AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಲಾಕ್​ಡೌನ್​ನಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಳ

ಬಡ, ಮಧ್ಯಮ ಮತ್ತು ಮೇಲ್ವರ್ಗ, ಗಂಡು ಹಾಗೂ ಹೆಣ್ಣು ಹೀಗೆ ಎಲ್ಲಾ ವರ್ಗದ ಮಕ್ಕಳಲ್ಲೂ ಅಪೌಷ್ಟಿಕತೆ ಕಾಣಿಸಿಕೊಂಡಿದೆ. ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಅಪೌಷ್ಟಿಕತೆಗೆ ತುತ್ತಾಗಿದ್ದಾರೆ.

ಕೋಲಾರ: ಲಾಕ್​ಡೌನ್​ನಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಳ
ಕೋಲಾರದಲ್ಲಿ ಮಕ್ಕಳಿಗೆ ಪೌಷ್ಠಿಕಾಂಶದ ಕೊರತೆ
TV9 Web
| Updated By: guruganesh bhat|

Updated on:Jul 26, 2021 | 10:12 PM

Share

ಕೋಲಾರ: ಕೊವಿಡ್‌ ಹಾಗೂ ಲಾಕ್‌ಡೌನ್ ಕಾರಣಕ್ಕೆ ಜಿಲ್ಲೆಯಲ್ಲಿ ಕಳೆದೊಂದು ವರ್ಷದಿಂದ ಅಪೌಷ್ಟಿಕ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಲು ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ನಡೆದ ಸಮೀಕ್ಷೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಶೇ 1.02ರಷ್ಟು ಹೆಚ್ಚಳವಾಗಿದೆ. ಎಂ.ಜಿ.ಪಾಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಅಪೌಷ್ಟಿಕತೆ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ದಿಢೀರ್‌ ಏರಿಕೆಯಾಗಿದ್ದು, ಈ ಮಕ್ಕಳು ಸಾವಿನ ದವಡೆಯಲ್ಲಿ ಸಿಲುಕಿವೆ ಎಂಬ ಆತಂಕಕಾರಿ ಸಂಗತಿ ಸಮೀಕ್ಷೆಯಿಂದ ಬಯಲಾಗಿದೆ. ಕೊವಿಡ್ ಹಾಗೂ ಲಾಕ್‌ಡೌನ್‌ ಕಾರಣಕ್ಕೆ ಕಳೆದೊಂದು ವರ್ಷದಿಂದ ಅಂಗನವಾಡಿಗಳು ಬಂದ್‌ ಆಗಿವೆ. ಮತ್ತೊಂದೆಡೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಕೊವಿಡ್‌ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಹೀಗಾಗಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಮೀಕ್ಷೆ ಜಿಲ್ಲೆಯಲ್ಲಿ ಕುಂಠಿತಗೊಂಡಿತ್ತು. ಜಿಲ್ಲೆಯಲ್ಲಿ 2,080 ಅಂಗನವಾಡಿ ಕೇಂದ್ರಗಳಿದ್ದು, ಈ ಕೇಂದ್ರಗಳಿಗೆ ಬರುವ ಹುಟ್ಟಿನಿಂದ 6 ವರ್ಷ ವಯೋಮಾನದವರೆಗಿನ 98,569 ಮಕ್ಕಳ ತೂಕ, ಬೆಳವಣಿಗೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಜಂಟಿ ಸಮೀಕ್ಷೆ ನಡೆಸಿದ್ದಾರೆ. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿರುವ ಆತಂಕ ಮೂಡಿಸುತ್ತಿದೆ.

ತೀವ್ರ ಅಪೌಷ್ಠಿಕ ಮಕ್ಕಳು, ಸಾಧಾರಣ ಅಪೌಷ್ಠಿಕ ಮಕ್ಕಳಲ್ಲೂ ಹೆಚ್ಚಳ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯೂಎಚ್‌ಒ) ಮಾರ್ಗಸೂಚಿ ಪ್ರಕಾರ ಮಕ್ಕಳ ವಯಸ್ಸು ಮತ್ತು ತೂಕದ ಆಧಾರದ ಮೇಲೆ ಬೆಳವಣಿಗೆಯನ್ನು ಗ್ರೇಡ್ ಆಧಾರದಲ್ಲಿ ಗುರುತಿಸಲಾಗುತ್ತದೆ. ಅದರ ಪ್ರಕಾರ ಸಾಮಾನ್ಯ, ಸಾಧಾರಣ ಮತ್ತು ತೀವ್ರ ಕಡಿಮೆ ತೂಕ ಹೊಂದಿರುವ ಮಕ್ಕಳೆಂದು ನಿರ್ಧರಿಸಲಾಗುತ್ತದೆ. ಮೇ ಅಂತ್ಯದವರೆಗೆ ಜಿಲ್ಲೆಯಲ್ಲಿ ಸಾಧಾರಣ ಅಪೌಷ್ಟಿಕತೆ (ಮಾಡರೇಟ್‌ ಅಕ್ಯೂಟ್‌ ಮಾಲ್‌ನ್ಯೂಟ್ರಿಷನ್‌ ಮ್ಯಾಮ್‌) ಸಮಸ್ಯೆಯಿಂದ ಬಳಲುತ್ತಿದ್ದ ಮಕ್ಕಳ ಸಂಖ್ಯೆ 2,532 ತೀವ್ರ ಅಪೌಷ್ಟಿಕತೆಗೆ (ಸಿವಿಯರ್‌ ಅಕ್ಯೂಟ್‌ ಮಾಲ್‌ನ್ಯೂಟ್ರಿಷನ್‌ ಸ್ಯಾಮ್‌) ತುತ್ತಾಗಿರುವ ಮಕ್ಕಳ ಸಂಖ್ಯೆ 93 ಇತ್ತು. ಜೂನ್‌ನಲ್ಲಿ ನಡೆದ ಸಮೀಕ್ಷೆಯಲ್ಲಿ ಹೊಸದಾಗಿ 1,039 ಮಂದಿ ಸಾಧಾರಣ ಅಪೌಷ್ಠಿಕ ಮಕ್ಕಳು ಹಾಗೂ 30 ಮಂದಿ ತೀವ್ರಅಪೌಷ್ಠಿಕ ಮಕ್ಕಳು ಪತ್ತೆಯಾಗಿದ್ದಾರೆ. ಇದರೊಂದಿಗೆ ಮ್ಯಾಮ್‌ ಮಕ್ಕಳ ಸಂಖ್ಯೆ 3,571ಕ್ಕೆ ಮತ್ತು ಸ್ಯಾಮ್‌ ಮಕ್ಕಳ ಸಂಖ್ಯೆ 123ಕ್ಕೆ ಏರಿಕೆಯಾಗಿದೆ. ಸಾಧಾರಣ ತೂಕ ಹೊಂದಿರುವ ಮಕ್ಕಳಲ್ಲಿ ಸಾಧಾರಣ ಅಪೌಷ್ಟಿಕತೆ ಹಾಗೂ ತೀರಾ ಕಡಿಮೆ ತೂಕ ಹೊಂದಿರುವ ಮಕ್ಕಳಲ್ಲಿ ತೀವ್ರ ಅಪೌಷ್ಟಿಕತೆ ಇರುವುದು ಸಮೀಕ್ಷೆಯಿಂದ ಗೊತ್ತಾಗಿದೆ.

ಗ್ರಾಮೀಣ ಭಾಗದ ಮಕ್ಕಳಲ್ಲೇ ಅಪೌಷ್ಠಿಕತೆ ಹೆಚ್ಚು ಬಡ, ಮಧ್ಯಮ ಮತ್ತು ಮೇಲ್ವರ್ಗ, ಗಂಡು ಹಾಗೂ ಹೆಣ್ಣು ಹೀಗೆ ಎಲ್ಲಾ ವರ್ಗದ ಮಕ್ಕಳಲ್ಲೂ ಅಪೌಷ್ಟಿಕತೆ ಕಾಣಿಸಿಕೊಂಡಿದೆ. ನಗರ ಪ್ರದೇಶಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಅಪೌಷ್ಟಿಕತೆಗೆ ತುತ್ತಾಗಿದ್ದಾರೆ. ಈ ಮಕ್ಕಳಲ್ಲಿ ಅಂಗವೈಕಲ್ಯ, ಕಡಿಮೆ ಬುದ್ಧಿಶಕ್ತಿ, ಕುರುಡುತನ, ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗಿದೆ.

ಅಪೌಷ್ಠಿಕತೆಗೆ ಪ್ರಮುಖ ಕಾರಣಗಳೇನು? ಬಾಲ್ಯವಿವಾಹ, ಗರ್ಭಿಣಿಯರಲ್ಲಿನ ರಕ್ತಹೀನತೆ, ಅವಧಿಪೂರ್ವ ಹೆರಿಗೆ, ಹುಟ್ಟು ನ್ಯೂನತೆ, ಕಡಿಮೆ ತೂಕ, ಸೋಂಕು, ಶುದ್ಧ ನೀರು ಹಾಗೂ ಆಹಾರದ ಕೊರತೆ, ನೈರ್ಮಲ್ಯ ಸಮಸ್ಯೆ, ಪೋಷಕರಲ್ಲಿ ಮಕ್ಕಳ ಪಾಲನೆಯ ತಿಳಿವಳಿಕೆ ಇಲ್ಲದಿರುವುದು, ಒಂದು ಹೆರಿಗೆಗೂ ಮತ್ತೊಂದು ಹೆರಿಗೆಗೂ ಹೆಚ್ಚಿನ ಅಂತರ ಇಲ್ಲದಿರುವುದು, ರಕ್ತ ಸಂಬಂಧದಲ್ಲಿನ ಮದುವೆಯು ಅಪೌಷ್ಟಿಕತೆಗೆ ಮುಖ್ಯ ಕಾರಣಗಳೆಂದು ವೈದ್ಯರು ಗುರುತಿಸಿದ್ದಾರೆ.

ಆರು ವರ್ಷದೊಳಗಿನ ಮಕ್ಕಳ ಸಾವಿಗೆ ಇದು ಒಂದು ಕಾರಣ ಸಾಮಾನ್ಯವಾಗಿ ಆರು ವರ್ಷದೊಳಗಿನ ಮಕ್ಕಳ ಸಾವಿಗೆ ಕಾರಣವಾಗುವ ಅಂಶಗಳಲ್ಲಿ ಅಪೌಷ್ಟಿಕತೆಯು ಪ್ರಮುಖವಾಗಿದ್ದು, ಸ್ಯಾಮ್‌ ಮಕ್ಕಳ ಆರೋಗ್ಯದ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ತೀರಾ ಕಡಿಮೆ ತೂಕ ಹೊಂದಿರುವ ಸ್ಯಾಮ್‌ ಮಕ್ಕಳನ್ನು ವೈದ್ಯಕೀಯವಾಗಿ ಆರೋಗ್ಯ ಕಾರ್ಯಕರ್ತರ ಪರಿಭಾಷೆಯಲ್ಲಿ ಸಾವಿನತ್ತ ಹೆಜ್ಜೆ ಹಾಕಿರುವ ಮಕ್ಕಳೆಂದೇ ಪರಿಗಣಿಸಲಾಗುತ್ತದೆ. ಸ್ಯಾಮ್‌ ಮಕ್ಕಳನ್ನು ಜಿಲ್ಲಾ ಆಸ್ಪತ್ರೆಯಲ್ಲಿನ ಪೌಷ್ಟಿಕ ಆಹಾರ ಪುನರ್ವಸತಿ ಕೇಂದ್ರಕ್ಕೆ ಕರೆತಂದು ಆರೈಕೆ ಮಾಡಲಾಗುತ್ತದೆ. 15 ದಿನಗಳ ಕಾಲ ಮಕ್ಕಳನ್ನು ಕೇಂದ್ರದಲ್ಲೇ ಇರಿಸಿಕೊಂಡು ತೂಕ ಮತ್ತು ಬೆಳವಣಿಗೆ ವೃದ್ಧಿಗೆ ಪೂರಕವಾದ ಪೌಷ್ಟಿಕ ಆಹಾರ ಪದಾರ್ಥ ಕೊಡಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸ್ಯಾಮ್‌ ಮಕ್ಕಳಲ್ಲಿನ ಅಪೌಷ್ಟಿಕತೆ ದೂರ ಮಾಡಲು ಮುಂದಾಗಿದೆ.

ವಿಶೇಷ ವರದಿ: ರಾಜೇಂದ್ರ ಸಿಂಹ

ಇದನ್ನೂ ಓದಿ: 

ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಬಂದ 55 ವರ್ಷದ ಕೋಲಾರದ ವ್ಯಕ್ತಿ

ಕೋಲಾರ ಜಿಲ್ಲೆಯಲ್ಲಿ ಶುರುವಾಗಿದೆ ನೇರಳೆ ಕ್ರಾಂತಿ, ಎಕರೆಗಟ್ಟಲೆ ಪ್ರದೇಶದಲ್ಲಿ ಬೆಳೆದ ರೈತರ ಮುಖದಲ್ಲಿ ಮಂದಹಾಸ

(Kolar Increased Malnutrition in Children from Covid Lockdown)

Published On - 10:04 pm, Mon, 26 July 21

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​