AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ರೈತರಿಗೆ ವಂಚನೆ, ಜಾಣ ಕುರುಡರಂತೆ ಕುಳಿತ ಕೃಷಿ ಇಲಾಖೆ

ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿ ಅಂಗಡಿಗಳಿಂದ ರೈತರಿಗೆ ವಂಚನೆಯಾಗುತ್ತಿದೆ ಎನ್ನಲಾಗುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿರುವ ರಸಗೊಬ್ಬರ ಅಂಗಡಿಗಳು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿವೆ. 270 ರೂ ಬೆಲೆಗೆ ಮಾರಾಟ ಮಾಡಬೇಕಾದ ಯೂರಿಯಾ ಗೊಬ್ಬರವನ್ನು 350 ರಿಂದ 400ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕೋಲಾರ: ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿ ರೈತರಿಗೆ ವಂಚನೆ, ಜಾಣ ಕುರುಡರಂತೆ ಕುಳಿತ ಕೃಷಿ ಇಲಾಖೆ
ರಾಘವೇಂದ್ರ ಆಗ್ರೋ ಟ್ರೇಡರ್ಸ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 06, 2023 | 2:19 PM

Share

ಕೋಲಾರ, ಸೆ.06: ರಸಗೊಬ್ಬರಕ್ಕೆ ವ್ಯಾಪಕ ಬೇಡಿಕೆ ಇರುವ ಕಾರಣ ಕೆಲ ಅಂಗಡಿಗಳು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡಿ ರೈತರಿಗೆ ವಂಚಿಸುತ್ತಿವೆ. ಜಿಲ್ಲೆಯಲ್ಲಿ ರಸಗೊಬ್ಬರ ಅಂಗಡಿಗಳಿಂದ ರೈತರಿಗೆ ವಂಚನೆಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. 270 ರೂ ಬೆಲೆಗೆ ಮಾರಾಟ ಮಾಡಬೇಕಾದ ಯೂರಿಯಾ ಗೊಬ್ಬರವನ್ನು 350 ರಿಂದ 400ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಕೃತಕ ಅಭಾವ ಸೃಷ್ಟಿಸಿ ರೈತರಿಂದ ಸುಲಿಗೆ ಮಾಡಲಾಗುತ್ತಿದೆ. ಯೂರಿಯಾ ಸರಬರಾಜಾಗುತ್ತಿಲ್ಲ ಎಂದು ಹೇಳಿ ರೈತರಿಗೆ ವಂಚನೆ ಮಾಡಲಾಗುತ್ತಿದೆ ಎಂದು ರೈತರು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿಯಲ್ಲಿರುವ ರಸಗೊಬ್ಬರ ಅಂಗಡಿಗಳು ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿವೆ. ಗೌನಿಪಲ್ಲಿಯಲ್ಲಿರುವ ಪೆದ್ದೂರು ಮಂಜುನಾಥ್ ರೆಡ್ಡಿ ಮಾಲೀಕತ್ವದ ರಾಘವೇಂದ್ರ ಆಗ್ರೋ ಟ್ರೇಡರ್ಸ್​ನಲ್ಲಿ ಒಂದು ಮೂಟೆ ರಸಗೊಬ್ಬರಕ್ಕೆ 80 ರಿಂದ 130 ರೂಪಾಯಿ ಹೆಚ್ಚಳ ಮಾಡಿ ಮಾರಾಟ ಮಾಡಲಾಗುತ್ತಿದೆ. ಆಧಾರ್ ಕಾರ್ಡ್ ಇದ್ದರೆ ಒಂದು ಮೂಟೆ 350 ರೂ. ಆಧಾರ್ ಇಲ್ಲವೆಂದರೆ 400 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ರೈತರು ಬೆಳೆದ ಬೆಳೆಗಳಿಗೆ ಬೆಲೆ ಸಿಗದೆ ಕಂಗಾಲಾಗಿದ್ದರೂ ರೈತರ ಬಳಿ ಸುಲಿಗೆ ಮಾಡಲಾಗುತ್ತಿದೆ. ಎಲ್ಲಾ ಗೊತ್ತಿದ್ದು ಜಾಣ ಕುರುಡರಂತೆ ಕೃಷಿ ಇಲಾಖೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ. ರಸಗೊಬ್ಬರ ಹೆಸರಲ್ಲಿ ಸುಲಿಗೆ ಮಾಡುತ್ತಿರುವವರ ಮೇಲೆ‌ ಕ್ರಮ ಕೈಗೊಳ್ಳಿ ಎಂದು ರೈತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ರೈತರನ್ನು ಕೋಟ್ಯಾಧಿಪತಿ ಮಾಡಿದ್ದ ಟೊಮೆಟೊ ಕೆಜಿಗೆ 15 ರೂ. ಕೋಲಾರದ ಎಪಿಎಂಸಿಯಲ್ಲಿ ಬೆಲೆ ಕಳೆದುಕೊಂಡ ಕೆಂಪು ಸುಂದರಿ

ಅಕ್ರಮ ಪಡಿತರ ಅಕ್ಕಿ ಸಾಗಾಟ,  150 ಕ್ವಿಂಟಾಲ್ ಜಪ್ತಿ

ಕೊಪ್ಪಳ ಜಿಲ್ಲೆ‌ ಮುನಿರಾಬಾದ್ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಅಕ್ರಮ ಪಡಿತರ ಅಕ್ಕಿ ಸಾಗಟ ಮಾಡುತ್ತಿದ್ದವರ  ಮೇಲೆ ದಾಳಿ ನಡೆಸಿ 150 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯಿಂದ ಹೊಸಪೇಟೆ ಕಡೆಗೆ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಮುನಿರಾಬಾದ್ ಬಳಿಯ NH50 ರಸ್ತೆಯಲ್ಲಿ ಪೊಲೀಸರು ದಾಳಿ ಮಾಡಿದ್ದು ಲಾರಿ ಸಮೇತ ಚಾಲಕ ಮಂಜುನಾಥ್​ನನ್ನು ಬಂಧಿಸಿದ್ದಾರೆ. ಅಂದಾಜು 3.45 ಲಕ್ಷ ಮೌಲ್ಯದ ಅಕ್ಕಿ, 8 ಲಕ್ಷ ಮೌಲ್ಯದ ಲಾರಿ ಜಪ್ತಿ ಮಾಡಲಾಗಿದೆ. ಬಂಧಿತ ಮಂಜುನಾಥ ಕುಂದೂರು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ತರ್ಲಘಟ್ಟ ನಿವಾಸಿ‌. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?