AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar News: ಮೂವರು ನಕಲಿ ಎಸಿಬಿ ಅಧಿಕಾರಿಗಳ ಬಂಧನ: ಯಾರು ಮಾಡದ ತಪ್ಪನ್ನು ನಾವೇನು ಮಾಡಿಲ್ಲವೆಂದ ಆರೋಪಿಗಳು

ಕೋಟ್ಯಂತರ ಹಣ ಲೂಟಿ ಮಾಡಿದವರನ್ನು ಹೊರತಂದವರೆ ನಾವು ಎಂದು ನಕಲಿ ಎಸಿಬಿ‌ ಅಧಿಕಾರಿಗಳು ತಮ್ಮ‌ ಕೆಲಸವನ್ನ ಸಮರ್ತಿಸಿಕೊಂಡರು.

Kolar News: ಮೂವರು ನಕಲಿ ಎಸಿಬಿ ಅಧಿಕಾರಿಗಳ ಬಂಧನ: ಯಾರು ಮಾಡದ ತಪ್ಪನ್ನು ನಾವೇನು ಮಾಡಿಲ್ಲವೆಂದ ಆರೋಪಿಗಳು
ಬಾಗಲಕೋಟೆಯಲ್ಲಿ ಮೂವರು ನಕಲಿ ಎಸಿಬಿ ಅಧಿಕಾರಿಗಳ ಬಂಧನ
TV9 Web
| Edited By: |

Updated on: Jul 19, 2022 | 10:59 AM

Share

ಕೋಲಾರ: ಮೂವರು ನಕಲಿ ಎಸಿಬಿ ಅಧಿಕಾರಿಗಳನ್ನು (fake ACB officers) ಕೋಲಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ನಗರದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ ಎಂಬುವರಿಗೆ ತಾವು ಎಸಿಬಿ ಅಧಿಕಾರಿಗಳು ಎಂದು ಕರೆ ಮಾಡಿ, ಆರೋಪಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಮ್ಮ ಭ್ರಷ್ಟಾಚಾರದ ಬಗ್ಗೆ ನಮಗೆ ಮಾಹಿತಿ ಬಂದಿದ್ದು, ನಿಮ್ಮ ಮೇಲೆ ದಾಳಿ ಮಾಡದಂತೆ ಇರಬೇಕಾದರೆ, ನಾವು ಹೇಳಿದ ಅಕೌಂಟ್​ಗೆ ಲಕ್ಷ ರೂಪಾಯಿ ಹಣ ಹಾಕಿ ಎಂದು ಬೆದರಿಕೆ ಹಾಕಿದ್ದರು. ಅನುಮಾನಗೊಂಡ ನಾರಾಯಣಗೌಡ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಸ್ಪಿ ಡಿ. ದೇವರಾಜ್ ಅವರ ಮಾರ್ಗದರ್ಶನದಲ್ಲಿ ಬಾಗಲಕೋಟಯಲ್ಲಿ ಮೂವರು ಆರೋಪಿಗಳ ಬಂಧಿಸಲಾಗಿದೆ. ಚಿಕ್ಕೋಡಿಯ ಸಾದಲಗ ಮೂಲದ ಮುರಿಗಪ್ಪ, ಸಕಲೇಶಪುರ ಮೂಲದ ರಜನಿಕಾಂತ್ ಹಾಗೂ ಮಹಾರಾಷ್ಟ್ರ ಕೊಲ್ಲಾಪುರ ಮೂಲದ ರಾಜೇಶ್ ಬಂಧಿತ ನಕಲಿ ಎಸಿಬಿ ಅಧಿಕಾರಿಗಳು.

ಇದನ್ನೂ ಓದಿ: Raichur News: ಜೀವದ ಹಂಗು ತೊರೆದು ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿಗಳು: ಸೇತುವೆ ಇಲ್ಲದೇ ವಿದ್ಯಾರ್ಥಿಗಳ ಪರದಾಟ

ಬಂಧಿತ ಆರೋಪಿ ಮುರಿಗಪ್ಪ 2008ರಲ್ಲಿ ಡಿಸ್​ಮಿಸ್ ಆದ ಪೊಲೀಸ್ ಪೇದೆ. ಆರೋಪಿಗಳ ವಿರುದ್ಧ ಬೆಂಗಳೂರು ಸೇರಿದಂತೆ ವಿವಿಧ ಠಾಣೆಯಲ್ಲಿ 50ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರು ಪಡೆಸಿ ನಂತರ ಪೊಲೀಸರು ತಮ್ಮ ವಶಕ್ಕೆ ಪಡೆಯಲಿದ್ದಾರೆ. ಪೋಲೀಸ್ ವಾಹನಕ್ಕೆ ಹತ್ತಿಸುವ ಸಮಯದಲ್ಲಿ ಯಾರು ಮಾಡದ ತಪ್ಪು ನಾವು ಮಾಡಿಲ್ಲ. ಕೋಟ್ಯಂತರ ಹಣ ಲೂಟಿ ಮಾಡಿದವರನ್ನು ಹೊರತಂದವರೆ ನಾವು ಎಂದು ನಕಲಿ ಎಸಿಬಿ‌ ಅಧಿಕಾರಿಗಳು ತಮ್ಮ‌ ಕೆಲಸವನ್ನ ಸಮರ್ತಿಸಿಕೊಂಡರು. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ  ಓದಿ: ರೌಡಿಶೀಟರ್ ಹಂದಿ ಅಣ್ಣಿ ಕೊಲೆ ಪ್ರಕರಣ: ಪೊಲೀಸರ ಮುಂದೆ ಶರಣಾಗಿ ತಪ್ಪೊಪ್ಪಿಕೊಂಡ ಆರೋಪಿಗಳು ಡಾಬಾದಲ್ಲಿ ಮೊಬೈಲ್‌ ಕಳ್ಳತನಗೈದು ಕಳ್ಳ ಪರಾರಿ

ವಿಜಯಪುರ: ಡಾಬಾದಲ್ಲಿ ಮೊಬೈಲ್‌ ಕಳ್ಳತನಗೈದು ಕಳ್ಳ ಪರಾರಿಯಾಗಿರುವಂತಹ ಘಟನೆ ನಗರದ ಸೋಲಾಪುರ ರಸ್ತೆಯ ರಾಜಸ್ಥಾನಿ ಡಾಬಾದಲ್ಲಿ ನಡೆದಿದೆ. ಡಾಬಾದ ಹಿಂಬದಿಯಿಂದ ಒಳಗಡೆ ನುಗ್ಗಿ ಕೃತ್ಯ ಎಸಗಲಾಗಿದೆ. ಡಾಬಾ ಮಾಲೀಕ ಗೋಪಾಲಗೆ ಸೇರಿದ ಮೊಬೈಲ್ ಕಳ್ಳತನವಾಗಿದ್ದು, ಕದೀಮನ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರ್ಶನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ