AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳನ್ನು ನೋಡಲು ಅಮೆರಿಕಾಗೆ ಹೋದಾಗ ಸಾವು, ಭಾರತಕ್ಕೆ ಶವ ತರಲು ನೆರವಾದ ಕೋಲಾರ ಸಂಸದ ಮುನಿಸ್ವಾಮಿ

ವಯೋಸಹಜ ಕಾಯಿಲೆಯಿಂದ ಅಮೆರಿಕಾದಲ್ಲಿ ಮೃತಪಟ್ಟ ವೆಂಕಟೇಶಯ್ಯರ ಮೃತದೇಹವನ್ನು ಭಾರತಕ್ಕೆ ತರಲು ಕೋಲಾರ ಸಂಸದ ಮುನಿಸ್ವಾಮಿ ನೆರವಾಗಿದ್ದಾರೆ.ವೆಂಕಟೇಶಯ್ಯ ಅವರ ಮಗ ಸುರೇಶ್ ಕುಮಾರ್ ಹಾಗೂ ಇನ್ನೂ ಕೆಲವು ಸಂಬಂಧಿಕರು ಅಮೆರಿಕಾದ ಪೀಟರ್ಸ್ ಬರ್ಗ್ ನಲ್ಲಿ ನೆಲೆಸಿದ್ದರು. ಹೀಗಾಗಿ ಅಮೆರಿಕಾಕ್ಕೆ‌ ತೆರಳಿದ್ದ ವೆಂಕಟೇಶಯ್ಯ‌‌ ಅಮೆರಿಕಾಗೆ‌ ತೆರಳಿದ ಕೆಲವು ದಿನಗಳ ನಂತರ ಮೃತಪಟ್ಟಿದ್ದರು.

ಮಕ್ಕಳನ್ನು ನೋಡಲು ಅಮೆರಿಕಾಗೆ ಹೋದಾಗ ಸಾವು, ಭಾರತಕ್ಕೆ ಶವ ತರಲು ನೆರವಾದ ಕೋಲಾರ ಸಂಸದ ಮುನಿಸ್ವಾಮಿ
ಕೋಲಾರ ಸಂಸದ ಏಸ್​ ಮುನಿಸ್ವಾಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 03, 2023 | 10:51 AM

Share

ಕೋಲಾರ, ಸೆ.03: ತನ್ನ ಮಕ್ಕಳನ್ನು ನೋಡಿಕೊಂಡು ಬರಲು ಅಮೆರಿಕಾಕ್ಕೆ ತೆರಳಿದ್ದ ಕೋಲಾರ(Kolar) ಮೂಲದ ವ್ಯಕ್ತಿಯೊಬ್ಬರು ವಯೋಸಹಜ ಕಾಯಿಲೆಯಿಂದ ಅಮೆರಿಕಾದಲ್ಲಿ ಮೃತಪಟ್ಟಿದ್ದಾರೆ. ಕಳೆದ ಹನ್ನೊಂದು ದಿನಗಳ ಹಿಂದೆ ಅಂದರೆ ಆಗಸ್ಟ್ 23 ರಂದು ಕೋಲಾರದ ಗಾಂಧಿನಗರದ 91 ವರ್ಷದ ವೆಂಕಟೇಶಯ್ಯ ಮೃತಪಟ್ಟಿದ್ದು ಶವವನ್ನು ಭಾರತಕ್ಕೆ ತರಲು ಕುಟುಂಬಸ್ಥರು ಪರದಾಡುತ್ತಿದ್ದರು. ಸದ್ಯ ಕೋಲಾರ ಸಂಸದ ಮುನಿಸ್ವಾಮಿ(MP Muniswamy) ಅವರು ನೆರವಿನ ಹಸ್ತ ಚಾಚಿದ್ದು ನಾಳೆ ವೆಂಕಟೇಶಯ್ಯನವರ ಪಾರ್ಥಿವ ಶರೀರ ಭಾರತಕ್ಕೆ ಆಗಮಿಸಲಿದೆ. ಸಂಸದ ಮುನಿಸ್ವಾಮಿ ಅವರ ನೆರವಿಗಾಗಿ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ.

ವೆಂಕಟೇಶಯ್ಯ ಅವರ ಮಗ ಸುರೇಶ್ ಕುಮಾರ್ ಹಾಗೂ ಇನ್ನೂ ಕೆಲವು ಸಂಬಂಧಿಕರು ಅಮೆರಿಕಾದ ಪೀಟರ್ಸ್ ಬರ್ಗ್ ನಲ್ಲಿ ನೆಲೆಸಿದ್ದರು. ಹೀಗಾಗಿ ಅಮೆರಿಕಾಕ್ಕೆ‌ ತೆರಳಿದ್ದ ವೆಂಕಟೇಶಯ್ಯ‌‌ ಅಮೆರಿಕಾಗೆ‌ ತೆರಳಿದ ಕೆಲವು ದಿನಗಳ ನಂತರ ಮೃತಪಟ್ಟಿದ್ದಾರೆ. ಆದರೆ ಅವರ ಅಂತ್ಯ ಸಂಸ್ಕಾರವನ್ನು ಕೋಲಾರದಲ್ಲೇ ಮಾಡಬೇಕು ಎಂದು ಕುಟುಂಬಸ್ಥರು ನಿರ್ಧಾರ ಮಾಡಿದ ಹಿನ್ನಲೆ ಮೃತ ವೆಂಕಟೇಶಯ್ಯ ಅವರ ಶವವನ್ನು ಕೋಲಾರಕ್ಕೆ ತರಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೊಂದು ಕಾನೂನು ತೊಡಕುಗಳು ಬಂದ ಹಿನ್ನಲೆಯಲ್ಲಿ ಶವವನ್ನು ತರುವುದು ಅಷ್ಟು ಸುಲಭವಾಗಿರಲಿಲ್ಲ, ಈ ಹಿನ್ನಲೆ ಕೋಲಾರದ ವೆಂಕಟೇಶಯ್ಯ ಅವರ ಸಂಬಂಧಿಗಳು ಕೋಲಾರ ಸಂಸದ ಎಸ್.ಮುನಿಸ್ವಾಮಿ ಅವರನ್ನು ಸಂಪರ್ಕ ಮಾಡಿ ವಿಚಾರವನ್ನು ತಿಳಿಸಿ ಶವವನ್ನು ಕೋಲಾರಕ್ಕೆ ತರಲು ನೆರವಾಗುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ 17 ಶಾಸಕರಿಗೆ ಕಾಂಗ್ರೆಸ್ ಕಿರುಕುಳ ನೀಡುವ ಉದ್ದೇಶ‌ ಇಟ್ಟುಕೊಂಡಿದೆ: ಸಂಸದ ಮುನಿಸ್ವಾಮಿ

ಕುಟುಂಬಸ್ಥರ ಮನವಿಗೆ ಸ್ಪಂದಿಸಿದ ಸಂಸದ ಮುನಿಸ್ವಾಮಿ ಕೇಂದ್ರದ ವಿದೇಶಾಂಗ ಸಚಿವಾಲಯದ ಜೊತೆಗೆ ಸಂಪರ್ಕಿಸಿ ಮೃತರ ಶವ ಭಾರತಕ್ಕೆ ತರಲು ಇದ್ದ ಕಾನೂನು ತೊಡಕುಗಳನ್ನು ನಿವಾರಣೆ ಮಾಡಿದ್ದಾರೆ. ಸತತ ಹನ್ನೊಂದು ದಿನಗಳ ನಂತರ ಅಂದರೆ ನಾಳೆ(ಸೆ.04) ಮೃತ ವೆಂಕಟೇಶಯ್ಯ ಅವರ ಮೃತದೇಹವು ಭಾರತಕ್ಕೆ ಬರಲಿದೆ. ನಾಳೆ ರಾತ್ರಿ ವೇಳೆಗೆ ವೆಂಕಟೇಶಯ್ಯ ಪಾರ್ಥವ ಶರೀರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ಇನ್ನು ಇಂತ ಕಠಿಣ ಪರಿಸ್ಥಿತಿಯಲ್ಲಿ ಶೀಘ್ರವಾಗಿ ನಮಗೆ ಪ್ರತಿಕ್ರಿಯಿಸಿ ನಮಗೆ ನೆರವಾದ ಸಂಸದ ಮುನಿಸ್ವಾಮಿ ಅವರಿಗೆ ಮೃತರ ಕುಟುಂಬಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.‌ ನಾಳೆ ಕೋಲಾರಕ್ಕೆ ಪಾರ್ಥಿವ ಶರೀರ ಬಂದ ನಂತರ ಮಂಗಳವಾರ ಕೋಲಾರದ ಗಾಂಧಿನಗರದಲ್ಲಿ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ಸಕಲ‌ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು