AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ತೀರಿಸಲು ತಂದೆಯಿಂದಲೇ ಮಗು ಮಾರಾಟ..? ಆರೋಪಿ ಪೊಲೀಸ್​ ವಶಕ್ಕೆ

ಒಂದು ಮಗುವನ್ನು ಹೆರಲು ತಾಯಿ ಪಡುವ ಕಷ್ಟ ಅಷ್ಟಿಷ್ಟಲ್ಲ, ಇಷ್ಟೇಲ್ಲ ಕಷ್ಟುಪಟ್ಟು ಹೆತ್ತ ಮಗುವನ್ನು ತಂದೆಯೇ ಇನ್ನೊಂದು ಮಹಿಳೆಗೆ ಮಾರಾಟ ಮಾಡಿರುವ ಆರೋಪ ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet)ಯಲ್ಲಿ ಕೇಳಿಬಂದಿದೆ. ಈ ಹಿನ್ನಲೆ ಕರಳು ಕುಡಿಯನ್ನು ಹುಡುಕಿ ಕೊಡುವಂತೆ ತಾಯಿ ಬಂಗಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಾಲ ತೀರಿಸಲು ತಂದೆಯಿಂದಲೇ ಮಗು ಮಾರಾಟ..? ಆರೋಪಿ ಪೊಲೀಸ್​ ವಶಕ್ಕೆ
ಮಗುವಿಗಾಗಿ ತಾಯಿಯ ಅಳಲು, ಆರೋಪಿ ತಂದೆ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 14, 2024 | 2:50 PM

Share

ಕೋಲಾರ, ಮೇ.14: ಸಾಲ ತೀರಿಸಲು ತಂದೆಯೇ ಗಂಡು ಮಗುವನ್ನು ಮಾರಾಟ ಮಾಡಿದ ಆರೋಪ ಕೋಲಾರ ಜಿಲ್ಲೆಯ ಬಂಗಾರಪೇಟೆ(Bangarapet)ಯಲ್ಲಿ ಕೇಳಿಬಂದಿದೆ. ಇದೀಗ ಮಗು ಮಾರಾಟ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಗಾರಪೇಟೆ ನಗರ ನಿವಾಸಿಗಳಾದ ಮುನಿರಾಜು ಹಾಗೂ ಪವಿತ್ರ ದಂಪತಿಗಳಿಗೆ 2023ರ ಜೂನ್ 21ರಂದು ಗಂಡು ಮಗು ಜನಿಸಿತ್ತು.

ಬಳಿಕ ಹಣದಾಸೆಗೆ ತಂದೆಯೇ ಕೆರೆಕೋಡಿ ನಿವಾಸಿಯ ವಲ್ಲಿ ಎಂಬ ಮಹಿಳೆಗೆ  ಮಗುವನ್ನು ಮಾರಾಟ ಮಾಡಿರುವ ಆರೋಪದ ಹಿನ್ನಲೆ ಮಗುವಿನ ತಾಯಿ ಪವಿತ್ರಾ ಅವರು ಮಗುವನ್ನ ವಾಪಸ್ ಕೊಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ , ಮಹಿಳಾ ಆಯೋಗ ಮತ್ತು ಬಂಗಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ದುಶ್ಚಟಗಳ ದಾಸನಾಗಿರುವ ಭಿಕ್ಷುಕ ತಂದೆಯಿಂದ ಹೆಣ್ಣು ಮಗು ಮಾರಾಟ, ಭಿಕ್ಷುಕ ದಂಪತಿಯನ್ನು ವಶಕ್ಕೆ ಪಡೆದ ಪೊಲೀಸ್

ಹಾಸನದಲ್ಲೂ ನಡೆದಿತ್ತು ಇಂತಹುದೇ ಅಮಾನವೀಯ ಘಟನೆ

ಇನ್ನು ಕಳೆದ ಜನವರಿ 4 ರಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಗ್ರಾಮದಲ್ಲಿ ತಾಯಿಯೊಬ್ಬರು ತನಗೆ ಹುಟ್ಟಿದ ಗಂಡು ಮಗುವನ್ನ ಜನಿಸಿದ ಒಂದೇ ದಿನಕ್ಕೆ ಅದ್ಯಾರದೋ ಒತ್ತಡಕ್ಕೆ ಸಿಲುಕಿ ಮಾರಾಟ ಮಾಡಿದ್ದ ಘಟನೆ ನಡೆದಿತ್ತು. ಜೊತೆಗೆ ಈ ಪ್ರಕರಣದಲ್ಲಿ ತಾಯಿ, ಆಶಾಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಲಾಗಿತ್ತು. ತಾಯಿಗೆ ಬೆದರಿಕೆ ಹಾಕಿ ಮಗುವನ್ನ ಮಾರಾಟ ಮಾಡಿದ ಬಗ್ಗೆಯೂ ಅನುಮಾನವಿದೆ ಎಂದು ಈ ಘಟನೆ ಕುರಿತು ಸಮಗ್ರ ತನಿಖೆಗೆ ಪೊಲೀಸರು ಮುಂದಾಗಿದ್ದರು.

ಇನ್ನು ಹೊಸಳ್ಳಿಯ ಸುಬ್ರಹ್ಮಣ್ಯ ಎಂಬುವವರ ಕಾಫಿ ತೋಟದ ಲೈನ್ ಮನೆಯಲ್ಲಿ ನೆಲೆಸಿದ್ದ ಮಹಿಳೆ ಗಿರಿಜಾ ಎಂಬುವವರಿಗೆ ನವೆಂಬರ್ 15ರಂದು ಹೆತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಗಂಡು ಮಗು ಜನಿಸಿತ್ತು. ಇದಾದ ಒಂದೇ ದಿನಕ್ಕೆ ಅಂದರೆ ನವೆಂಬರ್ 16ರಂದು ಚಿಕ್ಕಮಗಳೂರು ಮೂಲದ ಮಹಿಳೆಯೊಬ್ಬರಿಗೆ ಮಗುವನ್ನ ಮಾರಾಟ ಮಾಡಲಾಗಿದೆ ಎನ್ನೋ ಬಗ್ಗೆ ಅನುಮಾನ ವ್ಯಕ್ತಪಡಿಸಿ ಹಾಸನದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ದೂರೊಂದು ಬಂದಿತ್ತು. ಈ ಕುರಿತು ಆರೋಪಿಗಳೆಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಗುವನ್ನ ಕಾನೂನು ಬಾಹಿರವಾಗಿ ಹಸ್ತಾಂತರ ಮಾಡಲಾಗಿರುವ ಪ್ರಕರಣ ಬಯಲಾಗಿತ್ತು. ಇದೀಗ ಇಂತಹ ಪ್ರಕರಣ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Tue, 14 May 24

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?