AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳನ್ನು ನೋಡಲು ಅಮೆರಿಕಾಗೆ ಹೋದಾಗ ಸಾವು, ಭಾರತಕ್ಕೆ ಶವ ತರಲು ನೆರವಾದ ಕೋಲಾರ ಸಂಸದ ಮುನಿಸ್ವಾಮಿ

ವಯೋಸಹಜ ಕಾಯಿಲೆಯಿಂದ ಅಮೆರಿಕಾದಲ್ಲಿ ಮೃತಪಟ್ಟ ವೆಂಕಟೇಶಯ್ಯರ ಮೃತದೇಹವನ್ನು ಭಾರತಕ್ಕೆ ತರಲು ಕೋಲಾರ ಸಂಸದ ಮುನಿಸ್ವಾಮಿ ನೆರವಾಗಿದ್ದಾರೆ.ವೆಂಕಟೇಶಯ್ಯ ಅವರ ಮಗ ಸುರೇಶ್ ಕುಮಾರ್ ಹಾಗೂ ಇನ್ನೂ ಕೆಲವು ಸಂಬಂಧಿಕರು ಅಮೆರಿಕಾದ ಪೀಟರ್ಸ್ ಬರ್ಗ್ ನಲ್ಲಿ ನೆಲೆಸಿದ್ದರು. ಹೀಗಾಗಿ ಅಮೆರಿಕಾಕ್ಕೆ‌ ತೆರಳಿದ್ದ ವೆಂಕಟೇಶಯ್ಯ‌‌ ಅಮೆರಿಕಾಗೆ‌ ತೆರಳಿದ ಕೆಲವು ದಿನಗಳ ನಂತರ ಮೃತಪಟ್ಟಿದ್ದರು.

ಮಕ್ಕಳನ್ನು ನೋಡಲು ಅಮೆರಿಕಾಗೆ ಹೋದಾಗ ಸಾವು, ಭಾರತಕ್ಕೆ ಶವ ತರಲು ನೆರವಾದ ಕೋಲಾರ ಸಂಸದ ಮುನಿಸ್ವಾಮಿ
ಕೋಲಾರ ಸಂಸದ ಏಸ್​ ಮುನಿಸ್ವಾಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 03, 2023 | 10:51 AM

Share

ಕೋಲಾರ, ಸೆ.03: ತನ್ನ ಮಕ್ಕಳನ್ನು ನೋಡಿಕೊಂಡು ಬರಲು ಅಮೆರಿಕಾಕ್ಕೆ ತೆರಳಿದ್ದ ಕೋಲಾರ(Kolar) ಮೂಲದ ವ್ಯಕ್ತಿಯೊಬ್ಬರು ವಯೋಸಹಜ ಕಾಯಿಲೆಯಿಂದ ಅಮೆರಿಕಾದಲ್ಲಿ ಮೃತಪಟ್ಟಿದ್ದಾರೆ. ಕಳೆದ ಹನ್ನೊಂದು ದಿನಗಳ ಹಿಂದೆ ಅಂದರೆ ಆಗಸ್ಟ್ 23 ರಂದು ಕೋಲಾರದ ಗಾಂಧಿನಗರದ 91 ವರ್ಷದ ವೆಂಕಟೇಶಯ್ಯ ಮೃತಪಟ್ಟಿದ್ದು ಶವವನ್ನು ಭಾರತಕ್ಕೆ ತರಲು ಕುಟುಂಬಸ್ಥರು ಪರದಾಡುತ್ತಿದ್ದರು. ಸದ್ಯ ಕೋಲಾರ ಸಂಸದ ಮುನಿಸ್ವಾಮಿ(MP Muniswamy) ಅವರು ನೆರವಿನ ಹಸ್ತ ಚಾಚಿದ್ದು ನಾಳೆ ವೆಂಕಟೇಶಯ್ಯನವರ ಪಾರ್ಥಿವ ಶರೀರ ಭಾರತಕ್ಕೆ ಆಗಮಿಸಲಿದೆ. ಸಂಸದ ಮುನಿಸ್ವಾಮಿ ಅವರ ನೆರವಿಗಾಗಿ ಕುಟುಂಬಸ್ಥರು ಧನ್ಯವಾದ ತಿಳಿಸಿದ್ದಾರೆ.

ವೆಂಕಟೇಶಯ್ಯ ಅವರ ಮಗ ಸುರೇಶ್ ಕುಮಾರ್ ಹಾಗೂ ಇನ್ನೂ ಕೆಲವು ಸಂಬಂಧಿಕರು ಅಮೆರಿಕಾದ ಪೀಟರ್ಸ್ ಬರ್ಗ್ ನಲ್ಲಿ ನೆಲೆಸಿದ್ದರು. ಹೀಗಾಗಿ ಅಮೆರಿಕಾಕ್ಕೆ‌ ತೆರಳಿದ್ದ ವೆಂಕಟೇಶಯ್ಯ‌‌ ಅಮೆರಿಕಾಗೆ‌ ತೆರಳಿದ ಕೆಲವು ದಿನಗಳ ನಂತರ ಮೃತಪಟ್ಟಿದ್ದಾರೆ. ಆದರೆ ಅವರ ಅಂತ್ಯ ಸಂಸ್ಕಾರವನ್ನು ಕೋಲಾರದಲ್ಲೇ ಮಾಡಬೇಕು ಎಂದು ಕುಟುಂಬಸ್ಥರು ನಿರ್ಧಾರ ಮಾಡಿದ ಹಿನ್ನಲೆ ಮೃತ ವೆಂಕಟೇಶಯ್ಯ ಅವರ ಶವವನ್ನು ಕೋಲಾರಕ್ಕೆ ತರಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೊಂದು ಕಾನೂನು ತೊಡಕುಗಳು ಬಂದ ಹಿನ್ನಲೆಯಲ್ಲಿ ಶವವನ್ನು ತರುವುದು ಅಷ್ಟು ಸುಲಭವಾಗಿರಲಿಲ್ಲ, ಈ ಹಿನ್ನಲೆ ಕೋಲಾರದ ವೆಂಕಟೇಶಯ್ಯ ಅವರ ಸಂಬಂಧಿಗಳು ಕೋಲಾರ ಸಂಸದ ಎಸ್.ಮುನಿಸ್ವಾಮಿ ಅವರನ್ನು ಸಂಪರ್ಕ ಮಾಡಿ ವಿಚಾರವನ್ನು ತಿಳಿಸಿ ಶವವನ್ನು ಕೋಲಾರಕ್ಕೆ ತರಲು ನೆರವಾಗುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ 17 ಶಾಸಕರಿಗೆ ಕಾಂಗ್ರೆಸ್ ಕಿರುಕುಳ ನೀಡುವ ಉದ್ದೇಶ‌ ಇಟ್ಟುಕೊಂಡಿದೆ: ಸಂಸದ ಮುನಿಸ್ವಾಮಿ

ಕುಟುಂಬಸ್ಥರ ಮನವಿಗೆ ಸ್ಪಂದಿಸಿದ ಸಂಸದ ಮುನಿಸ್ವಾಮಿ ಕೇಂದ್ರದ ವಿದೇಶಾಂಗ ಸಚಿವಾಲಯದ ಜೊತೆಗೆ ಸಂಪರ್ಕಿಸಿ ಮೃತರ ಶವ ಭಾರತಕ್ಕೆ ತರಲು ಇದ್ದ ಕಾನೂನು ತೊಡಕುಗಳನ್ನು ನಿವಾರಣೆ ಮಾಡಿದ್ದಾರೆ. ಸತತ ಹನ್ನೊಂದು ದಿನಗಳ ನಂತರ ಅಂದರೆ ನಾಳೆ(ಸೆ.04) ಮೃತ ವೆಂಕಟೇಶಯ್ಯ ಅವರ ಮೃತದೇಹವು ಭಾರತಕ್ಕೆ ಬರಲಿದೆ. ನಾಳೆ ರಾತ್ರಿ ವೇಳೆಗೆ ವೆಂಕಟೇಶಯ್ಯ ಪಾರ್ಥವ ಶರೀರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದೆ. ಇನ್ನು ಇಂತ ಕಠಿಣ ಪರಿಸ್ಥಿತಿಯಲ್ಲಿ ಶೀಘ್ರವಾಗಿ ನಮಗೆ ಪ್ರತಿಕ್ರಿಯಿಸಿ ನಮಗೆ ನೆರವಾದ ಸಂಸದ ಮುನಿಸ್ವಾಮಿ ಅವರಿಗೆ ಮೃತರ ಕುಟುಂಬಸ್ಥರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.‌ ನಾಳೆ ಕೋಲಾರಕ್ಕೆ ಪಾರ್ಥಿವ ಶರೀರ ಬಂದ ನಂತರ ಮಂಗಳವಾರ ಕೋಲಾರದ ಗಾಂಧಿನಗರದಲ್ಲಿ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ಸಕಲ‌ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ