AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಶ್ರೀರಾಮನ ಬಗ್ಗೆ ಅವಹೇಳನ: ವಿಡಿಯೋ ಹರಿಬಿಟ್ಟಿದ್ದ ಇಬ್ಬರು ಯುವಕರು ವಶಕ್ಕೆ

ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದ ಇಬ್ಬರು ಯುವಕರನ್ನು ಜಿಲ್ಲೆಯ KGF ತಾಲೂಕಿನ ಬೇತಮಂಗಲ ಗ್ರಾಮದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುಂದರಪಾಳ್ಯ ಗ್ರಾಮದ ಜುಬೇರ್, ಮುಬಾರಕ್​ ವಶಕ್ಕೆ ಪಡೆದ ಯುವಕರು. ಅಶ್ಲೀಲವಾಗಿ ಕಮೆಂಟ್​ ಮಾಡಿ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳನ್ನು ಪೊಲೀಸರಿಗೆ ಹಿಂದೂ ಸಂಘಟನೆ ಮುಖಂಡರು ಒಪ್ಪಿಸಿದ್ದಾರೆ.

ಕೋಲಾರ: ಶ್ರೀರಾಮನ ಬಗ್ಗೆ ಅವಹೇಳನ: ವಿಡಿಯೋ ಹರಿಬಿಟ್ಟಿದ್ದ ಇಬ್ಬರು ಯುವಕರು ವಶಕ್ಕೆ
ಹರಿಬಿಟ್ಟಿದ್ದ ಶ್ರೀರಾಮನ ಫೋಟೋ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ|

Updated on:Jan 18, 2024 | 6:15 PM

Share

ಕೋಲಾರ, ಜನವರಿ 18: ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದ ಇಬ್ಬರು ಯುವಕರನ್ನು ಜಿಲ್ಲೆಯ KGF ತಾಲೂಕಿನ ಬೇತಮಂಗಲ ಗ್ರಾಮದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುಂದರಪಾಳ್ಯ ಗ್ರಾಮದ ಜುಬೇರ್, ಮುಬಾರಕ್​ ವಶಕ್ಕೆ ಪಡೆದ ಯುವಕರು. ಶ್ರೀರಾಮನ ಮತ್ತು ಗುಂಬಜ್ ಫೋಟೋ ಹಾಕಿ ಅಶ್ಲೀಲವಾಗಿ ಕಮೆಂಟ್​ ಮಾಡಿ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಿಡಿಗೇಡಿಗಳನ್ನು ಪೊಲೀಸರಿಗೆ ಹಿಂದೂ ಸಂಘಟನೆ ಮುಖಂಡರು ಒಪ್ಪಿಸಿದ್ದಾರೆ. ಹಿಂದೂ ಪರ ಸಂಘಟನೆ ಕಾರ್ಯಕರ್ತರ ದೂರಿನ ಮೇರೆಗೆ ಇಬ್ಬರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗಿದೆ.

ಮುಳಬಾಗಿಲಿನಲ್ಲಿ ಕೆಲ ಕಿಡಿಗೇಡಿಗಳು ಮರ್ಯಾದಾ ಪುರುಷೋತ್ತಮನ ಕಟೌಟ್‌ ಮತ್ತು ಫ್ಲೆಕ್ಸ್‌ಗಳನ್ನ ಹರಿದು ಹಾಕಿದ್ದರು. ಜನವರಿ 21ರಂದು ನಗರದಲ್ಲಿ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಅದಕ್ಕಾಗಿ ನಗರದ ಹಲವೆಡೆ ಶ್ರೀರಾಮನ ಫ್ಲೆಕ್ಸ್ ಹಾಕಲಾಗಿತ್ತು. ಆದರೆ ಕಳೆದ ರಾತ್ರಿ ಕೆಲ ಕಿಡಿಗೇಡಿಗಳು, ವಿಠಲೇಶ್ವರಪಾಳ್ಯ ಮತ್ತು ಗುನುಗುಂಟೆಪಾಳ್ಯದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‌ಗಳನ್ನು ಹರಿದಿದ್ದರು.

ಇದನ್ನೂ ಓದಿ: ಕೋಲಾರ: ಶ್ರೀರಾಮನ ಕಟೌಟ್, ಪ್ಲೆಕ್ಸ್​​ನ್ನು ಬ್ಲೇಡ್​​ನಿಂದ ಹರಿದ ದುಷ್ಕರ್ಮಿಗಳು, ಇಬ್ಬರ ಬಂಧನ

ವಿಷಯ ತಿಳಿಯುತ್ತಿದಂತೆ, ಕೋಲಾರ ಸಂಸದ ಎಸ್‌ ಮುನಿಸ್ವಾಮಿ ನೇತೃತ್ವದಲ್ಲಿ ಪ್ರತಿಭಟ ಕೂಡ ಮಾಡಲಾಗಿದೆ. ಕೂಡಲೇ ಆರೋಪಿಗಳನ್ನ ಬಂಧಿಸಬೇಕು. ಆರೋಪಿಗಳಿಂದಲೇ ಫ್ಲೆಕ್ಸ್‌ ಹಾಕಿಸಿ, ಅವರೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.

ವಾತಾವರಣ ಬಿಗುವಿನಿಂದ ಕೂಡಿದಾಗಲೇ, ಸ್ಥಳಕ್ಕೆ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಆಗಮಿಸಿದ್ದರು. ಆಗ ಸಂಸದ ಮತ್ತು ಶಾಸಕರ ಮಧ್ಯೆ ಮಾತಿನ ಚಕಮಕಿ ಉಂಟಾಗಿತ್ತು.

ಹಿಂದೂಗಳಿಗೆ ಘಾಸಿ ಮಾಡುವ ಷಡ್ಯಂತ್ರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಕೆಲವು ಸಮಾಜಘಾತುಕ ಶಕ್ತಿಗಳು. ಸಂಚು ರೂಪಿಸಿ ರಾಮಭಕ್ತರಿಗೆ ಮತ್ತು ಹಿಂದೂಗಳಿಗೆ ಘಾಸಿ ಮಾಡುವ ಷಡ್ಯಂತ್ರ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದರು.

ಇದನ್ನೂ ಓದಿ: ಹನುಮ ಜನ್ಮ ಸ್ಥಳ ಗಂಗಾವತಿ ತಾಲೂಕಿನಲ್ಲೂ ಇದೆ ಅಯೋಧ್ಯೆ ಗ್ರಾಮ; ಕುತೂಹಲ ಕೆರಳಿಸಿದೆ ಇಲ್ಲಿರುವ ಪುರಾತನ ರಾಮ ಮಂದಿರ

ಶ್ರೀರಾಮನ ಫ್ಲೆಕ್ಸ್ ಹರಿದ ಘಟನೆ ಹಿಂದುಗಳಿಗೆ ಘಾಸಿ ಮಾಡುವ ಷಡ್ಯಂತ್ರಗಳನ್ನು ರೂಪಿಸಿದಂತೆ ತೋರುತ್ತಿದೆ. ಪೊಲೀಸ್ ಇಲಾಖೆ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಿ. ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:14 pm, Thu, 18 January 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ