AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ದಂಧೆ; ವಿದ್ಯಾರ್ಹತೆಗಿಂತ ಶಿಫಾರಸ್ಸು ಪತ್ರವೇ ಮುಖ್ಯ

ಪಿಎಸ್​ಐ ನೇಮಕಾತಿ, ಶಿಕ್ಷಕರ ನೇಮಕಾತಿ ಸೇರಿದಂತೆ ಕೆಲವೊಂದು ಇಲಾಖೆಗಳಲ್ಲಿನ ನೇಮಕಾತಿಯಲ್ಲಿ ನಡೆದ ಅಕ್ರಮಗಳು ಬಯಲಿಗೆ ಬಂದಂತೆ, ಇದೀಗ ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ನಡೆದ ದಂಧೆ ವಿಚಾರವೂ ಬಟಾಬಯಲಾಗಿದೆ. ಸಂಭವನೀಯ ಅಭ್ಯರ್ಥಿಗಳ ಪಟ್ಟಿ ವೈರಲ್ ಆಗುತ್ತಿದ್ದು, ನೇಮಕಾತಿಯಲ್ಲಿ ಲಕ್ಷ ಲಕ್ಷ ಡೀಲ್ ನಡೆದಿರುವ ಅನುಮಾನ ವ್ಯಕ್ತವಾಗಿದೆ.

ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ದಂಧೆ; ವಿದ್ಯಾರ್ಹತೆಗಿಂತ ಶಿಫಾರಸ್ಸು ಪತ್ರವೇ ಮುಖ್ಯ
ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ದಂಧೆ, ಸಂಭವನೀಯ ಅಭ್ಯರ್ಥಿಗಳ ಪಟ್ಟಿ ವೈರಲ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: Rakesh Nayak Manchi|

Updated on:Dec 19, 2023 | 11:08 AM

Share

ಕೋಲಾರ, ಡಿ.19: ಪಿಎಸ್​ಐ ನೇಮಕಾತಿ, ಶಿಕ್ಷಕರ ನೇಮಕಾತಿ ಸೇರಿದಂತೆ ಕೆಲವೊಂದು ಇಲಾಖೆಗಳಲ್ಲಿನ ನೇಮಕಾತಿಯಲ್ಲಿ (Kolar Milk Union recruitment) ನಡೆದ ಅಕ್ರಮಗಳು ಬಯಲಿಗೆ ಬಂದಂತೆ, ಇದೀಗ ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ನಡೆದ ದಂಧೆ ವಿಚಾರವೂ ಬಟಾಬಯಲಾಗಿದೆ. ಸಂಭವನೀಯ ಅಭ್ಯರ್ಥಿಗಳ ಪಟ್ಟಿ ವೈರಲ್ ಆಗುತ್ತಿದ್ದು, ನೇಮಕಾತಿಯಲ್ಲಿ ಲಕ್ಷ ಲಕ್ಷ ಡೀಲ್ ನಡೆದಿರುವ ಅನುಮಾನ ವ್ಯಕ್ತವಾಗಿದೆ.

ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ವಿದ್ಯಾರ್ಹತೆಗಿಂತ ಶಿಫಾರಸ್ಸು ಪತ್ರವೇ ಮುಖ್ಯವಾಗಿದೆ. ಶಿಫಾರಸ್ಸು ಇದ್ದವರಿಗೆ ಮಾತ್ರ ಒಕ್ಕೂಟದಲ್ಲಿ ಕೆಲಸ ನೀಡಲಾಗುತ್ತದೆ. ಸೆಪ್ಟೆಂಬರ್​ನಲ್ಲಿ ಕೆರೆಯಲಾಗಿದ್ದ 81 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿ ಲಿಖಿತ ಪರೀಕ್ಷೆ ನಡೆದಿದ್ದು, ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಕೂಡ ಸಿದ್ಧವಾಗಿದೆ.

ಇದನ್ನೂ ಓದಿ: Hirings: ಅಕ್ಟೋಬರ್-ನವೆಂಬರ್ ತಿಂಗಳ ಜಾಬ್ ಡಾಟಾ; ಸಾಫ್ಟ್​ವೇರ್ ಅಲ್ಲದ ಕ್ಷೇತ್ರಗಳಲ್ಲಿ ಹೆಚ್ಚಿನ ನೇಮಕಾತಿ: ನೌಕ್ರಿ ಡಾಟ್ ಕಾಮ್ ವರದಿ

ಸದ್ಯ, ಸಂಭವನೀಯ ಅಭ್ಯರ್ಥಿಗಳ ಪಟ್ಟಿ ವೈರಲ್ ಆಗಿದ್ದು, ಅಭ್ಯರ್ಥಿಗಳ ಹೆಸರ ಮುಂದೆ ಶಿಫಾರಸ್ಸು ಮಾಡಿದರ ಹೆಸರು ಹಾಕಲಾಗಿದೆ. ಒಕ್ಕೂಟದ ನಿರ್ದೇಶಕರು ಸೇರಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಶಾಸಕರುಗಳ ಹೆಸರುಗಳು ಪತ್ತೆಯಾಗಿವೆ. ಇದರ ಪ್ರತಿ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ.

ಕೋಲಾರ ಹಾಲು ಒಕ್ಕೂಟದಲ್ಲಿನ 81 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನೆರಡು ದಿನದಲ್ಲಿ ನೇಮಕಾತಿ ಪ್ರಕ್ರಿಯೆ ಅಂತಿಮ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮುನ್ನ ನೇಮಕಾತಿ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಡುತ್ತಿದೆ.

ಬರೊಬ್ಬರಿ 40 ಕೋಟಿ ರೂ. ಸಂಗ್ರಹ

ಡಾ.ಚೇತನ್ ಹಾಗೂ ಮಾರ್ಕೆಟಿಂಗ್ ಮ್ಯಾನೇಜರ್ ನಾಗೇಶ್ ಅವರಿಗೆ ಹಣ ವಸೂಲಿ ಮಾಡುವುದೇ ಕಾಯಕವಾಗಿದೆ. 74 ಹುದ್ದೆಗಳಿಂದ ಬರೊಬ್ಬರಿ 40 ಕೋಟಿ ರೂಪಾಯಿ ಸಂಗ್ರಹ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ವ್ಯವಹಾರಗಳಿಂದ ಕೆಲವೇ ಕೆಲವು ಶಾಸಕರು ದೂರ ಉಳಿದಿದ್ದಾರೆ ಎಂದು ಟಿವಿ9ಗೆ ಒಕ್ಕೂಟದ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 am, Tue, 19 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ