ಕರೆ ಮಾಡಿ ಜಿಲ್ಲೆಯಲ್ಲಿ ಖಾಲಿ ಇರುವ ಪೊಲೀಸ್ ಅಧಿಕಾರಿಗಳ ಹುದ್ದೆಯನ್ನು ತುಂಬಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಇನ್ನು ಕೋಲಾರ ಜಿಲ್ಲೆಯಲ್ಲಿ‌ ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದಿಂದ ಬೆಚ್ಚಿಬಿದ್ದಂತಹ ಜನರಲ್ಲಿ ಧೈರ್ಯ ತುಂಬಲು ಸದ್ಯ ಪೊಲೀಸ್ ಇಲಾಖೆ ಶಾಲಾ ಕಾಲೇಜುಗಳಲ್ಲಿ ಕಾನೂನು ಅರಿವು ಹಾಗೂ ಮಾದಕ ವಸ್ತುಗಳ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಅಲ್ಲದೆ ಕೋಲಾರ ನಗರದ ಪ್ರತಿಯೊಂದು ಬಡಾವಣೆಯಲ್ಲಿ ಸ್ಪೆಷಲ್ ಡ್ರೈವ್ ಮಾಡಲು ಮುಂದಾಗಿದೆ. ಹಾಸ್ಟೆಲ್, ‌ಪಾರ್ಕ್, ಹಳೆ ಕಟ್ಟಡಗಳು ಸೇರಿದಂತೆ ಯುವಕರು ಸೇರುವಂತಹ ಅಕ್ರಮ ತಾಣಗಳ ಮೇಲೆ ಕಾರ್ಯಾಚರಣೆ ಮಾಡಿ ಜನರನ್ನು ಠಾಣೆಗೆ ಕರೆತಂದು ಪ್ರಕರಣ ದಾಖಲು ಮಾಡಿ ಎಚ್ಚರಿಕೆ ಕೊಟ್ಟು ಕಳಿಸುವ ಕೆಲಸ ಮಾಡುತ್ತಿದೆ.
ಇದರ ಜೊತೆಗೆ ಯುವಜನತೆಗೆ ಬುದ್ದಿ ಹೇಳುವ ಜೊತೆಗೆ ಪೊಲೀಸರು ಲಾಠಿ ರುಚಿಯನ್ನು ತೋರಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಸುಮಾರು 50 ಕ್ಕೂ ಹೆಚ್ಚು ಅಡ್ಡೆಗಳ ಮೇಲೆ ದಾಳಿ ಮಾಡಿ ಕ್ರಮ ಕೈಗೊಂಡಿದ್ದಾರೆ. ಇನ್ನು ಅಬಕಾರಿ ಹಾಗೂ ಡ್ರಗ್​ ಕಂಟ್ರೋಲರ್​ ಸಹ ಪೊಲೀಸರ ಜೊತೆಗೆ ನಿರಂತರ ಕಾರ್ಯಾಚರಣೆ ಮಾಡಿ ಮಾದಕತೆ ಇರುವ ಮಾತ್ರೆಗಳನ್ನು ಮಾರಾಟ ಮಾಡುವ ಮುನ್ನ ಎಚ್ಚರ ವಹಿಸಲು ಸೂಚಿಸಿದೆ. ಒಟ್ಟಾರೆ ಕೋಲಾರದಲ್ಲಿ ಅತಿಯಾಗಿರುವ ಗಾಂಜಾ, ಡ್ರಗ್ಸ್​, ಸೇರಿದಂತೆ ಕ್ರಿಕೆಟ್ ಬೆಟ್ಟಿಂಗ್ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ವಿಶೇಷ ಡ್ರೈವ್​ಗಳನ್ನು ಮಾಡಲಾಗುತ್ತಿದೆ. ಸದ್ಯ ಇದಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಮಾತುಗಳು ಕೇಳಿಬರುತ್ತಿವೆ. ಆದರೂ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ