AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಬರೆದಿದ್ದರು ಫಲಿತಾಂಶ ಮಾತ್ರ ಸೊನ್ನೆ: ಬೆಂಗಳೂರು ಉತ್ತರ ವಿವಿ ಎಡವಟ್ಟು, ವಿದ್ಯಾರ್ಥಿಗಳಿಂದ ಪ್ರತಿಭಟನೆ

Kolar News: ಪರೀಕ್ಷೆ ಬರೆದಿದ್ದ ಬಹುತೇಕ ವಿದ್ಯಾರ್ಥಿನಿಯರ ಫಲಿತಾಂಶ ಅನುತ್ತೀರ್ಣ ಹಾಗೂ ಕಡಿಮೆ ಅಂಕಗಳು ಬಂದಿರುವ ಹಿನ್ನೆಲೆ ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ವಿಶ್ವ ವಿದ್ಯಾಲಯ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಪರೀಕ್ಷಾ ವಿಭಾಗದ ಅಧಿಕಾರಿಗಳ ಎಡವಟ್ಟಿನಿಂದ ಆಗಿರುವ ಅನಾಹುತ ಇದಾಗಿದ್ದು, ಕೂಡಲೇ ಸರಿಪಡಿಸುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಪರೀಕ್ಷೆ ಬರೆದಿದ್ದರು ಫಲಿತಾಂಶ ಮಾತ್ರ ಸೊನ್ನೆ: ಬೆಂಗಳೂರು ಉತ್ತರ ವಿವಿ ಎಡವಟ್ಟು, ವಿದ್ಯಾರ್ಥಿಗಳಿಂದ ಪ್ರತಿಭಟನೆ
ವಿದ್ಯಾರ್ಥಿಗಳಿಂದ ಪ್ರತಿಭಟನೆ
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಗಂಗಾಧರ​ ಬ. ಸಾಬೋಜಿ

Updated on: Aug 11, 2023 | 4:41 PM

ಕೋಲಾರ ಆಗಸ್ಟ್​ 11: ಈ ಮೊದಲು ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಹಳೆ ಚಾಳಿಯನ್ನ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಮುಂದುವರೆಸಿದೆಯಾ ಎನ್ನುವ ಅನುಮಾನ ಈಗ ಶುರುವಾಗಿದೆ. ಪರೀಕ್ಷೆ ಬರೆದಿದ್ದ ಬಹುತೇಕ ವಿದ್ಯಾರ್ಥಿನಿಯರ (Students) ಫಲಿತಾಂಶ ಅನುತ್ತೀರ್ಣ ಹಾಗೂ ಕಡಿಮೆ ಅಂಕಗಳು ಬಂದಿರುವ ಹಿನ್ನೆಲೆಯಲ್ಲಿ, ನಗರದ ಹೊರ ವಲಯದ ಟಮಕ ಬಳಿ ಇರುವ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಆಡಳಿತ ಕಚೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.

ಬಹುತೇಕ ವಿದ್ಯಾರ್ಥಿನಿಯರ ಫಲಿತಾಂಶ ಸೊನ್ನೆ

ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಕೋಲಾರ ನಗರದ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ವಿಶ್ವ ವಿದ್ಯಾಲಯ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಪರೀಕ್ಷೆ ಬರೆದಿದ್ದರೂ ಸಹ ಫಲಿತಾಂಶದಲ್ಲಿ ದೋಷಗಳು ಕಂಡು ಬಂದಿವೆ. ಬಹುತೇಕ ವಿದ್ಯಾರ್ಥಿನಿಯರ ಫಲಿತಾಂಶ ಸೊನ್ನೆ ಎಂದು ಬಂದಿದ್ದರೆ, ಮತ್ತೆ ಕೆಲವು ವಿದ್ಯಾರ್ಥಿನಿಯರ ಫಲಿತಾಂಶ 1,2, 3 ಎಂದು ಮಾರ್ಕ್ಸ್ ನೀಡಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಹೊಸ ರೂಪದೊಂದಿಗೆ ಕಾರ್ಯಾಚರಣೆಗೆ ಇಳಿದ ಹಳೆ ಕೆಎಸ್​​ಆರ್​ಟಿಸಿ ಬಸ್​ಗಳು

ಎಡವಟ್ಟು ಸರಿಪಡಿಸುವಂತೆ ಮನವಿ ಮಾಡಿದ ವಿದ್ಯಾರ್ಥಿನಿಯರ

ವಿದ್ಯಾವಿದ್ಯಾಲಯದ ಪರೀಕ್ಷಾ ವಿಭಾಗದ ಅಧಿಕಾರಿಗಳ ಎಡವಟ್ಟಿನಿಂದ ಆಗಿರುವ ಅನಾಹುತ ಇದಾಗಿದ್ದು, ಕೂಡಲೇ ಸರಿಪಡಿಸುವಂತೆ ವಿದ್ಯಾರ್ಥಿನಿಯರು ಪ್ರತಿಭಟಿಸಿದ್ದಾರೆ. ಬಹುತೇಕ ಬಿಕಾಂ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಹೀಗೆ ಲೋಪದೋಷವಾಗಿದ್ದು, ವಿಶ್ವವಿದ್ಯಾಲಯದ ಫಲಿತಾಂಶ ಪ್ರಾಧಿಕಾರದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಅಲ್ಲದೇ ಇವ್ಯಾಲುವೇಷನ್ ವೇಳೆ ನಡೆದಿರುವ ಎಡವಟ್ಟನ್ನು ಸರಿಪಡಿಸುವಂತೆ ಮನವಿ ಮಾಡಿದ್ದಾರೆ. ಸದ್ಯ ಕುಲಪತಿಗಳ ಅನುಮತಿ ಪಡೆದ ಆಗಿರುವ ತಪ್ಪಿನ ಬಗ್ಗೆ ಕೂಲಂಕುಶ ತನಿಖೆ ನಡೆಸಲು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಮುಂದಾಗಿರುವುದಾಗಿ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಬಸ್​ ನಿಲ್ಲಿಸದ ಹಿನ್ನೆಲೆ ಹೆದ್ದಾರಿ ತಡೆದು ಪ್ರತಿಭಟನೆ

ಉತ್ತರ ಕನ್ನಡ: ರಾಜ್ಯ ಹೆದ್ದಾರಿಯ ಅಸಮರ್ಪಕ ರಸ್ತೆಯಿಂದಾಗಿ ವಿದ್ಯಾರ್ಥಿಗಳಿಗೆ ಬಸ್ ನಿಲುಗಡೆ ಮಾಡದೇ ಕೆಎಸ್​ಆರ್​ಟಿಸಿ ಬಸ್ ತೆರಳುತ್ತಿರುವ ಹಿನ್ನಲೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಹಾವೇರಿ ಹೆದ್ದಾರಿ ತಡೆದು ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಕುಸಿತ; ಎಷ್ಟು ಗೊತ್ತಾ?

ಶಿರಸಿಯ ಬಿಸಲಕೊಪ್ಪ ಗ್ರಾಮಪಂಚಾಯ್ತಿ ವ್ಯಾಪ್ತಿಯ ಮಳಲಗಾಂವ್​ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಮತ್ತು ರೈತ ಸಂಘದ ಸದಸ್ಯರು ಶೀಘ್ರದಲ್ಲಿ ರಸ್ತೆ ಸರಿಪಡಿಸುವ ಜೊತೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಮಳಲಗಾಂವ್​ನಲ್ಲಿ ಬಸ್​ ಅನ್ನು ನಿಲ್ಲಿಸಬೇಕು. ಹೆದ್ದಾರಿಯಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸಬೇಕು ಎಂದು ಆಗ್ರಹಿಸಿದ್ದರು.

ಪ್ರತಿಭಟನೆ ಹಿನ್ನಲೆಯಲ್ಲಿ ಶಿರಸಿ-ಹಾವೇರಿ ಹೆದ್ದಾರಿ ಮಾರ್ಗದಲ್ಲಿ ಕೆಲವು ಸಮಯ ಸಂಚಾರ ವ್ಯವಸ್ಥೆ ಅಸ್ತವ್ಯಸ್ತವಾಗಿತ್ತು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕೆಎಸ್ಆರ್​ಟಿಸಿ ಅಧಿಕಾರಿಗಳು ಪ್ರತಿಭಟನಾಗಾರರಿಗೆ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ
ಊಟ ಕೊಡುವುದು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಧ್ವಂಸ