AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ರೈತರಿಗೆ ವಂಚನೆ, ಜಾಣ ಕುರುಡರಂತೆ ಕುಳಿತ ಕೃಷಿ ಇಲಾಖೆ

ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿ ಅಂಗಡಿಗಳಿಂದ ರೈತರಿಗೆ ವಂಚನೆಯಾಗುತ್ತಿದೆ ಎನ್ನಲಾಗುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿರುವ ರಸಗೊಬ್ಬರ ಅಂಗಡಿಗಳು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿವೆ. 270 ರೂ ಬೆಲೆಗೆ ಮಾರಾಟ ಮಾಡಬೇಕಾದ ಯೂರಿಯಾ ಗೊಬ್ಬರವನ್ನು 350 ರಿಂದ 400ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕೋಲಾರ: ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ರೈತರಿಗೆ ವಂಚನೆ, ಜಾಣ ಕುರುಡರಂತೆ ಕುಳಿತ ಕೃಷಿ ಇಲಾಖೆ
ರಾಘವೇಂದ್ರ ಆಗ್ರೋ ಟ್ರೇಡರ್ಸ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 06, 2023 | 2:19 PM

Share

ಕೋಲಾರ, ಸೆ.06: ರಸಗೊಬ್ಬರಕ್ಕೆ ವ್ಯಾಪಕ ಬೇಡಿಕೆ ಇರುವ ಕಾರಣ ಕೆಲ ಅಂಗಡಿಗಳು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿ ರೈತರಿಗೆ ವಂಚಿಸುತ್ತಿವೆ. ಜಿಲ್ಲೆಯಲ್ಲಿ ರಸಗೊಬ್ಬರ ಅಂಗಡಿಗಳಿಂದ ರೈತರಿಗೆ ವಂಚನೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. 270 ರೂ ಬೆಲೆಗೆ ಮಾರಾಟ ಮಾಡಬೇಕಾದ ಯೂರಿಯಾ ಗೊಬ್ಬರವನ್ನು 350 ರಿಂದ 400ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಕೃತಕ ಅಭಾವ ಸೃಷ್ಟಿಸಿ ರೈತರಿಂದ ಸುಲಿಗೆ ಮಾಡಲಾಗುತ್ತಿದೆ. ಯೂರಿಯಾ ಸರಬರಾಜಾಗುತ್ತಿಲ್ಲ ಎಂದು ಹೇಳಿ ರೈತರಿಗೆ ವಂಚನೆ ಮಾಡಲಾಗುತ್ತಿದೆ ಎಂದು ರೈತರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿರುವ ರಸಗೊಬ್ಬರ ಅಂಗಡಿಗಳು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿವೆ. ಗೌನಿಪಲ್ಲಿಯಲ್ಲಿರುವ ಪೆದ್ದೂರು ಮಂಜುನಾಥ್ ರೆಡ್ಡಿ ಮಾಲೀಕತ್ವದ ರಾಘವೇಂದ್ರ ಆಗ್ರೋ ಟ್ರೇಡರ್ಸ್​ನಲ್ಲಿ ಒಂದು ಮೂಟೆ ರಸಗೊಬ್ಬರಕ್ಕೆ 80 ರಿಂದ 130 ರೂಪಾಯಿ ಹೆಚ್ಚಳ ಮಾಡಿ ಮಾರಾಟ ಮಾಡಲಾಗುತ್ತಿದೆ. ಆಧಾರ್ ಕಾರ್ಡ್ ಇದ್ದರೆ ಒಂದು ಮೂಟೆ 350 ರೂ. ಆಧಾರ್ ಇಲ್ಲವೆಂದರೆ 400 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ರೈತರು ಬೆಳೆದ ಬೆಳೆಗಳಿಗೆ ಬೆಲೆ ಸಿಗದೆ ಕಂಗಾಲಾಗಿದ್ದರೂ ರೈತರ ಬಳಿ ಸುಲಿಗೆ ಮಾಡಲಾಗುತ್ತಿದೆ. ಎಲ್ಲಾ ಗೊತ್ತಿದ್ದು ಜಾಣ ಕುರುಡರಂತೆ ಕೃಷಿ ಇಲಾಖೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ರಸಗೊಬ್ಬರ ಹೆಸರಲ್ಲಿ ಸುಲಿಗೆ ಮಾಡುತ್ತಿರುವವರ ಮೇಲೆ‌ ಕ್ರಮ ಕೈಗೊಳ್ಳಿ ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ಕೋಟ್ಯಾಧಿಪತಿ ಮಾಡಿದ್ದ ಟೊಮೆಟೊ ಕೆಜಿಗೆ 15 ರೂ. ಕೋಲಾರದ ಎಪಿಎಂಸಿಯಲ್ಲಿ ಬೆಲೆ ಕಳೆದುಕೊಂಡ ಕೆಂಪು ಸುಂದರಿ

ಅಕ್ರಮ ಪಡಿತರ ಅಕ್ಕಿ ಸಾಗಾಟ,  150 ಕ್ವಿಂಟಾಲ್ ಜಪ್ತಿ

ಕೊಪ್ಪಳ ಜಿಲ್ಲೆ‌ ಮುನಿರಾಬಾದ್ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಅಕ್ರಮ ಪಡಿತರ ಅಕ್ಕಿ ಸಾಗಟ ಮಾಡುತ್ತಿದ್ದವರ  ಮೇಲೆ ದಾಳಿ ನಡೆಸಿ 150 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯಿಂದ ಹೊಸಪೇಟೆ ಕಡೆಗೆ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಮುನಿರಾಬಾದ್ ಬಳಿಯ NH50 ರಸ್ತೆಯಲ್ಲಿ ಪೊಲೀಸರು ದಾಳಿ ಮಾಡಿದ್ದು ಲಾರಿ ಸಮೇತ ಚಾಲಕ ಮಂಜುನಾಥ್​ನನ್ನು ಬಂಧಿಸಿದ್ದಾರೆ. ಅಂದಾಜು 3.45 ಲಕ್ಷ ಮೌಲ್ಯದ ಅಕ್ಕಿ, 8 ಲಕ್ಷ ಮೌಲ್ಯದ ಲಾರಿ ಜಪ್ತಿ ಮಾಡಲಾಗಿದೆ. ಬಂಧಿತ ಮಂಜುನಾಥ ಕುಂದೂರು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ನಿವಾಸಿ‌. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !