Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar: ರಾಜ್ಯದ ದಕ್ಷಿಣ ಕಾಶಿ ಎಂದೇ ಪ್ರಸಿದ್ದವಾಗಿರುವ ಅಂತರ ಗಂಗೆಯಲ್ಲಿ ಜಾತ್ರಾ ಮಹೋತ್ಸವ; ಹರಿದು ಬಂದ ಭಕ್ತ ಸಾಗರ

ರಾಜ್ಯದ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿ ಪಡೆದ ಕ್ಷೇತ್ರ ಅಂತರಗಂಗೆಯಲ್ಲಿ ಜಾತ್ರಾ ಮಹೊತ್ಸವದ ಸಂಭ್ರಮ, ಇಲ್ಲಿಗೆ ಕಾಶಿಯಿಂದಲೇ ಗಂಗೆ ಹರಿದು ಬರುತ್ತಾಳೆ ಎಂಬ ನಂಬಿಕೆ ಇದೆ. ಹಾಗಾಗಿ ಇಲ್ಲಿ ಸ್ವತ: ಕಾಶಿವಿಶ್ವೇಶ್ವರನೇ ನೆಲೆಸಿದ್ದಾನೆ ಎನ್ನುವ ಪ್ರತೀತಿ ಇದೆ.

Kolar: ರಾಜ್ಯದ ದಕ್ಷಿಣ ಕಾಶಿ ಎಂದೇ ಪ್ರಸಿದ್ದವಾಗಿರುವ ಅಂತರ ಗಂಗೆಯಲ್ಲಿ ಜಾತ್ರಾ ಮಹೋತ್ಸವ; ಹರಿದು ಬಂದ ಭಕ್ತ ಸಾಗರ
ಅಂತರಗಂಗೆ ಜಾತ್ರಾ ಮಹೋತ್ಸವ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 22, 2022 | 4:51 PM

ಕೋಲಾರ: ಜಿಲ್ಲಾ ಕೇಂದ್ರದಿಂದ ಎರಡು ಕಿ.ಮೀ ದೂರದಲ್ಲಿರುವ ಪ್ರಸಿದ್ದ ಯಾತ್ರಾಸ್ಥಳ ಅಂತರಗಂಗೆಯಲ್ಲಿ ಕಾರ್ತಿಕ ಮಾಸದ ಕಡೆಯ ಸೋಮವಾರದ ಪ್ರಯುಕ್ತ ದಕ್ಷಿಣದ ಕಾಶಿ ಎಂದೇ ಪ್ರಸಿದ್ದವಾಗಿರುವ ಅಂತರ ಗಂಗೆಯಲ್ಲಿ ಕಾಶಿವಿಶ್ವೇಶ್ವರನ ಜಾತ್ರೆ ನಡೆಯುತ್ತದೆ. ಬಸವನ ಬಾಯಿಂದ ಹರಿದು ಬರುವ ಗಂಗೆ (ನೀರು) ಕಾಶಿಯಿಂದಲೇ ಹರಿದು ಬರುತ್ತಾಳೆಂಬ ಪ್ರತೀತಿ ಇದೆ. ಜೊತೆಗೆ ಇಲ್ಲಿ ಸಾಕ್ಷಾತ್​ ಕಾಶಿವಿಶ್ವೇಶ್ವರ ಸ್ವಾಮಿ ನೆಲೆಸಿದ್ದಾನೆ. ಈ ಸಲುವಾಗಿ ಪ್ರತಿ ವರ್ಷ ಕಾರ್ತಿಕ ಮಾಸದ ಕಡೆಯ ಸೋಮವಾರದಂದು ಅಂತರಗಂಗೆಯಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗುತ್ತದೆ. ಈ ದಿನದಂದು ಇಲ್ಲಿಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಮಂದಿ ಭಕ್ತರು ಇಲ್ಲಿಗೆ ಸಾಗರೋಪಾದಿಯಲ್ಲಿ ಹರಿದು ಬರುತ್ತಾರೆ.

ಇನ್ನು ವಿಶೇಷವಾಗಿ ಇಲ್ಲಿಗೆ ಬರುವ ಭಕ್ತರು ಕಾಶಿವಿಶ್ವೇಶ್ವರ ದರ್ಶನ ಪಡೆದು ತಮ್ಮ ಕೋರಿಕೆಗಳನ್ನು ಈಡೇರಿಸುವಂತೆ ಪ್ರಾರ್ಥಿಸುತ್ತಾರೆ. ಈ ವಿಶೇಷ ದಿನದ ಅಂಗವಾಗಿ ಕಾಶಿವಿಶ್ವೇಶ್ವರ ಸ್ವಾಮಿಗೆ ಮುಂಜಾನೆ ನಾಲ್ಕು ಗಂಟೆಯಿಂದಲೇ ವಿಶೇಷ ಪೂಜೆ, ಅಭಿಷೇಕ, ಹೋಮ ಹವನ ಜೊತೆಗೆ ಸಂಜೆ ವೇಳೆಗೆ ತೆಪ್ಪೋತ್ಸವ ಕಾರ್ಯಕ್ರಮಗಳು ನಡೆಯುತ್ತವೆ. ಮುಜರಾಯಿ ಇಲಾಖೆಗೆ ಸೇರುವ ಈ ಯಾತ್ರಾಸ್ಥಳದಲ್ಲಿ ಹಿಂದೂ ಪರ ಸಂಘಟನೆಗಳು, ಬರುವ ಭಕ್ತರ ಯೋಗಕ್ಷೇಮ ವಿಚಾರಿಸಿಕೊಂಡು ಜನರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುತ್ತಾರೆ. ಹೀಗೆ ಕಳೆದ 25 ವರ್ಷಗಳಿಂದ ಭಜರಂಗದಳ, ವಿಶ್ವಹಿಂದೂ ಪರಿಷತ್​ ಕಾರ್ಯಕರ್ತರು ಇಲ್ಲಿಗೆ ಬರುವ ಭಕ್ತರಿಗೆ ಕುಡಿಯುವ ನೀರು, ಪ್ರಸಾದ, ಉಚಿತ ಬಸ್ ವ್ಯವಸ್ಥೆ ಸೇರಿದಂತೆ ಹಲವಾರು ಸೌಕರ್ಯಗಳನ್ನು ಕಲ್ಪಿಸುತ್ತಾ ಬಂದಿದ್ದಾರೆ.

ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಶಾಸಕ ವರ್ತೂರ್ ಪ್ರಕಾಶ್​ ಅವರು ಕೂಡ ಬಂದು ದೇವರ ದರ್ಶನ ಪಡೆದು ಪುನೀತರಾದರು. ಜೊತೆಗೆ ಈ ಸಂದರ್ಭದಲ್ಲಿ ಮಾತನಾಡಿದ ವರ್ತೂರ್​ ಪ್ರಕಾಶ್​, ಮುಂದಿನ ವರ್ಷದ ಜಾತ್ರೆಯ ಹೊತ್ತಿಗೆ ಇಲ್ಲಿ ದ್ವಾರ ನಿರ್ಮಾಣ ಮಾಡುವುದಾಗಿ ಹೇಳಿದರು. ಹಲವು ವರ್ಷಗಳಿಂದ ಇಲ್ಲಿಗೆ ಬರುವ ಭಕ್ತರು ದೇವರ ದರ್ಶನ ಪಡೆದು ತಮ್ಮ ಇಷ್ಟಾರ್ಥಗಳು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥನೆ ಮಾಡುತ್ತಾರೆ. ಅದರಂತೆ ಭಕ್ತರ ಕೋರಿಕೆಗಳನ್ನು ಕಾಶಿವಿಶ್ವೇಶ್ವರ ಈಡೇರಿಸುತ್ತಾನೆ ಎಂದು ಭಕ್ತರ ನಂಬಿಕೆ ಆಗಿದೆ.

ಇದನ್ನೂ ಓದಿ: ಬಲಿ ಕಾ ಬಕ್ರಾ ಮಾಡಲು ಸಿದ್ದರಾಮಯ್ಯರನ್ನು ಕೋಲಾರಕ್ಕೆ ಕರೆತರಲಾಗುತ್ತಿದೆ: ಸಿ ಎಮ್ ಇಬ್ರಾಹಿಂ

ಒಟ್ಟಾರೆ ಕಡೆಯ ಕಾರ್ತಿಕ ಮಾಸದಲ್ಲಿ ಶಿವನಿಗೆ ಪೂಜೆ ಮಾಡಿದರೆ ತಮ್ಮ ಇಷ್ಟಾರ್ಥಗಳು ಈಡೇರುತ್ತವೆ ಅನ್ನುವ ನಂಬಿಕೆ ಭಕ್ತರಲ್ಲಿದೆ. ಅದರಲ್ಲೂ ಕಾಶಿಗೆ ಹೋಗಲಾರದವರು ಇಲ್ಲಿಗೆ ಬಂದು ಶಿವನ ದರ್ಶನ ಪಡೆದು ಪುನೀತರಾಗುತ್ತಾರೆ. ಕಾರ್ತಿಕ ಮಾಸದ ಕಡೆಯ ಸೋಮವಾರದಂದು ಕೋಲಾರದ ಅಂತರಗಂಗೆಯಲ್ಲಿ ಜನರ ಜಾತ್ರೆಯೇ ಹರಿದು ಬಂದಿದ್ದು ಮಾತ್ರ ವಿಶೇಷ.

ವರದಿ: ರಾಜೇಂದ್ರ ಸಿಂಹ ಟಿವಿ9 ಕೋಲಾರ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಲಾಂಗ್ ಝಳಪಿಸಿದ ವಿನಯ್-ರಜತ್ ಮೇಲೆ ಬಿತ್ತು ಕೇಸ್; ಸಂಕಷ್ಟದಲ್ಲಿ ಗೆಳೆಯರು
ಲಾಂಗ್ ಝಳಪಿಸಿದ ವಿನಯ್-ರಜತ್ ಮೇಲೆ ಬಿತ್ತು ಕೇಸ್; ಸಂಕಷ್ಟದಲ್ಲಿ ಗೆಳೆಯರು