ಕೋಲಾರದಲ್ಲಿ ಅಕ್ರಮ ಗಾಂಜಾ, ಡ್ರಗ್ಸ್​ ಕೃತ್ಯ ಹೆಚ್ಚಳ; ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಗೆ ಚಳಿ ಬಿಡಿಸಿದ ಅಬಕಾರಿ, ಪೊಲೀಸ್​ ಇಲಾಖೆ

ಡ್ರಗ್, ಗಾಂಜಾ, ಅಕ್ರಮ ಮದ್ಯದಿಂದ ಅಪರಾಧ ಕೃತ್ಯಗಳು ಹೆಚ್ಚಾದ ಆರೋಪದ ಹಿನ್ನಲೆ ಕೋಲಾರ ಜಿಲ್ಲಾ ಪೊಲೀಸ್​ ಹಾಗೂ ಅಬಕಾರಿ ಇಲಾಖೆ ಕಳೆದ ಎರಡು ದಿನಗಳಿಂದ ನಿರಂತರ ಕಾರ್ಯಾಚರಣೆ ಮಾಡುವ ಮೂಲಕ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಗೆ ಚಳಿ ಬೀಡಿಸುವ ಜೊತೆಗೆ ಪೊಲೀಸರು, ರೌಡಿ ಶೀಟರ್​ಗಳಿಗೆ ಎಚ್ಚರಿಕೆ ನೀಡುವ ಕೆಲಸಕ್ಕೆ ಮುಂದಾಗಿದೆ. 

ಕೋಲಾರದಲ್ಲಿ ಅಕ್ರಮ ಗಾಂಜಾ, ಡ್ರಗ್ಸ್​ ಕೃತ್ಯ ಹೆಚ್ಚಳ; ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಗೆ ಚಳಿ ಬಿಡಿಸಿದ ಅಬಕಾರಿ, ಪೊಲೀಸ್​ ಇಲಾಖೆ
ಕೋಲಾರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 19, 2023 | 7:19 PM

ಕೋಲಾರ, ನ.19: ಕಳೆದ ಮೂರು ತಿಂಗಳಲ್ಲಿ ಕೋಲಾರ ಜಿಲ್ಲೆಯಲ್ಲಿ ಸುಮಾರು 40 ಕೊಲೆಗಳು ನಡೆದಿವೆ. ಅದರಲ್ಲೂ ಮೂರು ಅತೀ ಆತಂಕವಾಗಿ ಕೊಲೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಕೋಲಾರ(Kolar)ದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಯಂತ್ರಣಕ್ಕೆ ತರಲು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಅಷ್ಟೇ ಅಲ್ಲದೆ ಕಾನೂನು ಸುವ್ಯವಸ್ಥೆ ಹಾಳಾಗಲು ಕಾರಣವಾದ ಮಾದಕ ವಸ್ತುಗಳ ನಿಯಂತ್ರಣ ಮಾಡಲು ಪೊಲೀಸ್​ ಇಲಾಖೆ, ಅಬಕಾರಿ ಇಲಾಖೆ ಹಾಗೂ ಜಿಲ್ಲಾ ಔಷಧ ನಿಯಂತ್ರಣ ಇಲಾಖೆಗಳು ನಿರಂತವಾಗಿ ಮೆಡಿಕಲ್ ಸ್ಟೋರ್​ಗಳು, ಬಾರ್​ಗಳು, ವೈನ್ಸ್​ ಸ್ಟೋರ್​ಗಳ ಮೇಲೆ ನಿರಂತರ ದಾಳಿ ಮಾಡಿ ತಪಾಸಣೆ ಮಾಡುತ್ತಿವೆ.
ಇನ್ನೊಂದೆಡೆ ಪೊಲೀಸರು, ರೌಡಿಶೀಟರ್​​ಗಳ ಮನೆಗಳ ಮೇಲೆ ದಾಳಿ ಮಾಡಿ, ರೌಡಿಗಳಿಗೆ ಎಚ್ಚರಿಕೆ ಕೊಡುವ ಜೊತೆಗೆ ಅವರ ಮನೆಗಳನ್ನು ತಪಾಸಣೆ ಮಾಡುತ್ತಿದೆ. ಇನ್ನು ಯುವಕರು ಹೆಚ್ಚಾಗಿ ಮಾದಕ ವಸ್ತುಗಳಾದ ಗಾಂಜಾ ಸೇರಿದಂತೆ ಇತರ ವಸ್ತುಗಳಿಗೆ ಮಾರು ಹೋಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟಲ್​ಗಳನ್ನೂ ತಪಾಸಣೆ ಮಾಡಲಾಗುತ್ತಿದೆ. ಈ ಮೂಲಕ ಕಳೆದೊಂದು ವಾರದಿಂದ ನಿರಂತರ ಕಾರ್ಯಾಚರಣೆ ಮೂಲಕ ಸದ್ಯ ಕೋಲಾರದಲ್ಲಿ ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿದಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲೂ ಕೂಡ ಉಸ್ತುವಾರಿ ಸಚಿವ ಬೈರತಿ ಸುರೇಶ್​, ಸ್ವತ: ಗೃಹಸಚಿವರಿಗೆ ಕರೆ ಮಾಡಿ ಜಿಲ್ಲೆಯಲ್ಲಿ ಖಾಲಿ ಇರುವ ಪೊಲೀಸ್ ಅಧಿಕಾರಿಗಳ ಹುದ್ದೆಯನ್ನು ತುಂಬಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಇನ್ನು ಕೋಲಾರ ಜಿಲ್ಲೆಯಲ್ಲಿ‌ ಅಪ್ರಾಪ್ತ ಬಾಲಕ ಕಾರ್ತಿಕ್ ಸಿಂಗ್ ಕೊಲೆ ಪ್ರಕರಣದಿಂದ ಬೆಚ್ಚಿಬಿದ್ದಂತಹ ಜನರಲ್ಲಿ ಧೈರ್ಯ ತುಂಬಲು ಸದ್ಯ ಪೊಲೀಸ್ ಇಲಾಖೆ ಶಾಲಾ ಕಾಲೇಜುಗಳಲ್ಲಿ ಕಾನೂನು ಅರಿವು ಹಾಗೂ ಮಾದಕ ವಸ್ತುಗಳ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಅಲ್ಲದೆ ಕೋಲಾರ ನಗರದ ಪ್ರತಿಯೊಂದು ಬಡಾವಣೆಯಲ್ಲಿ ಸ್ಪೆಷಲ್ ಡ್ರೈವ್ ಮಾಡಲು ಮುಂದಾಗಿದೆ. ಹಾಸ್ಟೆಲ್, ‌ಪಾರ್ಕ್, ಹಳೆ ಕಟ್ಟಡಗಳು ಸೇರಿದಂತೆ ಯುವಕರು ಸೇರುವಂತಹ ಅಕ್ರಮ ತಾಣಗಳ ಮೇಲೆ ಕಾರ್ಯಾಚರಣೆ ಮಾಡಿ ಜನರನ್ನು ಠಾಣೆಗೆ ಕರೆತಂದು ಪ್ರಕರಣ ದಾಖಲು ಮಾಡಿ ಎಚ್ಚರಿಕೆ ಕೊಟ್ಟು ಕಳಿಸುವ ಕೆಲಸ ಮಾಡುತ್ತಿದೆ.
ಇದರ ಜೊತೆಗೆ ಯುವಜನತೆಗೆ ಬುದ್ದಿ ಹೇಳುವ ಜೊತೆಗೆ ಪೊಲೀಸರು ಲಾಠಿ ರುಚಿಯನ್ನು ತೋರಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಸುಮಾರು 50 ಕ್ಕೂ ಹೆಚ್ಚು ಅಡ್ಡೆಗಳ ಮೇಲೆ ದಾಳಿ ಮಾಡಿ ಕ್ರಮ ಕೈಗೊಂಡಿದ್ದಾರೆ. ಇನ್ನು ಅಬಕಾರಿ ಹಾಗೂ ಡ್ರಗ್​ ಕಂಟ್ರೋಲರ್​ ಸಹ ಪೊಲೀಸರ ಜೊತೆಗೆ ನಿರಂತರ ಕಾರ್ಯಾಚರಣೆ ಮಾಡಿ ಮಾದಕತೆ ಇರುವ ಮಾತ್ರೆಗಳನ್ನು ಮಾರಾಟ ಮಾಡುವ ಮುನ್ನ ಎಚ್ಚರ ವಹಿಸಲು ಸೂಚಿಸಿದೆ. ಒಟ್ಟಾರೆ ಕೋಲಾರದಲ್ಲಿ ಅತಿಯಾಗಿರುವ ಗಾಂಜಾ, ಡ್ರಗ್ಸ್​, ಸೇರಿದಂತೆ ಕ್ರಿಕೆಟ್ ಬೆಟ್ಟಿಂಗ್ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ವಿಶೇಷ ಡ್ರೈವ್​ಗಳನ್ನು ಮಾಡಲಾಗುತ್ತಿದೆ. ಸದ್ಯ ಇದಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಮಾತುಗಳು ಕೇಳಿಬರುತ್ತಿವೆ. ಆದರೂ ಅಪರಾಧ ಪ್ರಕರಣಗಳಿಗೆ ಕಡಿವಾಣ ಬೀಳುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ