AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಮತ್ತೆ ಭೂಸಂಕಷ್ಟ? ಜ. 15 ರೊಳಗೆ ಸರ್ವೆ ಮುಗಿಸಲು ಹೈಕೋರ್ಟ್ ಆದೇಶ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧದ ಅರಣ್ಯ ಭೂಮಿ ಒತ್ತುವರಿ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಸೂಚನೆ ನಿಡಿದೆ. ಜಂಟಿ ಸರ್ವೆಯನ್ನು ಜನವರಿ 15 ರೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದೆ. ಅವರನ್ನು ರಕ್ಷಿಸುವ ಸರ್ಕಾರದ ತೆರೆಮರೆ ಪ್ರಯತ್ನಗಳಿಗೆ ಹೈಕೋರ್ಟ್ ಚಾಟಿ ಬೀಸಿದ್ದು, ಮೇಲ್ಮನವಿಗೂ ಅವಕಾಶವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದೆ.

ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ಗೆ ಮತ್ತೆ ಭೂಸಂಕಷ್ಟ? ಜ. 15 ರೊಳಗೆ ಸರ್ವೆ ಮುಗಿಸಲು ಹೈಕೋರ್ಟ್ ಆದೇಶ
ಮಾಜಿ ಸ್ಪೀಕರ್ ರಮೇಶ್ ಕುಮಾರ್ & ಹೈಕೋರ್ಟ್​
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Jan 02, 2025 | 7:07 AM

Share

ಕೋಲಾರ, ಜನವರಿ 2: ಅರಣ್ಯ ಭೂಮಿ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ರಕ್ಷಣೆಗೆ ತೆರೆಮರೆ ಪ್ರಯತ್ನ ಮಾಡುತ್ತಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ. ಈ ಹಿಂದಿನ ಹೈಕೋರ್ಟ್​ ಆದೇಶದಂತೆ ಜಂಟಿ ಸರ್ವೆ ಮಾಡಿ ಮುಗಿಸಲು ಡೆಡ್‌ಲೈನ್ ನೀಡಿದೆ.

ಮಾಜಿ ಸ್ಪೀಕರ್ ರಮೇಶ್​ ಕುಮಾರ್ ಕಾಂಗ್ರೆಸ್​ನ ಪ್ರಭಾವಿ ಮುಖಂಡ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಅತ್ಯಾಪ್ತರು. ಹೀಗೆ ಸಾಕಷ್ಟು ಪ್ರಭಾವ ಹೊಂದಿರುವ ರಮೇಶ್​ ಕುಮಾರ್ ಅವರ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪವಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಜಿನಕಲಕುಂಟೆ ಅರಣ್ಯ ಪ್ರದೇಶದಲ್ಲಿನ ಹೊಸಹುಡ್ಯ ಗ್ರಾಮದ ಸರ್ವೆ ನಂ-1 ಮತ್ತು 2 ರಲ್ಲಿ 61.39 ಗುಂಟೆ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ್ದಾರೆ ಅನ್ನೋ ಆರೋಪವಿದೆ.

ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್

ಕಳೆದ ಎರಡು ದಶಕಗಳಿಂದ ನ್ಯಾಯಾಲಯದಲ್ಲಿ ಈ ಪ್ರಕರಣದ ಬಗ್ಗೆ ವಾದ, ಪ್ರತಿವಾದಗಳು ನಡೆಯುತ್ತಲೇ ಇವೆ. ಅರಣ್ಯ ಹಾಗೂ ಕಂದಾಯ ಇಲಾಖೆಗೆ ಜಂಟಿ ಸರ್ವೆ ಮಾಡಿ ಒತ್ತುವರಿಯಾಗಿದ್ದಲ್ಲಿ ತೆರವು ಮಾಡಿ ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದಿಲ್ಲೊಂದು ಕಾರಣ ನೀಡಿ ಮೂರು ಬಾರಿ ಜಂಟಿ ಸರ್ವೆ ಕಾರ್ಯ ಮುಂದೂಡಿತ್ತು. ಆದ್ರೀಗ ಹೈಕೋರ್ಟ್ ಜನವರಿ 15ರೊಳಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸರ್ವೆ ಕಾರ್ಯ ಮುಗಿಸಿ ಜನವರಿ 30 ರೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಮೇಲ್ಮನವಿಗೆ ಇಲ್ಲ ಅವಕಾಶ: ಹೈಕೋರ್ಟ್

ಮೇಲ್ಮನವಿ ಸಲ್ಲಿಸಲು ರಮೇಶ್​ ಕುಮಾರ್‌ಗೆ ಅವಕಾಶ ಇಲ್ಲ ಎಂದು ಹೈಕೋರ್ಟ್​ ಖಡಕ್​ ಎಚ್ಚರಿಕೆ ನೀಡಿದೆ. ಅಷ್ಟೇ ಅಲ್ಲ ಸರ್ಕಾರ, ಕಂದಾಯ ಇಲಾಖೆ ಪ್ರಾದೇಶಿಕ ಆಯುಕ್ತರಿಂದ ಮಾಡಿದ್ದ ಎಲ್ಲಾ ಆದೇಶಗಳನ್ನು ವಜಾ ಮಾಡಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜ್ಯ ಸರ್ಕಾರ ಡಿಎಫ್​ಓ ಏಡುಕುಂಡಲು ಅವರಿಗೆ ಮುಂಬಡ್ತಿ ನೀಡಿ ಕೋಲಾರದಿಂದ ಹಾಸನಕ್ಕೆ ವರ್ಗಾವಣೆ ಮಾಡಿದೆ.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಬಗ್ಗೆ ಗುತ್ತಿಗೆದಾರನ ಡೆತ್ ನೋಟ್​ನಲ್ಲೇನಿತ್ತು? ಅಸಲಿ ವಿಚಾರ ಇಲ್ಲಿದೆ ನೋಡಿ!

ಒಟ್ಟಾರೆ ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ಅವರ ರಕ್ಷಣೆಗೆ ತೆರೆಮರೆಯ ಪ್ರಯತ್ನ ಮಾಡುತ್ತಿದ್ದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿದೆ. ಜಂಟಿ ಸರ್ವೆ ವೇಳೆ ಅರಣ್ಯ ಒತ್ತುವರಿ ಸಾಬೀತಾದರೆ ರಮೇಶ್‌ಕುಮಾರ್​ಗೆ ಸಂಕಷ್ಟ ಎದುರಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:06 am, Thu, 2 January 25

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ