AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಮೃತ ಪುಷ್ಪಾ ಬರೆದಿರುವ ಡೆತ್​​ನೋಟ್ ಪತ್ತೆ

ಕೋಲಾರ: ಪೊಲೀಸರು ಹಾಗೂ ಗೀತಾ ಬಗ್ಗೆ ಡೆತ್​​ನೋಟ್​ನಲ್ಲಿ ಉಲ್ಲೇಖ ಮಾಡಲಾಗಿದೆ. ಗೀತಾ ವಂಚನೆ ಬಗ್ಗೆ ಪುಷ್ಪಾ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ. ಪುಷ್ಪಾ, ಗೀತಾ ಮಗು ಅಪಹರಣ ಪ್ರಕರಣದ ಆರೋಪಿಗಳಾಗಿದ್ದಾರೆ.

Kolar: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ; ಮೃತ ಪುಷ್ಪಾ ಬರೆದಿರುವ ಡೆತ್​​ನೋಟ್ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 09, 2021 | 3:58 PM

Share

ಕೋಲಾರ: ಇಲ್ಲಿ ನಡೆದ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತ ಪುಷ್ಪಾ ಎಂಬವರು ಬರೆದಿರುವ ಡೆತ್ ನೋಟ್ ಟಿವಿ9ಗೆ ಲಭ್ಯವಾಗಿದೆ. ಅದರಲ್ಲಿ ಪೊಲೀಸರ ಬೆದರಿಕೆ, ಕಿರುಕುಳದಿಂದ ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಹಾಗೂ ಗೀತಾ ಬಗ್ಗೆ ಡೆತ್​​ನೋಟ್​ನಲ್ಲಿ ಉಲ್ಲೇಖ ಮಾಡಲಾಗಿದೆ. ಗೀತಾ ವಂಚನೆ ಬಗ್ಗೆ ಪುಷ್ಪಾ ಪತ್ರದಲ್ಲಿ ವಿವರವಾಗಿ ಬರೆದಿದ್ದಾರೆ. ಪುಷ್ಪಾ, ಗೀತಾ ಮಗು ಅಪಹರಣ ಪ್ರಕರಣದ ಆರೋಪಿಗಳಾಗಿದ್ದಾರೆ.

ಗೀತಾ ಎಂಬಾಕೆ ಪುಷ್ಪಾ ಅವರ ಮಗುವನ್ನು 50 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಬಗ್ಗೆ ಉಲ್ಲೇಖಿಸಲಾಗಿದೆ. ಹಾಗೂ ಮಗುವನ್ನು ಮಾರಾಟ ಮಾಡಿರುವ ವಿಷಯ ಬಹಿರಂಗಪಡಿಸಿದರೆ ಮಗು ಹತ್ಯೆ ಬೆದರಿಕೆ ಒಡ್ಡಲಾಗಿದೆ. ಪುಷ್ಪಾ ಮಗಳನ್ನು ಕೊಲೆ ಮಾಡುವುದಾಗಿ ಗೀತಾ ಹೆದರಿಸಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಠಾಣೆಗೆ ಕರೆಸಿ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಗೋತ್ರಿ (17), ನಾರಾಯಣಮ್ಮ (60), ಬಾಬು (45), ಮುನಿಯಪ್ಪ (65) ಹಾಗೂ ಪುಷ್ಪಾ(33) ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ದುರ್ದೈವಿಗಳು. ಮೃತರು ಕೋಲಾರದ ಕಾರಂಜಿಕಟ್ಟೆ‌ ಬಡಾವಣೆ ನಿವಾಸಿಗಳಾಗಿದ್ದಾರೆ. ಮೊನ್ನೆಯಷ್ಟೇ ಈ ಐವರು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು. ಮಗು ಅಪಹರಣ ಕೇಸ್‌ ಸಂಬಂಧ ಹೆದರಿ ವಿಷ ಸೇವಿಸಿದ್ದರು. ಚಿಕಿತ್ಸೆ ಫಲಿಸದೆ ಒಬ್ಬರ ನಂತರ ಒಬ್ಬರಂತೆ ಐವರು ಸಾವನ್ನಪ್ಪಿದ್ದಾರೆ. ಗಲ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಗು ಅಪರಹಣ ಪ್ರಕರಣ; ಕೋಲಾರದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಒಂದೇ ಕುಟುಂಬದ ಐವರು ಸಾವು

ಇದನ್ನೂ ಓದಿ: ಕೋಲಾರ: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ; ಇಬ್ಬರ ಸ್ಥಿತಿ‌ ಚಿಂತಾಜನಕ

Published On - 3:56 pm, Tue, 9 November 21

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ